Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:12 - ಪರಿಶುದ್ದ ಬೈಬಲ್‌

12 ನನ್ನ ಜನರು ಮರದ ತುಂಡುಗಳಿಂದ ಸಲಹೆಗಳನ್ನು ಕೇಳುವರು. ಆ ಮರದ ತುಂಡುಗಳು ಅವರಿಗೆ ಉತ್ತರಿಸುವವು ಎಂದು ಅವರು ನೆನಸುತ್ತಾರೆ. ಯಾಕೆಂದರೆ, ವೇಶ್ಯೆಯರಂತೆ ಅವರು ಆ ಸುಳ್ಳು ದೇವರುಗಳನ್ನು ಹಿಂದಟ್ಟಿಕೊಂಡು ಹೋಗುವರು. ಅವರು ತಮ್ಮ ದೇವರುಗಳನ್ನು ಬಿಟ್ಟು ವೇಶ್ಯೆಯರಂತೆ ವರ್ತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ. ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನನ್ನ ಜನರು ಮರದ ತುಂಡನ್ನು ಹಿಡಿದು ಕಣಿ ಕೇಳುತ್ತಾರೆ; ಕೈಯಲ್ಲಿ ಹಿಡಿದ ದೊಣ್ಣೆಯಿಂದ ವಿವೇಕವಾಣಿಯನ್ನು ಪಡೆಯಲೆತ್ನಿಸುತ್ತಾರೆ. ವ್ಯಭಿಚಾರಗುಣ ಅವರನ್ನು ತಪ್ಪುದಾರಿಗೆ ಎಳೆದಿದೆ. ದೇವರ ಸದ್ಭಕ್ತಿಯನ್ನು ತೊರೆದು ಅವರು ಧರ್ಮಭ್ರಷ್ಠರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ಜನರು ತಮ್ಮ ಮರದ ತುಂಡನ್ನು ಪ್ರಶ್ನೆ ಕೇಳುತ್ತಾರೆ, ಅವರ ಕೋಲು ಅವರಿಗೆ ಅರುಹನ್ನು ಉಂಟುಮಾಡುತ್ತದೆ; ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:12
25 ತಿಳಿವುಗಳ ಹೋಲಿಕೆ  

ಇಸ್ರೇಲಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆ ದುಷ್ಕೃತ್ಯಗಳು ಅವರನ್ನು ತಮ್ಮ ದೇವರ ಬಳಿಗೆ ಹಿಂತಿರುಗಿ ಬಾರದಂತೆ ಮಾಡುತ್ತಿವೆ. ಅವರು ಯಾವಾಗಲೂ ಇತರ ದೇವರುಗಳ ಹಿಂದೆ ಹೇಗೆ ಹೋಗೋಣ ಎಂದು ಮಾರ್ಗವನ್ನು ಹುಡುಕುತ್ತಿದ್ದಾರೆ. ಅವರಿಗೆ ಯೆಹೋವನ ಪರಿಚಯವಿಲ್ಲ.


ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.


ಆ ಮೂರ್ತಿಗೆ “ಎದ್ದೇಳು” ಎಂದು ಹೇಳುವವನಿಗೆ ಕೇಡಾಗುವುದು! ಮಾತಾಡಲಾಗದ ಒಂದು ಕಲ್ಲಿಗೆ “ಎಚ್ಚರವಾಗು” ಎಂದು ಹೇಳುವವನಿಗೆ ಕೇಡಾಗುವುದು! ಅವುಗಳು ಅವನಿಗೆ ಸಹಾಯ ಮಾಡುವದಿಲ್ಲ. ಮಾಡಲಿಕ್ಕಾಗುವದೂ ಇಲ್ಲ. ಆ ವಿಗ್ರಹಗಳನ್ನು ಬೆಳ್ಳಿಬಂಗಾರದಿಂದ ಹೊದಿಸಿದರೂ ಆ ವಿಗ್ರಹಗಳಲ್ಲಿ ಜೀವವಿಲ್ಲ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.


ಈ ಗೊಂಡೆಗಳನ್ನು ನೀವು ನೋಡುವಾಗ, ಯೆಹೋವನು ನಿಮಗೆ ಕೊಟ್ಟ ಅಪ್ಪಣೆಗಳನ್ನೆಲ್ಲ ಜ್ಞಾಪಕಮಾಡಿಕೊಳ್ಳಬೇಕು ಮತ್ತು ಅವುಗಳಿಗೆ ವಿಧೇಯರಾಗಬೇಕು. ನೀವು ನಿಮ್ಮ ಮನಸ್ಸಿಗೆ ಮತ್ತು ಕಣ್ಣಿಗೆ ತೋರಿದ ಪ್ರಕಾರ ನಡೆಯದೆ ನಂಬಿಗಸ್ತರಾಗಿರಬೇಕು.


ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.


ಇಸ್ರೇಲೇ, ಇತರ ಜನಾಂಗಗಳವರಂತೆ ಹಬ್ಬವನ್ನು ಆಚರಿಸಬೇಡ, ಉಲ್ಲಾಸಗೊಳ್ಳಬೇಡ. ನೀನು ವೇಶ್ಯೆಯಂತೆ ವರ್ತಿಸಿ ನಿನ್ನ ದೇವರನ್ನು ತೊರೆದುಬಿಟ್ಟೆ. ಪ್ರತಿಯೊಂದು ಕಣದ ಮೇಲೆ ಲೈಂಗಿಕ ಪಾಪವನ್ನು ನಡೆಸಿದಿ.


ಇದರ ಅರ್ಥವೇನೆಂದರೆ, ರಸ್ತೆಯು ಶಾಖೆಗಳಾಗಿ ಒಡೆಯುವ ಸ್ಥಳದಲ್ಲಿ ಬಾಬಿಲೋನಿನ ರಾಜನು ಶಕುನವನ್ನು ಕೇಳಲು ನಿಂತಿದ್ದಾನೆ. ಅವನು ಕೆಲವು ಬಾಣಗಳನ್ನು ಅಲುಗಾಡಿಸಿದ್ದಾನೆ. ಅವನು ಕೆಲವು ಬಾಣಗಳನ್ನು ಚದರಿಸಿ, ತನ್ನ ವಂಶದ ವಿಗ್ರಹಗಳಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು, ಮತ್ತು ತಾನು ಕೊಂದ ಪ್ರಾಣಿಯ ಕಾಳಿಜವನ್ನು ನೋಡಿದನು.


ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ.


ನಿನ್ನನ್ನು ತೊರೆದುಬಿಟ್ಟವರು ನಾಶವಾಗುವರು. ನಿನಗೆ ದ್ರೋಹಮಾಡಿದವರನ್ನೆಲ್ಲ ನೀನು ನಾಶಮಾಡುವೆ.


ಇಸ್ರೇಲರ ರಾಜರುಗಳು ಜೀವಿಸಿದ್ದ ರೀತಿಯಲ್ಲಿ ನೀನು ಜೀವಿಸುತ್ತಿರುವೆ. ಯೆಹೂದ ದೇಶದಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವ ಜನರು ನನ್ನ ಚಿತ್ತಕ್ಕನುಸಾರವಾಗಿ ಜೀವಿಸದಂತೆ ನೀನು ಮಾಡುತ್ತಿರುವೆ. ಅಹಾಬನೂ ಅವನ ಕುಟುಂಬದವರೂ ಹೀಗೆಯೇ ಮಾಡಿದರು. ಅವರು ದೇವರಿಗೆ ಅಪನಂಬಿಗಸ್ತರಾಗಿದ್ದರು. ನೀನು ನಿನ್ನ ತಮ್ಮಂದಿರನ್ನು ಕೊಂದುಹಾಕಿದೆ. ಅವರು ನಿನಗಿಂತಲೂ ಉತ್ತಮರಾಗಿದ್ದರು.


ನಾನು ಅವನಿಗೂ ಅವನ ಕುಟುಂಬಕ್ಕೂ ವಿರುದ್ಧನಾಗಿರುವೆನು; ನಾನು ಅವನನ್ನು ಅವನ ಜನರಿಂದ ಬೇರ್ಪಡಿಸುವೆನು. ಮೊಲೆಕನೊಡನೆ ಸೂಳೆತನ ಮಾಡುವ ಅವನನ್ನೂ ಅವನ ಹಿಂಬಾಲಕರನ್ನೂ ಅವರ ಜನರಿಂದ ಬೇರ್ಪಡಿಸುವೆನು.


ಅವರು “ಅಜದೇವತೆಗಳಿಗೆ” ಇನ್ನು ಮುಂದೆ ಬಲಿಕೊಡಬಾರದು. ಅವರು ಅನ್ಯದೇವತೆಗಳ ಹಿಂದೆ ಹೋಗಿದ್ದಾರೆ. ಆ ರೀತಿಯಲ್ಲಿ ಅವರು ಸೂಳೆಯರ ಹಾಗೆ ವರ್ತಿಸಿದ್ದಾರೆ. ಈ ನಿಯಮಗಳು ಶಾಶ್ವತವಾಗಿವೆ.


ತಮ್ಮ ಪಾಪಕೃತ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯಜನರು ಮಾಡಿದವುಗಳನ್ನು ಮಾಡಿದರು.


ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”


ಅವರು ಅವನಿಗೆ, “ವಾಸಕ್ಕಾಗಿ ಭೂಮಿಯನ್ನು ಹುಡುಕಲು ಕೈಕೊಂಡ ನಮ್ಮ ಪ್ರಯಾಣ ಸಫಲವಾಗುವುದೋ ಇಲ್ಲವೋ ಎಂಬುದನ್ನು ನಾವು ತಿಳಿದುಕೊಳ್ಳಬೇಕಾಗಿದೆ. ದಯವಿಟ್ಟು ದೇವರಲ್ಲಿ ಈ ವಿಷಯ ಕೇಳು” ಎಂದು ಕೇಳಿಕೊಂಡರು.


ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ಪಾಪಗಳನ್ನು ಮಾಡಿದ್ದರಿಂದ ಇವೆಲ್ಲವೂ ಸಂಭವಿಸಿದವು. ಈಜಿಪ್ಟಿನ ರಾಜನಾದ ಫರೋಹನ ಆಳ್ವಿಕೆಯಿಂದ ಇಸ್ರೇಲರನ್ನು ತಪ್ಪಿಸಿ ಯೆಹೋವನು ಅವರನ್ನು ಈಜಿಪ್ಟ್ ದೇಶದಿಂದ ಹೊರತಂದಿದ್ದನು. ಆದರೆ ಇಸ್ರೇಲರು ಬೇರೆ ದೇವರುಗಳನ್ನು ಪೂಜಿಸಲು ಆರಂಭಿಸಿ


“ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದುಕೊಂಡದ್ದನ್ನು ನಾನು ನೋಡಿದ್ದೇನೆ. ಅವರು ಬಾಳ್ ದೇವತೆಗೋಸ್ಕರ ಆವೇಶದಿಂದ ಪ್ರವಾದಿಸಿದ್ದನ್ನು ನಾನು ಕಂಡಿದ್ದೇನೆ. ಆ ಪ್ರವಾದಿಗಳು ಇಸ್ರೇಲಿನ ಜನರನ್ನು ಯೆಹೋವನಿಂದ ದೂರ ತೆಗೆದುಕೊಂಡು ಹೋಗಿದ್ದಾರೆ.


ನಾವು ಮರದ ಮತ್ತು ಕಲ್ಲಿನ ವಸ್ತುಗಳನ್ನು ಪೂಜಿಸುತ್ತಾ ಇತರ ಜನಾಂಗಗಳಂತೆ ಇರೋಣ ಎಂದು ನೀವು ಯೋಚಿಸುತ್ತಲೇ ಇರುತ್ತೀರಿ. ನಿಮ್ಮ ಮನಸ್ಸುಗಳಲ್ಲಿರುವ ಈ ಆಲೋಚನೆಯು ಎಂದಿಗೂ ನೆರವೇರುವುದಿಲ್ಲ.’”


ಇಸ್ರೇಲ್ ಜನಾಂಗದಲ್ಲಿ ಅತೀ ಭಯಂಕರ ಸಂಗತಿಗಳನ್ನು ನಾನು ನೋಡಿರುತ್ತೇನೆ. ಎಫ್ರಾಯೀಮು ದೇವರಿಗೆ ದ್ರೋಹಿಯಾದನು. ಇಸ್ರೇಲು ಪಾಪದಿಂದ ಹೊಲಸಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು