Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:14 - ಪರಿಶುದ್ದ ಬೈಬಲ್‌

14 “ನಿಮ್ಮ ಹೆಣ್ಣುಮಕ್ಕಳು ಸೂಳೆತನ ಮಾಡುವದಕ್ಕಾಗಲಿ ನಿಮ್ಮ ಸೊಸೆಯರು ಲೈಂಗಿಕಪಾಪ ಮಾಡುವದಕ್ಕಾಗಲಿ ನಾನು ಅವರನ್ನು ದೂರುವದಿಲ್ಲ. ಗಂಡಸರು ವೇಶ್ಯೆಯರೊಂದಿಗೆ ಮಲಗುವರು. ಅವರು ಮಂದಿರದ ವೇಶ್ಯೆಯರೊಂದಿಗೆ ಯಜ್ಞವನ್ನರ್ಪಿಸುವರು. ಹೀಗೆ ಆ ಬುದ್ಧಿಯಿಲ್ಲದ ಜನರು ತಮ್ಮನ್ನು ತಾವೇ ನಾಶಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ವ್ಯಭಿಚಾರಿಣಿಯರಾಗಿ ನಡೆಯುವ ನಿಮ್ಮ ಕುಮಾರಿಯರನ್ನೂ ವ್ಯಭಿಚಾರ ಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವುದಿಲ್ಲ; ನೀವೇ ವ್ಯಭಿಚಾರಿಗಳನ್ನು ಕರೆದುಕೊಂಡು ಓರೆಯಾಗಿ ಹೋಗುತ್ತೀರಿ; ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸೂಳೆಯರಾಗಿ ನಡೆಯುವ ಪುತ್ರಿಯರನ್ನು ನಾನು ದಂಡಿಸುವುದಿಲ್ಲ, ವ್ಯಭಿಚಾರ ಮಾಡುವ ಸೊಸೆಗಳನ್ನು ನಾನು ಶಿಕ್ಷಿಸುವುದಿಲ್ಲ. ಕಾರಣ, ನೀವೇ ಸೂಳೆಯರನ್ನು ಸೇರಿಕೊಂಡು ಅಡ್ಡದಾರಿ ಹಿಡಿಯುತ್ತೀರಿ. ದೇವದಾಸಿಯರೊಂದಿಗೆ ಸೇರಿ ಬಲಿಯನ್ನು ಅರ್ಪಿಸುತ್ತೀರಿ. ‘ಮತಿಹೀನರು ಗತಿಸಿಹೋಗುವರು’ ಎಂಬ ಹೇಳಿಕೆ ಖಂಡಿತವಾಗಿ ನಿಮಗೆ ಅನ್ವಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸೂಳೆಯರಾಗಿ ನಡೆಯುವ ನಿಮ್ಮ ಕುಮಾರಿಯರನ್ನೂ ವ್ಯಭಿಚಾರಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವದಿಲ್ಲ; ನೀವೇ ಸೂಳೆಯರನ್ನು ಕರಕೊಂಡು ಓರೆಯಾಗಿ ಹೋಗುತ್ತೀರಿ; ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವಾಗಲೂ, ನಿಮ್ಮ ಸೊಸೆಯಂದಿರು ವ್ಯಭಿಚಾರ ಮಾಡುವಾಗಲೂ ನಾನು ಅವರನ್ನು ಶಿಕ್ಷಿಸುವುದಿಲ್ಲ. ಏಕೆಂದರೆ ಪುರುಷರು ಸ್ವತಃ ವೇಶ್ಯೆಯರೊಂದಿಗೆ ವಾಸಿಸುತ್ತಾರೆ ಮತ್ತು ದೇವಾಲಯದ ವೇಶ್ಯೆಯರೊಂದಿಗೆ ಬಲಿ ಅರ್ಪಿಸುತ್ತಾರೆ. ಆದ್ದರಿಂದ ವಿವೇಕವಿಲ್ಲದ ಜನರು ನಾಶವಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:14
23 ತಿಳಿವುಗಳ ಹೋಲಿಕೆ  

ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ.


ನೀವು ಎಂದೂ ಶಿಕ್ಷಿಸಲ್ಪಡದಿದ್ದರೆ ನಿಮ್ಮ ತಂದೆಗೆ ನೀವು ನಿಜವಾದ ಮಕ್ಕಳಲ್ಲ.


ಅವರು ಅರ್ಥ ಮಾಡಿಕೊಳ್ಳುವುದಿಲ್ಲ. ಅವರು ಕಿವಿಗೊಡದ ಕಾರಣ ಅವರಿಗೆ ಏನೂ ಗೊತ್ತಿಲ್ಲ. ಆದ್ದರಿಂದ ದೇವರು ಕೊಡುವ ಜೀವಿತವನ್ನು ಹೊಂದಿಕೊಳ್ಳಲು ಅವರಿಗೆ ಸಾಧ್ಯವಿಲ್ಲ.


“ಇಬ್ಬರೂ ಒಂದೇ ದೇಹವಾಗುತ್ತಾರೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದ್ದರಿಂದ ಸೂಳೆಯೊಂದಿಗೆ ಲೈಂಗಿಕ ಸಂಬಂಧವಿರುವವನು ಆಕೆಯೊಂದಿಗೆ ಒಂದೇ ದೇಹವಾಗಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.


ಅರ್ಥಮಾಡಿಕೊಳ್ಳುವ ಒಬ್ಬನೂ ಇಲ್ಲ. ದೇವರೊಂದಿಗಿರಲು ನಿಜವಾಗಿ ಬಯಸುವ ಒಬ್ಬನೂ ಇಲ್ಲ.


ನಾನು ಹೇಳುವ ಈ ಸಂಗತಿಗಳನ್ನು ನೀವು ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ನನ್ನ ಉಪದೇಶವನ್ನು ನೀವು ಸ್ವೀಕರಿಸಿಕೊಳ್ಳಲಾರಿರಿ.


ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.


“ಅವನ ವಿಗ್ರಹಗಳೊಂದಿಗೆ ಎಫ್ರಾಯೀಮು ಸೇರಿರುತ್ತಾನೆ. ಆದ್ದರಿಂದ ಅವನನ್ನು ಸುಮ್ಮನೆ ಬಿಟ್ಟುಬಿಡು.


ಅನೇಕ ಜನರು ಶುದ್ಧೀಕರಿಸಲ್ಪಡುವರು; ಅವರು ತಮ್ಮನ್ನು ತಾವು ಶುಭ್ರಗೊಳಿಸಿಕೊಳ್ಳುವರು. ಆದರೆ ದುಷ್ಟರು ದುಷ್ಟರಾಗಿಯೇ ಉಳಿಯುವರು. ಆ ದುಷ್ಟರು ಈ ಸಂಗತಿಗಳನ್ನು ಅರಿತುಕೊಳ್ಳುವದಿಲ್ಲ. ಜ್ಞಾನಿಗಳು ಇವೆಲ್ಲವನ್ನು ಅರಿತುಕೊಳ್ಳುತ್ತಾರೆ.


ಅವರು ಹಸಿದ ನಾಯಿಗಳಂತಿದ್ದಾರೆ. ಅವರು ಎಂದಿಗೂ ತೃಪ್ತಿ ಹೊಂದುವವರಲ್ಲ. ಕುರುಬರಿಗೆ ತಾವು ಮಾಡುವುದೇ ತಿಳಿಯದು. ಅವರು ತಮ್ಮ ಕುರಿಗಳ ಹಾಗೆ ದಾರಿತಪ್ಪಿದ್ದಾರೆ. ಅವರೆಲ್ಲಾ ಅತ್ಯಾಶೆಯುಳ್ಳವರು; ತಮ್ಮನ್ನು ತೃಪ್ತಿಪಡಿಸುವದೇ ಅವರ ಕೆಲಸ.


ನಾನು ನಿಮ್ಮನ್ನು ಯಾಕೆ ಶಿಕ್ಷಿಸುತ್ತಲೇ ಇರಬೇಕು? ನಾನು ನಿಮ್ಮನ್ನು ಶಿಕ್ಷಿಸಿದೆನು, ಆದರೆ ನೀವು ಬದಲಾಗಲಿಲ್ಲ. ನೀವು ನನಗೆ ವಿರುದ್ಧವಾಗಿ ಏಳುತ್ತಲೇ ಇದ್ದೀರಿ. ಈಗ ಪ್ರತಿಯೊಂದು ತಲೆಯೂ ಪ್ರತಿಯೊಂದು ಹೃದಯವೂ ರೋಗಕ್ಕೆ ಬಲಿಯಾಗಿದೆ.


ಕೆಡುಕರು ನ್ಯಾಯವನ್ನು ಅರ್ಥಮಾಡಿಕೊಳ್ಳಲಾರರು; ಯೆಹೋವನನ್ನು ಪ್ರೀತಿಸುವ ಜನರಾದರೋ ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವರು.


ನಂತರ ರಾಜನಾದ ಯೋಷೀಯನು ದೇವಾಲಯದಲ್ಲಿದ್ದ ದೇವದಾಸ ದೇವದಾಸಿಯರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸುಳ್ಳುದೇವತೆಯಾದ ಅಶೇರಳಿಗೋಸ್ಕರ ಚಿಕ್ಕ ಗುಡಾರಗಳನ್ನು ನೇಯುತ್ತಿದ್ದರು.


ಆ ಕಾಲದಲ್ಲಿ, ಇತರ ದೇವರುಗಳ ಸೇವೆಗೋಸ್ಕರ ತಮ್ಮ ದೇಹಗಳನ್ನು ಲೈಂಗಿಕವಾಗಿ ಮಾರಾಟ ಮಾಡುತ್ತಿದ್ದ ಜನರು ಅಲ್ಲಿದ್ದರು. ಆ ಜನರು ದೇಶವನ್ನು ಬಿಟ್ಟುಹೋಗುವಂತೆ ಅವನು ಬಲವಂತ ಮಾಡಿದನು. ಆಸನು ತನ್ನ ಪೂರ್ವಿಕರು ನಿರ್ಮಿಸಿದ ವಿಗ್ರಹಗಳನ್ನು ನಿರ್ಮೂಲಮಾಡಿದನು.


“ಇಸ್ರೇಲರ ಗಂಡಸಾಗಲಿ ಹೆಂಗಸಾಗಲಿ ದೇವಸ್ಥಾನದ ವೇಶ್ಯೆಯಾಗಬಾರದು.


ಇಸ್ರೇಲಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆ ದುಷ್ಕೃತ್ಯಗಳು ಅವರನ್ನು ತಮ್ಮ ದೇವರ ಬಳಿಗೆ ಹಿಂತಿರುಗಿ ಬಾರದಂತೆ ಮಾಡುತ್ತಿವೆ. ಅವರು ಯಾವಾಗಲೂ ಇತರ ದೇವರುಗಳ ಹಿಂದೆ ಹೇಗೆ ಹೋಗೋಣ ಎಂದು ಮಾರ್ಗವನ್ನು ಹುಡುಕುತ್ತಿದ್ದಾರೆ. ಅವರಿಗೆ ಯೆಹೋವನ ಪರಿಚಯವಿಲ್ಲ.


ಆ ಬಡಜನರ ಮುಖವನ್ನು ನೆಲದ ಮೇಲೆ ದೂಡಿ ಅವರ ಮೇಲೆ ನಡೆದರು. ಕಷ್ಟ ಅನುಭವಿಸುವ ಜನರ ಮೊರೆಯನ್ನು ಅವರು ಲಾಲಿಸದೆ ಹೋದರು. ತಂದೆಗಳೂ ಗಂಡುಮಕ್ಕಳೂ ಒಬ್ಬ ತರುಣಿಯೊಂದಿಗೇ ಲೈಂಗಿಕ ಸಂಬಂಧವನ್ನಿಟ್ಟುಕೊಂಡರು. ನನ್ನ ಪವಿತ್ರನಾಮವನ್ನು ಹಾಳುಮಾಡಿದರು.


ಆದರೆ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಹೆಂಡತಿಯು ಪಟ್ಟಣದೊಳಗೆ ವೇಶ್ಯೆಯಾಗುವಳು. ನಿನ್ನ ಗಂಡು, ಹೆಣ್ಣುಮಕ್ಕಳು ಕತ್ತಿಯಿಂದ ಸಾಯುವರು. ಅನ್ಯರು ನಿನ್ನ ದೇಶವನ್ನು ಕಿತ್ತುಕೊಂಡು ತಮ್ಮೊಳಗೆ ಹಂಚಿಕೊಳ್ಳುವರು. ಮತ್ತು ನೀನು ಪರದೇಶದಲ್ಲಿ ಸಾಯುವೆ. ಇಸ್ರೇಲಿನ ಜನರು ಖಂಡಿತವಾಗಿಯೂ ಸೆರೆಹಿಡಿಯಲ್ಪಟ್ಟು ತಮ್ಮ ದೇಶದಿಂದ ಒಯ್ಯಲ್ಪಡುವರು.’”


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು