Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:20 - ಪರಿಶುದ್ದ ಬೈಬಲ್‌

20 ನಿನ್ನನ್ನು ನಾನು ನನ್ನ ನಂಬಿಗಸ್ತಳಾದ ವಧುವನ್ನಾಗಿ ಮಾಡುವೆನು. ಆಗ ನೀನು ನನ್ನನ್ನು ನಿಜವಾಗಿಯೂ ಅರಿತುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಂಬಿಕೆಯಿಂದ ಸ್ವೀಕರಿಸುವೆನು ನಿನ್ನನು ಆಗ ನೀ ಅರಿತುಕೊಳ್ಳುವೆ ಸರ್ವೇಶ್ವರನಾದ ನನ್ನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ನಿನ್ನನ್ನು ನಂಬಿಗಸ್ತಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ಆಗ ನೀನು ಯೆಹೋವ ದೇವರನ್ನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:20
31 ತಿಳಿವುಗಳ ಹೋಲಿಕೆ  

ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ನಾವಾದರೋ ದೇವರಿಂದ ಬಂದವರು. ಆದ್ದರಿಂದ ದೇವರನ್ನು ಬಲ್ಲ ಜನರು ನಮಗೆ ಕಿವಿಗೊಡುತ್ತಾರೆ, ಆದರೆ ದೇವರಿಂದ ಬಂದಿಲ್ಲದ ಜನರು ನಮ್ಮ ಮಾತುಗಳನ್ನು ಕೇಳುವುದಿಲ್ಲ. ಯಾವುದು ಸತ್ಯವನ್ನು ಬೋಧಿಸುವ ಆತ್ಮ, ಯಾವುದು ಸುಳ್ಳನ್ನು ಬೋಧಿಸುವ ಆತ್ಮ ಎಂಬುದನ್ನು ಹೀಗೆ ತಿಳಿದುಕೊಳ್ಳುತ್ತೇವೆ.


ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ.


ಪ್ರಭುವಿಗೆ ಯೋಗ್ಯರಾಗಿ ನಡೆದು ಪ್ರತಿಯೊಂದು ವಿಷಯದಲ್ಲಿ ಆತನನ್ನು ಸಂತೋಷಪಡಿಸಬೇಕೆಂತಲೂ ನೀವು ಎಲ್ಲಾ ವಿಧವಾದ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ದೇವಜ್ಞಾನದಲ್ಲಿ ಬೆಳಯಬೇಕೆಂತಲೂ


ಆಗ ನಾನು (ಯೆಹೋವನು) ನಿನ್ನನ್ನು ಒಳ್ಳೆಯತನದಿಂದಲೂ ನ್ಯಾಯದಿಂದಲೂ ಪ್ರೀತಿಯಿಂದಲೂ ಕರುಣೆಯಿಂದಲೂ ಕೂಡಿರುವ ನಿರಂತರವಾದ ವಧುವನ್ನಾಗಿ ಮಾಡುವೆನು.


ಅಷ್ಟೇ ಅಲ್ಲ, ನನ್ನ ಪ್ರಭುವಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ಎಲ್ಲಾ ಸಂಗತಿಗಳಿಗಿಂತಲೂ ಅತಿಶ್ರೇಷ್ಠವಾದದ್ದೆಂದು ನನಗೆ ಮನದಟ್ಟಾಗಿದೆ. ನಾನು ಯಾವುದನ್ನು ಮುಖ್ಯವಾದವುಗಳೆಂದು ಪರಿಗಣಿಸಿದ್ದೆನೋ ಅವುಗಳನ್ನೆಲ್ಲ ಕ್ರಿಸ್ತನ ನಿಮಿತ್ತ ಕಳೆದುಕೊಂಡೆನು. ಅವುಗಳೆಲ್ಲ ನಿಷ್ಪ್ರಯೋಜಕವಾದವುಗಳೆಂದು ನನಗೆ ತಿಳಿದಿದೆ.


ಆದರೆ ನೀವು ಆತನನ್ನು ನಿಜವಾಗಿಯೂ ತಿಳಿದಿಲ್ಲ. ನಾನು ಆತನನ್ನು ಬಲ್ಲೆನು. ನಾನು ಆತನನ್ನು ತಿಳಿದಿಲ್ಲವೆಂದು ಹೇಳಿದರೆ ನಿಮ್ಮಂತೆ ನಾನು ಸಹ ಸುಳ್ಳುಗಾರನಾಗುತ್ತೇನೆ. ನಾನು ಆತನನ್ನು ಬಲ್ಲೆನು. ನಾನು ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.


“ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.


ನಾನು ಎಷ್ಟು ಶಕ್ತಿಶಾಲಿ ಎಂದು ತೋರಿಸುವೆನು. ನಾನು ಪವಿತ್ರನು ಎಂದು ಅವರಿಗೆ ತೋರಿಸುವೆನು. ಅನೇಕ ಜನಾಂಗಗಳು ನಾನು ಯಾರು ಎಂದು ತಿಳಿಯುವರು. ನಾನು ಯೆಹೋವನೆಂದು ಆಗ ಅವರು ತಿಳಿಯುವರು.


ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.


ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


“ನನ್ನ ತಂದೆಯು ಎಲ್ಲವನ್ನೂ ನನಗೆ ಕೊಟ್ಟಿದ್ದಾನೆ. ಮಗನು ಯಾರೆಂಬುದು ಯಾರಿಗೂ ಗೊತ್ತಿಲ್ಲ. ತಂದೆಯೊಬ್ಬನಿಗೇ ಗೊತ್ತಿದೆ. ತಂದೆಯು ಯಾರೆಂಬುದು ಮಗನಿಗೆ ಮಾತ್ರ ಗೊತ್ತಿದೆ. ಮಗನು ತಂದೆಯ ಬಗ್ಗೆ ಯಾರಿಗೆ ತಿಳಿಸುತ್ತಾನೋ ಅವರು ಮಾತ್ರ ತಂದೆಯ ಬಗ್ಗೆ ತಿಳಿದುಕೊಳ್ಳುವರು.”


“ನೀವು ಈಜಿಪ್ಟಿನಲ್ಲಿದ್ದ ದಿವಸಗಳಿಂದ ನಾನೇ ನಿಮ್ಮ ಯೆಹೋವನಾಗಿದ್ದೇನೆ. ನನ್ನ ಹೊರತು ಬೇರೆ ಯಾವ ದೇವರನ್ನೂ ನೀವು ತಿಳಿದಿರಲಿಲ್ಲ. ನನ್ನ ಹೊರತು ಬೇರೆ ಯಾವ ರಕ್ಷಕನೂ ಇಲ್ಲ.


ಯಾಕೆಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಞವಲ್ಲ. ಜನರು ತರುವ ಸರ್ವಾಂಗಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ.


ಒಬ್ಬನು ಸಹೋದರನಿಗಾಗಲಿ, ಬೇರೆಯವರಿಗಾಗಲಿ ಬೋಧಿಸಬೇಕಾಗಿರುವುದಿಲ್ಲ; ದೇವರನ್ನು ತಿಳಿದುಕೊಳ್ಳಿ ಎಂದು ಹೇಳಬೇಕಾಗಿರುವುದಿಲ್ಲ. ಏಕೆಂದರೆ ಅತ್ಯಂತ ಪ್ರಮುಖರನ್ನು ಮೊದಲುಗೊಂಡು ಅತ್ಯಂತ ಅಲ್ಪರಾದವರೆಲ್ಲರೂ ನನ್ನನ್ನು ತಿಳಿದುಕೊಂಡಿರುವರು.


ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. “ದೇವರ ಪ್ರಿಯ ಜನರು” ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು “ದೇವರ ಮದಲಗಿತ್ತಿ” ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ.


ಅವರು ನನ್ನನ್ನು ಸಂತೋಷಪಡಿಸುವರು. ಅವರಿಗೆ ಒಳ್ಳೆಯದನ್ನು ಮಾಡುವದರಲ್ಲಿ ನಾನು ಸಂತೋಷಪಡುವೆನು. ನಾನು ಖಂಡಿತವಾಗಿ ಅವರನ್ನು ಈ ದೇಶದಲ್ಲಿ ನೆಟ್ಟು ಬೆಳೆಯುವಂತೆ ಮಾಡುತ್ತೇನೆ. ಇದನ್ನು ನಾನು ಮನಃಪೂರ್ವಕವಾಗಿ ಮಾಡುತ್ತೇನೆ.’”


ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಾವೆಯೊಳಗಿಂದ ಬಂದ ಎಲ್ಲಾ ಪಕ್ಷಿಗಳಿಗೆ, ಎಲ್ಲಾ ಪಶುಗಳಿಗೆ ಮತ್ತು ಪ್ರಾಣಿಗಳಿಗೆ ನಾನು ವಾಗ್ದಾನ ಮಾಡುತ್ತೇನೆ. ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೆ ವಾಗ್ದಾನ ಮಾಡುತ್ತೇನೆ.


ಕಣತುಳಿಸುವ ಕೆಲಸವು ದ್ರಾಕ್ಷಿಯನ್ನು ಸಂಗ್ರಹಿಸುವ ಸಮಯದವರೆಗೂ ಮುಂದುವರಿಯುವುದು; ದ್ರಾಕ್ಷಿಯನ್ನು ಸಂಗ್ರಹಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ಮುಂದುವರಿಯುವುದು. ಆಗ ನಿಮಗೆ ಆಹಾರವು ಸಮೃದ್ಧಿಯಾಗಿರುವುದು; ನೀವು ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.


ನಾನು ನಿಮ್ಮ ದೇಶಕ್ಕೆ ಸಮಾಧಾನವನ್ನು ಅನುಗ್ರಹಿಸುವೆನು. ನೀವು ನಿರ್ಭಯವಾಗಿ ಮಲಗಿಕೊಳ್ಳುವಿರಿ. ನಿಮ್ಮನ್ನು ಭಯಪಡಿಸಲು ಯಾರೂ ಬರುವುದಿಲ್ಲ. ದುಷ್ಟಮೃಗಗಳು ನಿಮ್ಮ ದೇಶದಲ್ಲಿರದಂತೆ ಮಾಡುವೆ. ಶತ್ರುಸೈನ್ಯಗಳು ನಿಮ್ಮ ದೇಶದೊಳಕ್ಕೆ ಬರುವುದಿಲ್ಲ.


ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.


ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.


ನಾನು ನಿನ್ನೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವೆನು. ಮತ್ತು ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.


“ನಾನು ನನ್ನ ಕುರಿಗಳೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡುವೆನು. ಕೆಟ್ಟ ಕುರಿಗಳನ್ನು ನಾನು ದೇಶದೊಳಗಿಂದ ತೆಗೆದುಬಿಡುವೆನು. ಆಮೇಲೆ ನನ್ನ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು.


ಹೊಲದಲ್ಲಿ ಬೆಳೆಯುವ ಮರಗಳು ಫಲವನ್ನಿಯುವವು. ಭೂಮಿಯು ಬೆಳೆಯನ್ನು ಕೊಡುವದು. ಆಗ ಕುರಿಗಳು ಅವರ ದೇಶದಲ್ಲಿ ಸುರಕ್ಷಿತವಾಗಿರುವವು. ಅವರ ಮೇಲಿರುವ ನೊಗಗಳನ್ನು ನಾನು ಮುರಿದುಬಿಡುವೆನು. ಅವರನ್ನು ಗುಲಾಮರನ್ನಾಗಿ ಮಾಡಿದ ದೇಶದವರ ಶಕ್ತಿಯನ್ನೆ ಮುರಿಯುವೆನು. ನಾನು ಯೆಹೋವನೆಂದು ಆಗ ಅವರಿಗೆ ತಿಳಿಯುವದು.


ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.


ಅರಸನು ಹೀಗೆನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವಾರೂಢರಾದ ಸೈನಿಕರನ್ನೂ ನಾಶಮಾಡಿದೆನು; ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.” ಆ ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು