Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 3:4 - ಪರಿಶುದ್ದ ಬೈಬಲ್‌

4 ಅದೇ ರೀತಿಯಲ್ಲಿ, ಇಸ್ರೇಲಿನ ಜನರು ಬಹಳ ದಿವಸಗಳ ತನಕ ಅರಸನಾಗಲಿ ಅಧಿಪತಿಯಾಗಲಿ ಇಲ್ಲದೆ ಇರುವರು. ಅವರು ಯಜ್ಞವಿಲ್ಲದೆ ಇರುವರು, ಸ್ಮಾರಕಸ್ತಂಭಗಳೂ ಇರುವದಿಲ್ಲ. ಅವರಲ್ಲಿ ಏಫೋದ್ ಇರುವದಿಲ್ಲ; ಅಲ್ಲದೆ ಮನೆದೇವತೆಯೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹ, ಇವುಗಳಿಲ್ಲದೆ ಇಸ್ರಾಯೇಲ್ಯರು ಬಹು ದಿವಸ ತಾಳಿಕೊಂಡಿರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 3:4
44 ತಿಳಿವುಗಳ ಹೋಲಿಕೆ  

ವಿಗ್ರಹಗಳನ್ನು ಪೂಜಿಸುವುದಕ್ಕಾಗಿ ಮೀಕನಿಗೆ ಒಂದು ಮಂದಿರವಿತ್ತು. ಮೀಕನು ಏಫೋದನ್ನೂ ವಿಗ್ರಹಗಳನ್ನೂ ಪೂಜಿಸಲು ತನ್ನ ಒಬ್ಬ ಮಗನನ್ನು ಅರ್ಚಕನನ್ನಾಗಿ ನೇಮಿಸಿದನು.


ಆ ಸಮಯದಲ್ಲಿ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅವನು ಇಲ್ಲದಿದ್ದಾಗ, ರಾಹೇಲಳು ಅವನ ಮನೆಯೊಳಗೆ ಹೋಗಿ, ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.


ನಾವು ಸತ್ಯವನ್ನು ತಿಳಿದುಕೊಂಡ ಮೇಲೆಯೂ ಪಾಪಗಳನ್ನು ಮಾಡುತ್ತಲೇ ಇದ್ದರೆ, ನಮ್ಮ ಪಾಪಗಳನ್ನು ಯಾವ ಯಜ್ಞವೂ ಪರಿಹರಿಸುವುದಿಲ್ಲ.


“ನಿತ್ಯಹೋಮವು ನಿಲ್ಲಿಸಲ್ಪಟ್ಟು ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಒಂದು ಸಾವಿರದ ಇನ್ನೂರ ತೊಂಭತ್ತು ದಿನಗಳು ಕಳೆಯಬೇಕು.


“ಆಗ ಭವಿಷ್ಯತ್ತಿನ ನಾಯಕನು ಬಹುಜನರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಆ ಒಪ್ಪಂದ ಒಂದು ವಾರದವರೆಗೆ ಮುಂದುವರೆಯುವದು. ಅರ್ಧವಾರದವರೆಗೆ ಯಜ್ಞ ಮತ್ತು ನೈವೇದ್ಯಗಳನ್ನು ನಿಲ್ಲಿಸಲಾಗುವುದು. ಒಬ್ಬ ಘಾತುಕನು ಬರುವನು. ಅವನು ಬಹುವಿನಾಶಕಾರಿ ಕೆಲಸಗಳನ್ನು ಮಾಡುವನು. ಆದರೆ ಆ ಘಾತುಕನನ್ನು ಮುಗಿಸಿಬಿಡಬೇಕೆಂದು ದೇವರ ಆಜ್ಞೆಯಾಗಿದೆ” ಎಂದು ಹೇಳಿದನು.


ಸೌಲನು ತನ್ನ ವಿರುದ್ಧವಾಗಿ ಉಪಾಯಗಳನ್ನು ಮಾಡುತ್ತಿದ್ದಾನೆಂಬುದು ದಾವೀದನಿಗೆ ತಿಳಿಯಿತು. ಆಗ ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಎಫೋದನ್ನು ತೆಗೆದುಕೊಂಡು ಬಾ” ಎಂದನು.


ಗಿದ್ಯೋನನು ಈ ಚಿನ್ನವನ್ನು ಒಂದು ಏಫೋದ್ ಮಾಡುವುದಕ್ಕೆ ಬಳಸಿದನು. ಆ ಏಫೋದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಇಸ್ರೇಲರು ಈ ಏಫೋದನ್ನು ಆರಾಧಿಸಿದರು. ಹೀಗಾಗಿ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಗಿದ್ಯೋನನನ್ನು ಮತ್ತು ಅವನ ಕುಟುಂಬದವರನ್ನು ಪಾಪಮಾರ್ಗಕ್ಕೆ ಎಳೆಯಲು ಏಫೋದ್ ಒಂದು ಉರುಲಾಗಿ ಪರಿಣಮಿಸಿತು.


ಅವರು ಮಾಡತಕ್ಕ ಬಟ್ಟೆಗಳು ಯಾವುವೆಂದರೆ: ದೈವನಿರ್ಣಯಕ ಪದಕ, ಏಫೋದು, ನೀಲಿಯ ನಿಲುವಂಗಿ, ಹೆಣೆದ ಬಿಳಿಯ ನಿಲುವಂಗಿ, ಮುಂಡಾಸು ಮತ್ತು ನಡುಕಟ್ಟು. ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಿಗೂ ಈ ವಿಶೇಷ ಬಟ್ಟೆಗಳನ್ನು ಅವರು ಮಾಡಬೇಕು. ಆಗ ಆರೋನನೂ ಅವನ ಗಂಡುಮಕ್ಕಳೂ ಯಾಜಕರಾಗಿ ನನ್ನ ಸೇವೆಮಾಡಬಹುದು.


ಯೆಹೂದ್ಯರು, “ಕೊಲ್ಲಿರಿ, ಕೊಲ್ಲಿರಿ; ಅವನನ್ನು ಶಿಲುಬೆಗೇರಿಸಿರಿ!” ಎಂದು ಕಿರುಚಿದರು. ಪಿಲಾತನು ಯೆಹೂದ್ಯರಿಗೆ, “ನಿಮ್ಮ ರಾಜನನ್ನು ಶಿಲುಬೆಗೇರಿಸಬೇಕೇ?” ಎಂದು ಕೇಳಿದನು. ಮಹಾಯಾಜಕರು, “ನಮಗಿರುವ ಒಬ್ಬನೇ ರಾಜನೆಂದರೆ ಸೀಸರ್!” ಎಂದು ಉತ್ತರಕೊಟ್ಟರು.


ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಈ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು.


ನಾನು ಕೋಪಗೊಂಡೆನು ಮತ್ತು ಒಬ್ಬ ಅರಸನನ್ನು ಕೊಟ್ಟೆನು. ನಾನು ಹೆಚ್ಚಾಗಿ ಕೋಪಗೊಂಡಾಗ ಅವನನ್ನು ತೆಗೆದುಬಿಟ್ಟೆನು.


ನಾನು (ದೇವರು) ಆಕೆಯ ಉಲ್ಲಾಸಗಳನ್ನು ಅವಳಿಂದ ತೆಗೆಯುವೆನು. ಆಕೆಯ ಹಬ್ಬದ ದಿನಗಳು, ಅಮಾವಾಸ್ಯೆಯ ಹಬ್ಬ, ಸಬ್ಬತ್ ದಿನಗಳನ್ನು ಆಕೆಯಿಂದ ತೆಗೆದುಬಿಡುವೆನು.


ಉತ್ತರದ ರಾಜನು ಜೆರುಸಲೇಮಿನ ಪವಿತ್ರಾಲಯವನ್ನು ಹೊಲಸು ಮಾಡಲು ತನ್ನ ಸೈನಿಕರನ್ನು ಕಳುಹಿಸುವನು. ದೈನಂದಿನ ಯಜ್ಞಗಳನ್ನು ಅರ್ಪಿಸದಂತೆ ಅವರು ತಡೆಯುವರು. ಆಮೇಲೆ ಅವರು ವಿನಾಶಕಾರಿಯಾದ ಅಸಹ್ಯ ವಸ್ತುವನ್ನು ಪ್ರತಿಷ್ಠಾಪಿಸುವರು.


ಇದರ ಅರ್ಥವೇನೆಂದರೆ, ರಸ್ತೆಯು ಶಾಖೆಗಳಾಗಿ ಒಡೆಯುವ ಸ್ಥಳದಲ್ಲಿ ಬಾಬಿಲೋನಿನ ರಾಜನು ಶಕುನವನ್ನು ಕೇಳಲು ನಿಂತಿದ್ದಾನೆ. ಅವನು ಕೆಲವು ಬಾಣಗಳನ್ನು ಅಲುಗಾಡಿಸಿದ್ದಾನೆ. ಅವನು ಕೆಲವು ಬಾಣಗಳನ್ನು ಚದರಿಸಿ, ತನ್ನ ವಂಶದ ವಿಗ್ರಹಗಳಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು, ಮತ್ತು ತಾನು ಕೊಂದ ಪ್ರಾಣಿಯ ಕಾಳಿಜವನ್ನು ನೋಡಿದನು.


ನಾವು ಮರದ ಮತ್ತು ಕಲ್ಲಿನ ವಸ್ತುಗಳನ್ನು ಪೂಜಿಸುತ್ತಾ ಇತರ ಜನಾಂಗಗಳಂತೆ ಇರೋಣ ಎಂದು ನೀವು ಯೋಚಿಸುತ್ತಲೇ ಇರುತ್ತೀರಿ. ನಿಮ್ಮ ಮನಸ್ಸುಗಳಲ್ಲಿರುವ ಈ ಆಲೋಚನೆಯು ಎಂದಿಗೂ ನೆರವೇರುವುದಿಲ್ಲ.’”


ಯೋಷೀಯನು ಮಾಂತ್ರಿಕರನ್ನು, ತಾಂತ್ರಿಕರನ್ನು, ಮನೆಯ ದೇವರುಗಳನ್ನು, ವಿಗ್ರಹಗಳನ್ನು, ಯೆಹೂದದಲ್ಲಿ ಮತ್ತು ಜೆರುಸಲೇಮಿನಲ್ಲಿ ಜನರು ಪೂಜಿಸುತ್ತಿದ್ದ ತೆರಾಫೀಮ್ ಎಂಬ ಗೊಂಬೆಗಳನ್ನು ನಾಶಪಡಿಸಿದನು. ಯಾಜಕನಾದ ಹಿಲ್ಕೀಯನಿಗೆ ದೇವಾಲಯದಲ್ಲಿ ಸಿಕ್ಕಿದ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳಿಗೆ ವಿಧೇಯನಾಗಿರಲು ಯೋಷೀಯನು ಹೀಗೆ ಮಾಡಿದನು.


ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ತನ್ನ ಶಕ್ತಿಮೀರಿ ನರ್ತಿಸಿದನು. ಅವನು ಏಫೋದನ್ನು ಧರಿಸಿದ್ದನು.


ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದನು. ಅವನು ಎಫೋದನ್ನು ತಂದನು.


(ಎಬ್ಯಾತಾರನು ದಾವೀದನ ಹತ್ತಿರಕ್ಕೆ ಓಡಿಹೋದಾಗ ತನ್ನೊಂದಿಗೆ ಒಂದು ಏಫೋದನ್ನು ತೆಗೆದುಕೊಂಡಿದ್ದನು.)


ಆದ್ದರಿಂದ ರಾಜನು ದೋಯೇಗನಿಗೆ, “ನೀನು ಹೋಗಿ ಯಾಜಕರನ್ನು ಕೊಂದುಹಾಕು” ಎಂದು ಹೇಳಿದನು. ಆದ್ದರಿಂದ ಎದೋಮ್ಯನಾದ ದೋಯೇಗನು ಹೋಗಿ ಆ ದಿನ ಎಂಭತ್ತೈದು ಮಂದಿ ಯಾಜಕರನ್ನು ಕೊಂದನು.


ಯಾಜಕನು, “ಇಲ್ಲಿರುವುದು ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವೊಂದೇ. ಏಲಾ ಕಣಿವೆಯಲ್ಲಿ ನೀನು ಅವನನ್ನು ಕೊಂದು ಅವನಿಂದ ನೀನು ಕಿತ್ತುಕೊಂಡ ಖಡ್ಗವೇ ಅದು. ಆ ಖಡ್ಗವನ್ನು ಬಟ್ಟೆಯಲ್ಲಿ ಸುತ್ತಿ ಎಫೋದಿನ ಹಿಂಭಾಗದಲ್ಲಿ ಇಟ್ಟಿದೆ. ನಿನಗೆ ಬೇಕಿದ್ದರೆ ಅದನ್ನು ತೆಗೆದುಕೋ” ಎಂದು ಉತ್ತರಿಸಿದನು. ದಾವೀದನು, “ಅದನ್ನು ನನಗೆ ಕೊಡು. ಗೊಲ್ಯಾತನ ಖಡ್ಗಕ್ಕೆ ಸಮನಾದ ಬೇರೊಂದು ಖಡ್ಗವಿಲ್ಲ!” ಎಂದನು.


ಅವರಲ್ಲಿ ಅಹೀಯನೂ ಒಬ್ಬನು. ಶೀಲೋವಿನಲ್ಲಿ ಏಲಿಯು ಯೆಹೋವನ ಯಾಜಕನಾಗಿದ್ದನು. ಏಫೋದನ್ನು ಧರಿಸಿದ್ದ ಅಹೀಯನು ಆಗ ಅಲ್ಲಿ ಯಾಜಕನಾಗಿದ್ದನು. ಅಹೀಯನು ಈಕಾಬೋದನ ಸೋದರನಾದ ಅಹೀಟೂಬನ ಮಗ. ಈಕಾಬೋದನು ಫೀನೆಹಾಸನ ಮಗ. ಫೀನೆಹಾಸನು ಏಲಿಯ ಮಗ. ಯೋನಾತಾನನು ಹೊರಟುಹೋದನೆಂಬುದು ಜನರಿಗೆ ಗೊತ್ತಿರಲಿಲ್ಲ.


ಆದರೆ ಬಾಲಕನಾದ ಸಮುವೇಲನು ಏಫೋದ್ ಎಂಬ ನಾರುಬಟ್ಟೆಯನ್ನು ಧರಿಸಿ ಯೆಹೋವನ ಸೇವೆ ಮಾಡುತ್ತಿದ್ದನು.


ನಿಲುವಂಗಿಯನ್ನು ಆರೋನನಿಗೆ ತೊಡಿಸಿದನು; ನಡುಕಟ್ಟನ್ನು ಕಟ್ಟಿದನು; ಮೇಲಂಗಿಯನ್ನು ತೊಡಿಸಿದನು. ಏಫೋದನ್ನು ಹಾಕಿಸಿ ಕವಚದ ಮೇಲಿನ ವಿಶೇಷವಾದ ನಡುಕಟ್ಟನ್ನು ಕಟ್ಟಿದನು; ಎದೆಕವಚವನ್ನು ಬಿಗಿದನು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ರಾಹೇಲಳು ಆ ವಿಗ್ರಹಗಳನ್ನು ತನ್ನ ಒಂಟೆಯ ಸಬರದೊಳಗಿಟ್ಟು ಅದರ ಮೇಲೆ ಕುಳಿತುಕೊಂಡಿದ್ದಳು. ಲಾಬಾನನು ಇಡೀ ಗುಡಾರವನ್ನು ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಿಲ್ಲ.


ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡಲು ಹೋಗಿದ್ದ ಐದು ಜನರು ತಮ್ಮ ಬಂಧುಗಳಿಗೆ, “ಇಲ್ಲಿಯ ಒಂದು ಮನೆಯಲ್ಲಿ ಏಫೋದ್ ಇದೆ; ಮನೆದೇವರುಗಳೂ ಇವೆ. ಕೆತ್ತಿ ಮಾಡಿರುವ ಒಂದು ವಿಗ್ರಹವೂ ಇದೆ. ಈಗ ನೀವು ಹೋಗಿ ಅವುಗಳನ್ನು ತೆಗೆದುಕೊಂಡು ಬನ್ನಿರಿ” ಎಂದು ಹೇಳಿದರು.


ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.


ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಹೋಗಿವೆ. ಆತನು ಹೆಬ್ಬಾಗಿಲುಗಳ ಸರಳುಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.


ನಿನ್ನ ಅರಸನೆಲ್ಲಿ? ನಿನ್ನ ಯಾವ ಪಟ್ಟಣದಲ್ಲಿಯಾಗಲಿ ಅವನು ನಿನ್ನನ್ನು ರಕ್ಷಿಸಲಾರ. ನಿನ್ನ ನ್ಯಾಯಾಧೀಶರುಗಳೆಲ್ಲಿ? ನೀನು, ‘ನಮಗೆ ರಾಜನನ್ನೂ ನಾಯಕರನ್ನೂ ಕೊಡು’ ಎಂದು ಕೇಳಿಕೊಂಡೆ.


ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.


“ಏಫೋದನ್ನು ಚಿನ್ನದ ದಾರಗಳು, ನಾರಿನಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಿ ಚಾಣಾಕ್ಷತೆಯಿಂದ ಹೆಣೆದು ತಯಾರಿಸಬೇಕು.


ಅದರ ಸ್ವಂತ ಕಾಂಡದಿಂದಲೇ ಬೆಂಕಿಯು ಹೊರಟುಬಂದು ಅದರ ಚಿಕ್ಕ ಕೊಂಬೆಗಳನ್ನು ಮತ್ತು ಫಲಗಳನ್ನು ನಾಶಮಾಡಿತು. ಈಗ ಬಲವಾದ ಕಾಂಡ ಅದರಲ್ಲಿಲ್ಲ. ಆಳುವದಕ್ಕೆ ರಾಜದಂಡವೂ ಅದರಲ್ಲಿಲ್ಲ.’ ಇದು ಮರಣದ ಶೋಕಗೀತೆ. ಇದನ್ನು ಶೋಕಗೀತೆಯನ್ನಾಗಿಯೇ ಬಳಸಲಾಗುತ್ತಿದೆ.”


ನಿನ್ನ ಮೇಲೆ ನನ್ನ ರೌದ್ರವನ್ನು ಸುರಿಸುವೆನು. ನನ್ನ ರೌದ್ರವು ಬಿಸಿಗಾಳಿಯಂತೆ ನಿನ್ನನ್ನು ಸುಡುವದು. ನಾನು ನಿನ್ನನ್ನು ಕ್ರೂರ ಮನುಷ್ಯರ ಕೈಗೆ ಒಪ್ಪಿಸುವೆನು. ಅವರು ಜನರನ್ನು ಕೊಲ್ಲುವುದರಲ್ಲಿ ನಿಪುಣರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು