Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:7 - ಪರಿಶುದ್ದ ಬೈಬಲ್‌

7 ಅವರು ಅಹಂಕಾರಿಗಳಾದರು. ನನ್ನ ವಿರುದ್ಧವಾಗಿ ಹೆಚ್ಚೆಚ್ಚಾಗಿ ಪಾಪ ಮಾಡಿದರು. ಆದ್ದರಿಂದ ಅವರ ಗೌರವವನ್ನು ನಾನು ಲಜ್ಜಾಸ್ಪದವನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಹೆಚ್ಚಿದ ಹಾಗೆಲ್ಲಾ ನನ್ನ ವಿರುದ್ಧ ಹೆಚ್ಚೆಚ್ಚಾಗಿ ಪಾಪಮಾಡುತ್ತಾ ಬಂದರು; ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಅವರ ಸಂತಾನ ಹೆಚ್ಚಿದ ಹಾಗೆಲ್ಲ ಅವರು ನನ್ನ ವಿರುದ್ಧ ಪಾಪಮಾಡುತ್ತಾ ಬಂದಿದ್ದಾರೆ. ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಹೆಚ್ಚಿದ ಹಾಗೆಲ್ಲಾ ನನಗೆ ಹೆಚ್ಚೆಚ್ಚಾಗಿ ಪಾಪಮಾಡುತ್ತಾ ಬಂದರು; ನಾನು ಅವರ ಮಾನವನ್ನು ಅವಮಾನಕ್ಕೆ ಮಾರ್ಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾಜಕರು ಹೆಚ್ಚಿದ ಹಾಗೆಲ್ಲಾ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ. ಆದ್ದರಿಂದ ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:7
15 ತಿಳಿವುಗಳ ಹೋಲಿಕೆ  

ನಾನು ಇಸ್ರೇಲರಿಗೆ ಆಹಾರ ಒದಗಿಸಿದೆನು. ಅವರು ಆ ಆಹಾರವನ್ನು ಉಂಡು ತಿಂದು ತೃಪ್ತರಾಗಿ ಕೊಬ್ಬೇರಿದ್ದರಿಂದ ನನ್ನನ್ನು ಮರೆತರು.


ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.


“ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ.


“ನಾನು ಹೇಳಿರುವ ಪ್ರಕಾರ ನೀವು ಜೀವಿಸುತ್ತಿಲ್ಲ. ನೀವು ನನ್ನ ಉಪದೇಶವನ್ನು ಜನರಿಗೆ ತಿಳಿಸುವಾಗ ಮುಖದಾಕ್ಷಿಣ್ಯ ಮಾಡುತ್ತೀರಿ. ಈ ಕಾರಣದಿಂದಾಗಿ ನಿಮ್ಮನ್ನು ಗಣನೆಗೆ ಬಾರದವರಂತೆಯೂ ಜನರು ನಿಮ್ಮನ್ನು ಸನ್ಮಾನಿಸದಂತೆಯೂ ಮಾಡುವೆನು.”


ಇಸ್ರೇಲ್ ಅಧಿಕ ಹಣ್ಣುಗಳನ್ನು ಕೊಡುವ ದ್ರಾಕ್ಷಿಬಳ್ಳಿಯಂತಿದೆ. ಆದರೆ ಇಸ್ರೇಲ್ ಅಭಿವೃದ್ಧಿ ಹೊಂದಿದ ಹಾಗೆ ಅವರು ಸುಳ್ಳುದೇವರುಗಳನ್ನು ಪೂಜಿಸಲು ಹೆಚ್ಚುಹೆಚ್ಚು ವೇದಿಕೆಗಳನ್ನು ಕಟ್ಟಿದರು. ಅವರ ದೇಶವು ಉತ್ತಮವಾಗುತ್ತಾ ಬರುತ್ತಿರುವಾಗ ಅವರು ತಮ್ಮ ಸುಳ್ಳುದೇವರುಗಳಿಗೆ ಉತ್ತಮ ಕಲ್ಲುಗಳಿಂದ ವೇದಿಕೆಗಳನ್ನು ಕಟ್ಟಲು ಪ್ರಾರಂಭಿಸಿದರು.


ಅವರು ತಿನ್ನುವರು ಆದರೆ ಅವರು ತೃಪ್ತಿಹೊಂದುವದಿಲ್ಲ. ಅವರು ಲೈಂಗಿಕಪಾಪ ಮಾಡುವರು ಆದರೆ ಅವರಿಗೆ ಮಕ್ಕಳಾಗುವದಿಲ್ಲ. ಕಾರಣವೇನೆಂದರೆ ಅವರು ಯೆಹೋವನನ್ನು ತೊರೆದು ವೇಶ್ಯೆಯರಂತೆ ವರ್ತಿಸಿದರು.


“ಆದರೆ ಅವನು ಯೆಹೋವನ ಕೋಪವನ್ನು ತಿಳಿದುಕೊಳ್ಳುವನು. ಆ ಕೋಪವು ಯೆಹೋವನ ಬಲಗೈಯಲ್ಲಿರುವ ವಿಷದ ಪಾತ್ರೆಯಂತಿರುವುದು. ಆ ವ್ಯಕ್ತಿಯು ಆ ಕೋಪವನ್ನು ರುಚಿನೋಡುವನು ಮತ್ತು ಅಮಲೇರಿದವನಂತೆ ನೆಲದ ಮೇಲೆ ಕುಸಿದುಬೀಳುವನು. “ದುಷ್ಟ ಅಧಿಪತಿಯೇ, ನೀನು ಆ ಪಾತ್ರೆಯಿಂದ ಕುಡಿಯುವೆ. ನಿನಗೆ ಅವಮಾನವೇ ಹೊರತು, ಮಾನ ಸಿಗುವುದಿಲ್ಲ.


ಕಳ್ಳರು ದಾರಿಯಲ್ಲಿ ಹೊಂಚುಹಾಕುತ್ತಾ ಜನರನ್ನು ಸೂರೆಮಾಡಲು ಕಾಯುತ್ತಿರುತ್ತಾರೆ. ಅದೇ ರೀತಿಯಲ್ಲಿ ಶೆಕೆಮಿಗೆ ಹೋಗುವ ದಾರಿಯಲ್ಲಿ ಯಾಜಕರು ಕಾಯುತ್ತಾ ಹಾದುಹೋಗುತ್ತಿರುವ ಜನರ ಮೇಲೆ ಬೀಳುವರು. ಅವರು ದುಷ್ಕೃತ್ಯಗಳನ್ನು ಮಾಡಿರುತ್ತಾರೆ.


“ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.


ನಮ್ಮ ಪೂರ್ವಿಕರ ಕಾಲದಿಂದ ಈ ತನಕ ನಾವು ಮಹಾಪರಾಧಗಳನ್ನು ಮಾಡಿದ್ದೇವೆ. ನಮ್ಮ ಪಾಪಗಳಿಗಾಗಿ ನಮಗೂ ನಮ್ಮ ರಾಜರುಗಳಿಗೂ ನಮ್ಮ ಯಾಜಕರುಗಳಿಗೂ ಶಿಕ್ಷೆಯಾಯಿತು. ಅನ್ಯದೇಶದ ರಾಜರುಗಳು ನಮ್ಮ ದೇಶವನ್ನು ಆಕ್ರಮಿಸಿ ನಮ್ಮ ಜನರನ್ನು ಸೆರೆಯಾಳುಗಳಾಗಿ ಒಯ್ದರು; ನಮ್ಮ ಐಶ್ವರ್ಯವನ್ನು ಸೂರೆಗೈದು ನಮ್ಮನ್ನು ನಾಚಿಕೆಗೆ ಒಳಪಡಿಸಿದರು. ಈಗಲೂ ಅದೇ ಅನುಭವ ನಮಗಾಗಿದೆ!


“ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರುಮಾಡುವೆನು. ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ.


“ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿ ಹೋಗುವದು. ಅವರಲ್ಲಿ ಗರ್ಭಿಣಿಯರು ಇರುವದಿಲ್ಲ. ಹೆರುವದೂ ಇಲ್ಲ. ಶಿಶುಗಳೂ ಇರುವದಿಲ್ಲ.


ಅಶ್ಶೂರದ ಅರಸನಿಗೆ ಬಹುಮಾನವಾಗಿ ಅದು ಒಯ್ಯಲ್ಪಡುವುದು; ಅವನು ಇಸ್ರೇಲರ ನಾಚಿಕೆಗೆಟ್ಟ ವಿಗ್ರಹವನ್ನು ಇಟ್ಟುಕೊಳ್ಳುವನು. ಇಸ್ರೇಲ್ ತನ್ನ ವಿಗ್ರಹಕ್ಕಾಗಿ ನಾಚಿಕೆಪಡುವದು.


“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು