Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:6 - ಪರಿಶುದ್ದ ಬೈಬಲ್‌

6 “ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟದರಿಂದ ಇನ್ನು ನನಗೆ ಯಾಜಕ ಸೇವೆಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು; ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ ನಾನು ನಿಮ್ಮ ಸಂತತಿಯವರನ್ನು ಮರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ. “ಏಕೆಂದರೆ ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ. ನಾನು ಸಹ ಯಾಜಕ ವರ್ಗದಿಂದ ನಿಮ್ಮನ್ನು ವರ್ಜಿಸಿ ಬಿಡುತ್ತೇನೆ. ಏಕೆಂದರೆ ನೀವು ದೇವರ ನಿಯಮವನ್ನು ಮರೆತುಬಿಟ್ಟಿದ್ದೀರಿ, ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:6
54 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು. ಯಾಕೆಂದರೆ ಅವರು ನಿಜವಾಗಿಯೂ ನನ್ನನ್ನು ಅರಿತಿಲ್ಲ. ಇಸ್ರೇಲಿನಲ್ಲಿ ವಾಸಿಸುವ ಕೆಲವು ಜನರು ಈಗ ಪ್ರಮುಖರಾಗಿದ್ದಾರೆ. ತಮ್ಮ ಸುಖಜೀವಿತದಲ್ಲಿ ಆನಂದಿಸುತ್ತಾರೆ. ಆದರೆ ಆ ಗಣ್ಯವ್ಯಕ್ತಿಗಳೆಲ್ಲಾ ಬಾಯಾರಿಕೆಯಿಂದಲೂ ಹಸಿವೆಯಿಂದಲೂ ನರಳುವರು.


ಯಾವುದೇ ಕಾರ್ಯದಲ್ಲಿ ಉತ್ಸುಕತೆಯೊಂದೇ ಸಾಲದು, ತಿಳುವಳಿಕೆಯೂ ಬೇಕು. ಯಾವುದೇ ಕಾರ್ಯದಲ್ಲಿ ದುಡುಕದಿರಿ; ಇಲ್ಲವಾದರೆ, ತಪ್ಪಾದೀತು!


ಯಾಕೆಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಞವಲ್ಲ. ಜನರು ತರುವ ಸರ್ವಾಂಗಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ.


ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ.


‘ಇವರು ನನ್ನನ್ನು ಮಾತಿನಿಂದ ಗೌರವಿಸುತ್ತಾರೆ. ಇವರ ಮನಸ್ಸಾದರೋ ನನಗೆ ದೂರವಾಗಿದೆ.


ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು. ಆದರೆ ಅದರ ನಿರ್ಮಾಣಿಕನನ್ನು ಮರೆತರು. ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಆ ಬೆಂಕಿಯು ಅರಮನೆಗಳನ್ನು ನಾಶಮಾಡುವದು.”


ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.


“‘ಯೆಹೋವನು ಎಲ್ಲಿ?’ ಎಂದು ಯಾಜಕರು ಕೇಳಲಿಲ್ಲ. ಧರ್ಮಶಾಸ್ತ್ರವನ್ನು ಬಲ್ಲವರು ನನ್ನನ್ನು ತಿಳಿಯಬಯಸಲಿಲ್ಲ. ಇಸ್ರೇಲರ ಜನನಾಯಕರು ನನ್ನ ವಿರೋಧಿಗಳಾದರು. ಪ್ರವಾದಿಗಳು ಸುಳ್ಳುದೇವರಾದ ಬಾಳನ ಹೆಸರಿನಿಂದ ಭವಿಷ್ಯವಾಣಿಯನ್ನು ನುಡಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿದರು.”


ಬಹಳಕಾಲದ ತನಕ ಇಸ್ರೇಲರಲ್ಲಿ ನಿಜವಾದ ದೇವರಿರಲಿಲ್ಲ; ಬೋಧಕನಿರಲಿಲ್ಲ; ಧರ್ಮಶಾಸ್ತ್ರವೂ ಇರಲಿಲ್ಲ.


ನಾನು ಇಸ್ರೇಲರಿಗೆ ಆಹಾರ ಒದಗಿಸಿದೆನು. ಅವರು ಆ ಆಹಾರವನ್ನು ಉಂಡು ತಿಂದು ತೃಪ್ತರಾಗಿ ಕೊಬ್ಬೇರಿದ್ದರಿಂದ ನನ್ನನ್ನು ಮರೆತರು.


ಎತ್ತು ತನ್ನ ದಣಿಯನ್ನು ತಿಳಿದದೆ; ಕತ್ತೆಯು ತನ್ನ ದಣಿಯ ಕೊಟ್ಟಿಗೆಯನ್ನು ತಿಳಿದದೆ. ಆದರೆ ಇಸ್ರೇಲರು ನನ್ನನ್ನು ತಿಳಿದೇ ಇಲ್ಲ. ನನ್ನ ಜನರು ನನ್ನನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ.”


ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.


ಆದರೆ ಅವರು ದೇವರಿಗೆ ವಿಧೇಯರಾಗದಿದ್ದರೆ ನಾಶವಾಗುವರು; ಮೂಢರಂತೆ ಸಾಯುವರು.


ಬುದ್ಧಿ ಇಲ್ಲದ ಮೂರ್ಖಜನರೇ, ಈ ಸಂದೇಶವನ್ನು ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ.


ಮಕ್ಕಳು ನನ್ನ ಜನರನ್ನು ಸೋಲಿಸಿಬಿಡುವರು. ಸ್ತ್ರೀಯರು ನನ್ನ ಜನರನ್ನು ಆಳುವರು. ನನ್ನ ಜನರೇ, ನಿಮ್ಮ ಮಾರ್ಗದರ್ಶಕರು ನಿಮ್ಮನ್ನು ತಪ್ಪುದಾರಿಯಲ್ಲಿ ನಡಿಸುವರು; ಸರಿಯಾದ ದಾರಿಯಿಂದ ನಿಮ್ಮನ್ನು ಅಡ್ಡದಾರಿಗೆ ನಡಿಸುವರು.


ನನ್ನ ಅಭಿಮಾನವು ನನ್ನನ್ನು ದಹಿಸುತ್ತಿದೆ. ಯಾಕೆಂದರೆ ನನ್ನ ವೈರಿಗಳು ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿದ್ದರಿಂದ ನನಗೆ ಬೇಸರವಾಗಿದೆ.


ಗುಂಪಾಗಿ ಸೇರಿದ್ದ ದುಷ್ಟರು ನನ್ನನ್ನು ದೂಷಿಸಿದರೂ ನಿನ್ನ ಉಪದೇಶಗಳನ್ನು ನಾನು ಮರೆಯಲಿಲ್ಲ.


ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.


ಎಫ್ರಾಯೀಮನಿಗೆ ನಾನು ಸಾವಿರಾರು ವಿಧಿನಿಯಮಗಳನ್ನು ಬರೆದರೂ ಅವನು ಅವುಗಳನ್ನು ಬೇರೆಯವರಿಗಾಗಿ ಬರೆದದೆ ಎಂದು ತಿಳಿದುಕೊಳ್ಳುವನು.


“ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ನಿನ್ನ ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ.


ನನ್ನ ಜನರು ಮರದ ತುಂಡುಗಳಿಂದ ಸಲಹೆಗಳನ್ನು ಕೇಳುವರು. ಆ ಮರದ ತುಂಡುಗಳು ಅವರಿಗೆ ಉತ್ತರಿಸುವವು ಎಂದು ಅವರು ನೆನಸುತ್ತಾರೆ. ಯಾಕೆಂದರೆ, ವೇಶ್ಯೆಯರಂತೆ ಅವರು ಆ ಸುಳ್ಳು ದೇವರುಗಳನ್ನು ಹಿಂದಟ್ಟಿಕೊಂಡು ಹೋಗುವರು. ಅವರು ತಮ್ಮ ದೇವರುಗಳನ್ನು ಬಿಟ್ಟು ವೇಶ್ಯೆಯರಂತೆ ವರ್ತಿಸುತ್ತಾರೆ.


“ಆಕೆಯು ಬಾಳನ ಸೇವೆಮಾಡಿದ್ದುದರಿಂದ ನಾನು ಆಕೆಯನ್ನು ಶಿಕ್ಷಿಸುವೆನು. ಬಾಳನಿಗೆ ಆಕೆ ಧೂಪ ಹಾಕಿದಳು. ಆಕೆ ವಸ್ತ್ರಾಭರಣಗಳಿಂದ ಭೂಷಿತಳಾಗಿ ಮೂಗುತಿಯನ್ನು ಧರಿಸಿಕೊಂಡು ತನ್ನ ಪ್ರೇಮಿಗಳ ಬಳಿಗೆ ಹೋದಳು. ನನ್ನನ್ನು ಮರೆತುಬಿಟ್ಟಳು.” ಇದು ಯೆಹೋವನು ಹೇಳಿದ ಮಾತು.


ಏಲಿಯ ಮಕ್ಕಳು ದುಷ್ಟರಾಗಿದ್ದರು. ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


“ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ಆದರೆ ಈಗ ಆ ನಾಯಕರುಗಳು ಮತ್ತರಾಗಿದ್ದಾರೆ. ಯಾಜಕರೂ ಪ್ರವಾದಿಗಳೂ ಮದ್ಯಸೇವನೆಯಿಂದ ಮತ್ತರಾಗಿದ್ದಾರೆ. ಅವರು ಎಡವಿಬೀಳುತ್ತಾರೆ. ಪ್ರವಾದಿಗಳು ದರ್ಶನಗಳನ್ನು ಕಾಣುವಾಗ ಅಮಲೇರಿದವರಾಗಿರುತ್ತಾರೆ; ನ್ಯಾಯಾಧೀಶರು ತೀರ್ಪುಕೊಡುವಾಗ ಅಮಲೇರಿದವರಾಗಿರುತ್ತಾರೆ.


ಇಷಯನು ಅರಸನಾದ ದಾವೀದನ ತಂದೆ. ದಾವೀದನು ಸೊಲೊಮೋನನ ತಂದೆ. (ಸೊಲೊಮೋನನ ತಾಯಿ ಊರೀಯನ ಹೆಂಡತಿಯಾಗಿದ್ದಳು.)


ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸು. ನಾನು ನಿನ್ನ ಉಪದೇಶಗಳನ್ನು ಮರೆತಿಲ್ಲ.


ಒಳ್ಳೆಯವನ ಮಾತುಗಳು ಅನೇಕರಿಗೆ ಸಹಾಯಮಾಡುತ್ತವೆ. ಮೂಢನ ಮೂಢತನವಾದರೋ ಅನೇಕರನ್ನು ಕೊಲ್ಲುವುದು.


“ಯಾಜಕರು ಜನರಿಗೆ ಪವಿತ್ರ ವಸ್ತುಗಳ ಮತ್ತು ಪವಿತ್ರವಲ್ಲದ ವಸ್ತುಗಳ ಬಗ್ಗೆ ಉಪದೇಶಿಸಬೇಕು. ಒಬ್ಬನನ್ನು ಅಶುದ್ಧನನ್ನಾಗಿ ಮಾಡುವಂಥವುಗಳ ಬಗ್ಗೆ ಇರುವ ನಿಯಮಗಳನ್ನು ಅವರು ಜನರಿಗೆ ಉಪದೇಶಿಸಬೇಕು.


“ನಿಮ್ಮ ಹೆಣ್ಣುಮಕ್ಕಳು ಸೂಳೆತನ ಮಾಡುವದಕ್ಕಾಗಲಿ ನಿಮ್ಮ ಸೊಸೆಯರು ಲೈಂಗಿಕಪಾಪ ಮಾಡುವದಕ್ಕಾಗಲಿ ನಾನು ಅವರನ್ನು ದೂರುವದಿಲ್ಲ. ಗಂಡಸರು ವೇಶ್ಯೆಯರೊಂದಿಗೆ ಮಲಗುವರು. ಅವರು ಮಂದಿರದ ವೇಶ್ಯೆಯರೊಂದಿಗೆ ಯಜ್ಞವನ್ನರ್ಪಿಸುವರು. ಹೀಗೆ ಆ ಬುದ್ಧಿಯಿಲ್ಲದ ಜನರು ತಮ್ಮನ್ನು ತಾವೇ ನಾಶಮಾಡಿಕೊಳ್ಳುತ್ತಾರೆ.


ಇಸ್ರೇಲಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆ ದುಷ್ಕೃತ್ಯಗಳು ಅವರನ್ನು ತಮ್ಮ ದೇವರ ಬಳಿಗೆ ಹಿಂತಿರುಗಿ ಬಾರದಂತೆ ಮಾಡುತ್ತಿವೆ. ಅವರು ಯಾವಾಗಲೂ ಇತರ ದೇವರುಗಳ ಹಿಂದೆ ಹೇಗೆ ಹೋಗೋಣ ಎಂದು ಮಾರ್ಗವನ್ನು ಹುಡುಕುತ್ತಿದ್ದಾರೆ. ಅವರಿಗೆ ಯೆಹೋವನ ಪರಿಚಯವಿಲ್ಲ.


ಅನ್ಯರು ಎಫ್ರಾಯೀಮನ ಶಕ್ತಿಯನ್ನು ಮುರಿಯುವರು. ಆದರೆ ಅವನಿಗೆ ಅದು ತಿಳಿದಿರುವದಿಲ್ಲ. ಎಫ್ರಾಯೀಮನ ತಲೆಯಲ್ಲಿ ನರೆಕೂದಲು ಬಂದಾಗ್ಯೂ ಅದಕ್ಕೆ ತಿಳಿವಳಿಕೆ ಬಂದಿರುವುದಿಲ್ಲ.


ಹೀಗೆ ಎಫ್ರಾಯೀಮ್ ತಿಳಿವಳಿಕೆ ಇಲ್ಲದ ಮೂರ್ಖ ಪಾರಿವಾಳದಂತಾಗಿದೆ. ಜನರು ಸಹಾಯಕ್ಕಾಗಿ ಈಜಿಪ್ಟನ್ನು ಕರೆದರು, ಅಶ್ಶೂರ್ಯದ ಕಡೆಗೆ ಓಡಿದರು.


ಯೆಹೋವನೇ, ನೀನು ದೀನರಿಗೆ ಸಹಾಯಮಾಡುವೆ. ಗರ್ವಿಷ್ಠರಿಗಾದರೋ ಅವಮಾನ ಮಾಡುವೆ.


ಓದುಬರುವವನಿಗೆ ಇದನ್ನು ಓದು ಎಂದು ಹೇಳಿದರೆ ಅವನು, “ಈ ಪುಸ್ತಕ ಮುಚ್ಚಲ್ಪಟ್ಟಿದೆ, ನನಗೆ ತೆರೆಯಲು ಸಾಧ್ಯವಿಲ್ಲ” ಎಂದು ಹೇಳುವನು. ಓದುಬಾರದ ಒಬ್ಬನಿಗೆ ಕೊಟ್ಟರೆ ಅವನು, “ನನಗೆ ಓದಲು ಬರುವದಿಲ್ಲ” ಎಂದು ಹೇಳಿ ಪುಸ್ತಕವನ್ನು ಹಿಂದಕ್ಕೆ ಕೊಡುವನು.


ಆ ಜನರು ನನ್ನ ದೇವರ ಮಾತನ್ನು ಕೇಳಲೊಲ್ಲರು. ಆದ್ದರಿಂದ ಆತನು ಅವರಿಗೆ ಕಿವಿಗೊಡುವದಿಲ್ಲ; ಅವರು ದೇಶದೇಶಗಳಲ್ಲಿ ವಾಸಸ್ಥಾನಗಳಿಲ್ಲದೆ ಅಲೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು