Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:15 - ಪರಿಶುದ್ದ ಬೈಬಲ್‌

15 “ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, “ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಸ್ರಾಯೇಲೇ, ನೀನು ಸೂಳೆಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ; [ಯೆಹೂದ್ಯರೇ,] ಗಿಲ್ಗಾಲಿಗೆ ನೆರೆಯದಿರಿ, ಬೇತಾವೆನಿಗೆ ಯಾತ್ರೆ ಹೋಗಬೇಡಿರಿ, ಯೆಹೋವನ ಜೀವದಾಣೆ ಎಂದು ಶಪಥಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿದರೂ, ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. “ಗಿಲ್ಗಾಲಿಗೆ ಹೋಗದೆ, ಇಲ್ಲವೆ ಬೇತಾವೆನಿಗೆ ಏರದೇ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:15
28 ತಿಳಿವುಗಳ ಹೋಲಿಕೆ  

ಆದರೆ ಗಿಲ್ಯಾದಿನ ಜನರು ಪಾಪ ಮಾಡಿದ್ದಾರೆ. ಅವರ ಬಳಿಯಲ್ಲಿ ಅನೇಕ ಭಯಂಕರವಾದ ವಿಗ್ರಹಗಳಿವೆ. ಗಿಲ್ಗಾಲಿನಲ್ಲಿ ಬಸವನ ವಿಗ್ರಹಗಳಿಗೆ ಜನರು ಯಜ್ಞವನ್ನರ್ಪಿಸುತ್ತಾರೆ. ಅವರಲ್ಲಿ ಅನೇಕ ಯಜ್ಞವೇದಿಕೆಗಳಿವೆ. ಹೇಗೆ ಉಳಿಮೆ ಮಾಡಿದ ಹೊಲದಲ್ಲಿ ಮಣ್ಣಿನ ಸಾಲುಗಳಿರುತ್ತದೋ ಅದೇ ರೀತಿಯಲ್ಲಿ ಅವರ ಬಳಿಯಲ್ಲಿ ವಿಗ್ರಹಗಳ ಸಾಲಿದೆ.


ಅವರ ದುಷ್ಟತನವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿಯೇ ನಾನು ಅವರನ್ನು ದ್ವೇಷಿಸಲು ಪ್ರಾರಂಭಿಸಿದೆನು. ಅವರು ಮಾಡುವ ದುಷ್ಕೃತ್ಯಗಳ ದೆಸೆಯಿಂದ ನಾನು ಅವರನ್ನು ನನ್ನ ಮನೆಯಿಂದ ಹೊರಡಿಸುವೆನು. ಇನ್ನು ಮುಂದೆ ಅವರನ್ನು ನಾನು ಪ್ರೀತಿಸುವುದಿಲ್ಲ. ಅವರ ನಾಯಕರು ನನಗೆ ವಿರುದ್ಧವಾಗಿ ದಂಗೆ ಎದ್ದವರು; ನನ್ನ ವಿರುದ್ಧವಾಗಿ ತಿರುಗಿಬಿದ್ದರು.


ಯೆಹೋವನು ಹೀಗೆ ಹೇಳುತ್ತಾನೆ, “ಬೇತೇಲಿನಲ್ಲಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಇನ್ನೂ ಹೆಚ್ಚಾಗಿ ಪಾಪ ಮಾಡಿರಿ. ನಿಮ್ಮ ಯಜ್ಞವನ್ನು ಮುಂಜಾನೆ ಸಮರ್ಪಿಸಿರಿ. ಮೂರು ದಿವಸಗಳ ಹಬ್ಬಕ್ಕೆ ನಿಮ್ಮ ಬೆಳೆಯ ಹತ್ತನೆಯ ಒಂದು ಭಾಗವನ್ನು ತೆಗೆದುಕೊಂಡು ಬನ್ನಿ.


ಆ ಜನರು ಸಮಾರ್ಯದ ಪಾಪದ ಮೇಲೆ ಆಣೆಯಿಡುವರು, ‘ದಾನೇ, ನಿನ್ನ ದೇವರಾಣೆ ….’ ‘ಬೇರ್ಷೆಬದ ದೇವರಾಣೆ ….’ ಎಂಬುದಾಗಿ ಹೇಳುವರು. ಆದರೆ ಆ ಜನರು ಬಿದ್ದುಹೋಗುವರು. ಅಲ್ಲಿಂದ ತಿರುಗಿ ಏಳುವದೇ ಇಲ್ಲ.”


ಆದರೆ ಬೇತೇಲಿನಲ್ಲಿ ಹುಡುಕಬೇಡ, ಗಿಲ್ಗಾಲಿನಲ್ಲಿ ಕಾಲಿಡಬೇಡ. ಗಡಿಯನ್ನು ದಾಟಿ ಬೇರ್ಷೆಬಕ್ಕೆ ಹೋಗಬೇಡ. ಗಿಲ್ಗಾಲಿನ ಜನರು ಕೈದಿಗಳಂತೆ ತೆಗೆಯಲ್ಪಡುವರು. ಮತ್ತು ಬೇತೇಲ್ ನಾಶಮಾಡಲ್ಪಡುವದು.


ಇಸ್ರೇಲ್ ಪಾಪ ಮಾಡುತ್ತಾ ಇನ್ನೂ ಹೆಚ್ಚಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿತು. ಆವೆನ್‌ನಲ್ಲಿರುವ ಎತ್ತರವಾದ ಸ್ಥಳ ನಾಶಮಾಡಲ್ಪಡುವದು. ಅದರ ಮೇಲೆ ಮುಳ್ಳುಗಿಡಗಳೂ ಹಣಜಿಗಳೂ ಬೆಳೆಯುವವು. ಆಗ ಅವರು ಪರ್ವತಗಳಿಗೆ, “ನಮ್ಮನ್ನು ಮುಚ್ಚಿರಿ” ಎಂದೂ ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ” ಎಂದೂ ಹೇಳುವರು.


ಸಮಾರ್ಯದ ಜನರು ಬೇತಾವೆನಿನಲ್ಲಿ ಬಸವನನ್ನು ಆರಾಧಿಸುತ್ತಾರೆ. ಆ ಜನರು ನಿಜವಾಗಿಯೂ ಅಳುವರು. ಅವರ ಪೂಜಾರಿಗಳೂ ಅಳುವರು, ಯಾಕೆಂದರೆ ಅವರ ಸುಂದರವಾದ ವಿಗ್ರಹವು ಇಲ್ಲವಾಗುವದು. ಅದು ಒಯ್ಯಲ್ಪಡುವುದು.


“ಗಿಬ್ಯದಲ್ಲಿ ಕೊಂಬನ್ನೂದು, ರಾಮದಲ್ಲಿ ತುತ್ತೂರಿಯನ್ನೂದು. ಬೇತಾವೆನಿನಲ್ಲಿ ಎಚ್ಚರಿಕೆಯನ್ನು ನೀಡು. ಬೆನ್ಯಾಮೀನನೇ, ವೈರಿಯು ನಿನ್ನ ಹಿಂದೆಯೇ ಇದ್ದಾನೆ.


ಜನರು ಆಣೆ ಮಾಡುವಾಗ ‘ಯೆಹೋವನಾಣೆ’ ಎಂದು ಹೇಳುವರು. ಆದರೆ ಅದು ಕೇವಲ ಬಾಯಿ ಮಾತಷ್ಟೇ ಹೊರತು ಯಥಾರ್ಥವಾದದ್ದಲ್ಲ.”


ಕತ್ತಲೆಯಲ್ಲಿರುವ ಜನರು ಮಾಡುವಂಥ ಕಾರ್ಯಗಳನ್ನು ಮಾಡಬೇಡಿ. ಅವುಗಳಿಂದ ಒಳ್ಳೆಯದೇನೂ ಆಗುವುದಿಲ್ಲ. ಆದರೆ ಕತ್ತಲೆಯಲ್ಲಿ ನಡೆಯುವ ಕಾರ್ಯಗಳು ತಪ್ಪಾದವುಗಳೆಂದು ತೋರಿಸಲು ಒಳ್ಳೆಯ ಕಾರ್ಯಗಳನ್ನು ಮಾಡಿರಿ.


ಒಬ್ಬ ವ್ಯಕ್ತಿಯು ಸತ್ತಾಗ ಅವನ ಸಂಬಂಧಿಕರಲ್ಲಿ ಒಬ್ಬನು ಬಂದು ಶವವನ್ನು ಸುಡಲು ತೆಗೆದುಕೊಂಡು ಹೋಗುವನು. ಸಂಬಂಧಿಕನು ಬಂದು ಎಲುಬುಗಳನ್ನು ಕೊಂಡೊಯ್ಯುವನು. ಮನೆಯೊಳಗೆ ಅವಿತುಕೊಂಡಿರುವವರನ್ನು ಕರೆಯುವನು. “ಇನ್ನೂ ಸತ್ತ ಹೆಣಗಳು ಒಳಗಿವೆಯೋ?” ಎಂದು ವಿಚಾರಿಸುವನು. ಒಳಗಿದ್ದವರು “ಇಲ್ಲ” ಎಂದು ಉತ್ತರಿಸುವರು. ಆಗ ಆ ಸಂಬಂಧಿಕನು ಅವರನ್ನು ತಡೆದು, “ಯೆಹೋವನ ನಾಮವನ್ನು ನಾವು ಉಚ್ಚರಿಸಬಾರದು” ಎಂದು ಹೇಳುವನು.


“ಎಫ್ರಾಯೀಮನು ಸುಳ್ಳುದೇವರುಗಳಿಂದ ನನ್ನನ್ನು ಸುತ್ತುವರಿದನು. ಇಸ್ರೇಲಿನ ಜನರು ನನಗೆ ವಿರುದ್ಧವಾಗಿ ಎದ್ದರು. ಆದರೆ ಅವರು ನಾಶವಾದರು. ಯೆಹೂದನು ಈಗಲೂ ದೇವರ ಜೊತೆಯಲ್ಲಿ ನಡೆಯುತ್ತಿದ್ದಾನೆ. ಯೆಹೂದನು ಪರಿಶುದ್ಧರಿಗೆ ನಿಷ್ಠೆಯಿಂದಿದ್ದಾನೆ.”


ನನ್ನ ಜನರು ಮರದ ತುಂಡುಗಳಿಂದ ಸಲಹೆಗಳನ್ನು ಕೇಳುವರು. ಆ ಮರದ ತುಂಡುಗಳು ಅವರಿಗೆ ಉತ್ತರಿಸುವವು ಎಂದು ಅವರು ನೆನಸುತ್ತಾರೆ. ಯಾಕೆಂದರೆ, ವೇಶ್ಯೆಯರಂತೆ ಅವರು ಆ ಸುಳ್ಳು ದೇವರುಗಳನ್ನು ಹಿಂದಟ್ಟಿಕೊಂಡು ಹೋಗುವರು. ಅವರು ತಮ್ಮ ದೇವರುಗಳನ್ನು ಬಿಟ್ಟು ವೇಶ್ಯೆಯರಂತೆ ವರ್ತಿಸುತ್ತಾರೆ.


ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”


ಯೆಹೋವನು ಹೇಳುವುದೇನೆಂದರೆ, “ಯಾಕೋಬನ ಮನೆತನದವರೇ, ನನ್ನ ಮಾತುಗಳನ್ನು ಕೇಳಿರಿ. ಜನರು ನಿಮ್ಮನ್ನು ಇಸ್ರೇಲ್ ಎಂದು ಕರೆಯುತ್ತಾರೆ. ನೀವು ಯೆಹೂದದ ಕುಟುಂಬದವರು. ನೀವು ಯೆಹೋವನ ಹೆಸರಿನಲ್ಲಿ ಒಡಂಬಡಿಕೆ ಮಾಡಿಕೊಳ್ಳುವಿರಿ. ನೀವು ಯೆಹೋವನ ನಾಮವನ್ನು ಸ್ತುತಿಸುವಿರಿ, ಆದರೆ ನೀವು ಇವುಗಳನ್ನು ಮಾಡುವಾಗ ನಂಬಿಗಸ್ತರಾಗಿರುವದಿಲ್ಲ; ಯಥಾರ್ಥರಾಗಿರುವುದಿಲ್ಲ.


ಆದರೆ, ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ. ‘ನಾನು ಆಣೆಮಾಡಿ ಹೀಗೆ ಹೇಳುತ್ತೇನೆ. ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದಿಯರಲ್ಲಿ ಯಾರೊಬ್ಬರೂ ಇನ್ನು ಮುಂದೆ ನನ್ನ ಹೆಸರಿನ ಮೇಲೆ ಆಣೆಯಿಟ್ಟು ಹೇಳಲಾರರು ಎಂದು ನಾನು ನನ್ನ ಮಹತ್ತಾದ ನಾಮದ ಮೇಲೆ ಆಣೆಯಿಟ್ಟುಕೊಂಡು ಹೇಳುತ್ತೇನೆ. ಇನ್ನು ಮುಂದೆ ಎಂದೂ ಅವರು “ದೇವರ ಆಣೆಯಾಗಿ” ಎಂದು ಹೇಳಲಾರರು.


ಆಗ ಯೆಹೋವನು ಯೆಹೋಶುವನಿಗೆ, “ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಅವಮಾನಕ್ಕೆ ಗುರಿಯಾಗಿದ್ದಿರಿ. ಆದರೆ ಇಂದು ಆ ನಾಚಿಕೆಯನ್ನು ತೆಗೆದು ಹಾಕಿದ್ದೇನೆ” ಎಂದನು. ಆದ್ದರಿಂದ ಯೆಹೋಶುವನು ಆ ಸ್ಥಳಕ್ಕೆ “ಗಿಲ್ಗಾಲ್” ಎಂದು ಹೆಸರಿಟ್ಟನು. ಈಗಲೂ ಆ ಸ್ಥಳಕ್ಕೆ “ಗಿಲ್ಗಾಲ್” ಎಂಬ ಹೆಸರಿದೆ.


ಜೆರಿಕೊವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಯೆಹೋಶುವನು ಕೆಲವು ಜನರನ್ನು “ಆಯಿ” ಎಂಬ ಪಟ್ಟಣಕ್ಕೆ ಕಳುಹಿಸಿದನು. “ಆಯಿ” ಬೇತಾವೆನಿನ ಸಮೀಪಕ್ಕೂ ಬೇತೇಲಿನ ಪೂರ್ವಕ್ಕೂ ಇತ್ತು. ಯೆಹೋಶುವನು “‘ಆಯಿ’ಗೆ ಹೋಗಿರಿ ಮತ್ತು ಆ ಪ್ರಾಂತ್ಯದ ದುರ್ಬಲತೆಗಳನ್ನು ಕಂಡುಹಿಡಿಯಿರಿ” ಎಂದು ಹೇಳಿದನು. ಆಗ ಅವರು ಆ ಪ್ರದೇಶದಲ್ಲಿ ಗೂಢಚರ್ಯ ಮಾಡುವುದಕ್ಕೆ ಹೋದರು.


ತನ್ನ ಪೂರ್ವಿಕರು ಅನುಸರಿಸಿದ ದೇವರನ್ನು ನಿರೀಕ್ಷಿಸಿದನು. ಆತನ ಆಜ್ಞೆಗಳನ್ನು ಅನುಸರಿಸಿದನು. ಇಸ್ರೇಲಿ ಅರಸರು ನಡೆದಂತೆ ಇವನು ನಡೆಯಲಿಲ್ಲ.


ಯೆಹೋರಾಮನು ಯೆಹೂದ ರಾಜ್ಯದ ಬೆಟ್ಟಗಳ ಮೇಲೆ ಪೂಜಾಸ್ಥಳಗಳನ್ನು ಕಟ್ಟಿಸಿದನು. ಪ್ರಜೆಗಳು ದೇವರ ಚಿತ್ತಕ್ಕನುಸಾರವಾಗಿ ನಡೆಯದಂತೆ ಅವರನ್ನು ಯೆಹೋವನಿಂದ ದೂರಕ್ಕೆ ನಡೆಸಿದನು.


ಎಫ್ರಾಯೀಮ್ ಸಮಯವನ್ನು ಹಾಳು ಮಾಡುತ್ತಿದ್ದಾನೆ. ಇಸ್ರೇಲು ದಿನವಿಡೀ ಗಾಳಿಯನ್ನು ಹಿಮ್ಮೆಟ್ಟುತ್ತಿದ್ದಾನೆ. ಜನರು ಹೆಚ್ಚೆಚ್ಚಾಗಿ ಸುಳ್ಳು ಹೇಳುತ್ತಿದ್ದಾರೆ; ಹೆಚ್ಚೆಚ್ಚಾಗಿ ಕದಿಯುತ್ತಾರೆ. ಅಶ್ಶೂರ್ಯದವರೊಂದಿಗೆ ಒಪ್ಪಂದ ಮಾಡಿರುತ್ತಾರೆ. ತಮ್ಮ ಆಲೀವ್ ಎಣ್ಣೆಯನ್ನು ಈಜಿಪ್ಟಿಗೆ ಕೊಂಡೊಯ್ಯುತ್ತಿದ್ದಾರೆ.


“ಯಾಕೋಬನು ಅರಾಮ್ ದೇಶಕ್ಕೆ ಓಡಿಹೋದನು. ಅಲ್ಲಿ ಇಸ್ರೇಲನು ಒಬ್ಬ ಹೆಂಡತಿಗಾಗಿ ಸೇವೆ ಮಾಡಿದನು. ಇನ್ನೊಂದು ಹೆಂಡತಿಯನ್ನು ಮಾಡಿಕೊಳ್ಳಲಿಕ್ಕೆ ಕುರಿಗಳನ್ನು ಕಾಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು