Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:9 - ಪರಿಶುದ್ದ ಬೈಬಲ್‌

9 ಆದ್ದರಿಂದ ನಾನು ಹಿಂತಿರುಗಿ ಬರುವೆನು. ನಾನು ಕೊಟ್ಟಿರುವ ಧಾನ್ಯವು ಕೊಯ್ಲಿಗೆ ತಯಾರಾದ ಅವಳಿಂದ ಅದನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ದ್ರಾಕ್ಷಿಹಣ್ಣು ಪಕ್ವವಾಗಿದ್ದಾಗ ನಾನು ಬಂದು ನನ್ನ ದ್ರಾಕ್ಷಾರಸವನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಕೊಟ್ಟಿರುವ ಉಣ್ಣೆ ಮತ್ತು ನಾರಿನ ಬಟ್ಟೆಯನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಅದನ್ನು ಅವಳಿಗೆ ತನ್ನ ಬೆತ್ತಲೆ ಶರೀರವನ್ನು ಮುಚ್ಚಿಕೊಳ್ಳುವದಕ್ಕೋಸ್ಕರ ಕೊಟ್ಟಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದಕಾರಣ ನಾನು ನನ್ನ ಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವುದಕ್ಕೆ ನಾನು ಕೊಟ್ಟ ಉಣ್ಣೆ, ನಾರುಗಳನ್ನು ಹಿಂತೆಗೆದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದಕಾರಣ ನಾನು ದವಸಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು. ಅವಳ ಮಾನವನ್ನು ಮುಚ್ಚುತ್ತಿದ್ದ ಉಣ್ಣೆಉಡಿಗೆಗಳನ್ನು ಹಿಂತೆಗೆದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದಕಾರಣ ನಾನು ನನ್ನ ಧಾನ್ಯದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವದಕ್ಕೆ ನಾನು ಕೊಟ್ಟ ಉಣ್ಣೆನಾರುಗಳನ್ನು ಕಿತ್ತುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆದ್ದರಿಂದ ನಾನು ತಿರುಗಿಕೊಂಡು, ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ, ನನ್ನ ದ್ರಾಕ್ಷಾರಸವನ್ನು ಅದರ ಸುಗ್ಗಿಯ ಸಮಯದಲ್ಲಿಯೂ ತೆಗೆದ ಹಾಗೆ, ಅವಳ ಬೆತ್ತಲೆತನವನ್ನು ಮುಚ್ಚವುದಕ್ಕಿದ್ದ ನನ್ನ ಉಣ್ಣೆಯನ್ನೂ, ನನ್ನ ನಾರುಬಟ್ಟೆಯನ್ನೂ ತೆಗೆದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:9
15 ತಿಳಿವುಗಳ ಹೋಲಿಕೆ  

ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ.


ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.


ಆಕೆ ವ್ಯಭಿಚಾರ ಮಾಡುವದನ್ನು ನಿಲ್ಲಿಸದೆ ಹೋದರೆ ನಾನು ಆಕೆಯನ್ನು ಬೆತ್ತಲೆ ಮಾಡಿ, ಆಕೆ ಜನ್ಮ ತಾಳಿದಾಗ ಹೇಗೆ ಇದ್ದಳೋ ಹಾಗೆ ಮಾಡುವೆನು. ಆಕೆಯ ಜನರನ್ನು ಆಕೆಯಿಂದ ತೊಲಗಿಸಿ ಆಕೆಯನ್ನು ಒಣ ಮರುಭೂಮಿಯಂತೆ ಬೆಂಗಾಡಾಗಿ ಮಾಡುವೆನು. ಆಕೆ ಬಾಯಾರಿ ಸಾಯುವಂತೆ ಮಾಡುವೆನು.


ಆಗ ಇತರ ಜನರು ಬಂದು ಅವರ ಐಶ್ವರ್ಯವನ್ನು ಸುಲುಕೊಂಡು ಅವರ ಮನೆಯನ್ನು ನಾಶಮಾಡುವರು. ಆ ಸಮಯಗಳಲ್ಲಿ ಮನೆಕಟ್ಟಿದ ಜನರು ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟವರು, ಅದರ ಹಣ್ಣಿನ ರಸವನ್ನು ಕುಡಿಯುವುದಿಲ್ಲ. ಬೇರೆಯವರು ಅದನ್ನು ಪಡೆದುಕೊಳ್ಳುವರು.”


ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ.


ಆದರೆ ಆ ಕಣದಲ್ಲಿ ತೂರಿದ ಧಾನ್ಯವು ಇಸ್ರೇಲಿಗೆ ಸಾಕಾಗುವಷ್ಟು ಆಹಾರವನ್ನು ಒದಗಿಸದು. ಇಸ್ರೇಲಿಗೆ ಬೇಕಾಗುವಷ್ಟು ದ್ರಾಕ್ಷಾರಸವಿರದು.


ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.


ಉತ್ತರದ ರಾಜನು ಇನ್ನೊಂದು ಸೈನ್ಯವನ್ನು ತೆಗೆದುಕೊಂಡು ಬರುವನು. ಈ ಸೈನ್ಯವು ಮೊದಲಿನ ಸೈನ್ಯಕ್ಕಿಂತ ದೊಡ್ಡದಾಗಿರುವದು. ಬಹಳ ವರ್ಷಗಳ ತರುವಾಯ ಅವನು ಧಾಳಿಮಾಡುವನು. ಆ ಸೈನ್ಯವು ಬಹಳ ದೊಡ್ಡದಾಗಿದ್ದು ಹಲವಾರು ಆಯುಧಗಳಿಂದ ಸುಸಜ್ಜಿತವಾಗಿರುವದು. ಆ ಸೈನ್ಯವು ಯುದ್ಧಕ್ಕೆ ಸಿದ್ಧವಾಗಿರುವದು.


ನಿನ್ನಲ್ಲಿರುವ ಉತ್ಕೃಷ್ಟವಾದ ಬಟ್ಟೆ, ಆಭರಣಗಳನ್ನೆಲ್ಲಾ ಸುಲುಕೊಳ್ಳುವರು.


ಆ ನಿನ್ನ ಪ್ರಿಯತಮರಿಗೆ ನಿನ್ನನ್ನು ಬಿಟ್ಟುಕೊಡುವೆನು. ಅವರು ನಿನ್ನ ದಿಬ್ಬಗಳನ್ನು ನಾಶಮಾಡುವರು ಮತ್ತು ಪೂಜಾಯಜ್ಞವೇದಿಕೆಗಳನ್ನು ಕೆಡವಿಹಾಕುವರು. ನಿನ್ನ ಬಟ್ಟೆಗಳನ್ನು ಕಿತ್ತುಕೊಳ್ಳುವರು ಮತ್ತು ಚಂದವಾದ ಆಭರಣಗಳನ್ನು ತೆಗೆದುಕೊಂಡು ಹೋಗುವರು. ಮತ್ತು ನಿನ್ನನ್ನು ಬೆತ್ತಲೆಯಾಗಿ ಮಾಡುವರು.


ಆಗ ನಾನು ನಿನ್ನನ್ನು ಶಿಕ್ಷಿಸಿದೆನು. ನಾನು ನಿನಗೆ ಕೊಟ್ಟ ದೇಶದಿಂದ ಸ್ವಲ್ಪ ಭಾಗವನ್ನು ಕಿತ್ತುಕೊಂಡೆನು. ನಿನ್ನ ಶತ್ರುಗಳಾದ ಫಿಲಿಷ್ಟಿಯರ ಹೆಣ್ಣುಮಕ್ಕಳು ನಿನ್ನೊಂದಿಗೆ ತಮಗೆ ಇಷ್ಟ ಬಂದಂತೆ ವರ್ತಿಸಲುಬಿಟ್ಟೆನು. ನಿನ್ನ ಕೆಟ್ಟಕಾರ್ಯಗಳನ್ನು ನೋಡಿ ಅವರೂ ಅಚ್ಚರಿಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು