Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:13 - ಪರಿಶುದ್ದ ಬೈಬಲ್‌

13 ಎಫ್ರಾಯೀಮು ತನ್ನ ವ್ಯಾಧಿಯನ್ನು ನೋಡಿದನು. ಯೆಹೂದವು ತನ್ನ ಗಾಯಗಳನ್ನು ನೋಡಿದನು. ಆಮೇಲೆ ಸಹಾಯಕ್ಕಾಗಿ ಅಶ್ಶೂರ್ಯರ ಬಳಿಗೆ ಹೋದರು. ಆ ಮಹಾ ಅರಸನ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಆದರೆ ಆ ಅರಸನು ನಿಮ್ಮನ್ನು ಗುಣಮಾಡನು. ನಿಮ್ಮ ಗಾಯಗಳನ್ನು ಗುಣಮಾಡಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಎಫ್ರಯಿಮ್ ತನ್ನ ರೋಗವನ್ನು ಅರಿತುಕೊಂಡಿತು; ಜುದೇಯವು ತನ್ನ ಹುಣ್ಣನ್ನು ಕಂಡುಕೊಂಡಿತು. ಆಗ ಎಫ್ರಯಿಮ್ ಅಸ್ಸೀರಿಯಾದ ಕಡೆಗೆ ತಿರುಗಿಕೊಂಡು ಜಗಳಗಂಟಿಯಾದ ರಾಜನ ಬಳಿಗೆ ದೂತರನ್ನು ಕಳುಹಿಸಿತು. ಆದರೆ ಅವನು ನಿಮ್ಮ ರೋಗವನ್ನು ವಾಸಿಮಾಡಲಾರನು, ನಿಮ್ಮ ಹುಣ್ಣನ್ನು ಗುಣಪಡಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ವ್ರಣವನ್ನು ಗುಣಪಡಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಎಫ್ರಾಯೀಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ, ಎಫ್ರಾಯೀಮ್ ಅಸ್ಸೀರಿಯಕ್ಕೆ ತಿರುಗಿ, ಸಹಾಯಕ್ಕಾಗಿ ಮಹಾ ಅರಸನ ಬಳಿಗೆ ಕಳುಹಿಸಿತು. ಆದರೆ ನಿಮ್ಮನ್ನು ಗುಣಪಡಿಸಲು ಅವನು ಶಕ್ತನಲ್ಲ. ನಿಮ್ಮ ಗಾಯವನ್ನು ಗುಣಪಡಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:13
16 ತಿಳಿವುಗಳ ಹೋಲಿಕೆ  

ಹೀಗೆ ಎಫ್ರಾಯೀಮ್ ತಿಳಿವಳಿಕೆ ಇಲ್ಲದ ಮೂರ್ಖ ಪಾರಿವಾಳದಂತಾಗಿದೆ. ಜನರು ಸಹಾಯಕ್ಕಾಗಿ ಈಜಿಪ್ಟನ್ನು ಕರೆದರು, ಅಶ್ಶೂರ್ಯದ ಕಡೆಗೆ ಓಡಿದರು.


ಎಫ್ರಾಯೀಮ್ ಸಮಯವನ್ನು ಹಾಳು ಮಾಡುತ್ತಿದ್ದಾನೆ. ಇಸ್ರೇಲು ದಿನವಿಡೀ ಗಾಳಿಯನ್ನು ಹಿಮ್ಮೆಟ್ಟುತ್ತಿದ್ದಾನೆ. ಜನರು ಹೆಚ್ಚೆಚ್ಚಾಗಿ ಸುಳ್ಳು ಹೇಳುತ್ತಿದ್ದಾರೆ; ಹೆಚ್ಚೆಚ್ಚಾಗಿ ಕದಿಯುತ್ತಾರೆ. ಅಶ್ಶೂರ್ಯದವರೊಂದಿಗೆ ಒಪ್ಪಂದ ಮಾಡಿರುತ್ತಾರೆ. ತಮ್ಮ ಆಲೀವ್ ಎಣ್ಣೆಯನ್ನು ಈಜಿಪ್ಟಿಗೆ ಕೊಂಡೊಯ್ಯುತ್ತಿದ್ದಾರೆ.


ಅಶ್ಶೂರದ ಅರಸನಿಗೆ ಬಹುಮಾನವಾಗಿ ಅದು ಒಯ್ಯಲ್ಪಡುವುದು; ಅವನು ಇಸ್ರೇಲರ ನಾಚಿಕೆಗೆಟ್ಟ ವಿಗ್ರಹವನ್ನು ಇಟ್ಟುಕೊಳ್ಳುವನು. ಇಸ್ರೇಲ್ ತನ್ನ ವಿಗ್ರಹಕ್ಕಾಗಿ ನಾಚಿಕೆಪಡುವದು.


ಎಫ್ರಾಯೀಮನು ತನ್ನ ಪ್ರೇಮಿಗಳ ಬಳಿಗೆ ಹೋದನು. ಕಾಡುಕತ್ತೆಯಂತೆ ಅಶ್ಶೂರ್ಯದ ಕಡೆಗೆ ಅಡ್ಡಾಡುತ್ತಾ ಹೋದನು.


ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರಾದ ನಿಮಗೆ ಗುಣವಾಗದ ಗಾಯವಾಗಿದೆ. ನಿಮಗೆ ವಾಸಿಯಾಗದ ನೋವಾಗಿದೆ.


ಅಶ್ಶೂರ್ ದೇಶದ ರಾಜನಾದ ಪೂಲನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಮೆನಹೇಮನು ಪೂಲನಿಗೆ ಮೂವತ್ನಾಲ್ಕು ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು. ಪೂಲನು ಮೆನಹೇಮನಿಗೆ ಬೆಂಬಲವನ್ನು ನೀಡಲು ಮತ್ತು ಮೆನಹೇಮನ ರಾಜ್ಯವನ್ನು ಬಲಪಡಿಸಲು ಹೀಗೆ ಮಾಡಿದನು:


ಸಮಾರ್ಯದ ಗಾಯವು ವಾಸಿಯಾಗದು. ಆಕೆಯ ರೋಗವು (ಪಾಪ) ಯೆಹೂದಕ್ಕೆ ಹಬ್ಬಿಯದೆ. ಅದು ನನ್ನ ಜನರ ಪಟ್ಟಣದ ಹೆಬ್ಬಾಗಿಲಿನವರೆಗೆ ಹೋಗಿದೆ. ಜೆರುಸಲೇಮಿನ ತನಕ ಪಸರಿಸಿಯದೆ.


ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”


ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಆ ಸಂದೇಶವೇನೆಂದರೆ: “ನಾನು ನಿನ್ನ ಸೇವಕ. ನಾನು ನಿನಗೆ ಮಗನಂತಿದ್ದೇನೆ. ನೀನು ಬಂದು, ಅರಾಮ್ಯರ ರಾಜನಿಂದ ಮತ್ತು ಇಸ್ರೇಲಿನ ರಾಜನಿಂದ ನನ್ನನ್ನು ರಕ್ಷಿಸು. ಅವರು ನನ್ನ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆ.”


ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.


ಆದರೆ ಆ ಸಹೋದರನು ಎದ್ದುನಿಂತು, “ನನ್ನಿಂದ ಆಗುವುದಿಲ್ಲ, ನನ್ನ ಮನೆಯಲ್ಲಿ ಸಾಕಷ್ಟು ಧಾನ್ಯವಾಗಲಿ ಬಟ್ಟೆಯಾಗಲಿ ಇಲ್ಲ. ನನ್ನನ್ನು ನಾಯಕನನ್ನಾಗಿ ಮಾಡಬೇಡಿ” ಎಂದು ಹೇಳುವನು.


“ಒಹೊಲಳು ನನಗೆ ಅಪನಂಬಿಗಸ್ತಳಾದಳು. ಆಕೆ ಸೂಳೆಯಂತೆ ಜೀವಿಸತೊಡಗಿದಳು. ಆಕೆ ಪುರುಷರಿಗಾಗಿ ಆಸೆಪಟ್ಟಳು.


ಆಕೆಯು ತನ್ನ ಪ್ರಿಯತಮರ ಹಿಂದೆ ಓಡಿಹೋದರೂ ಅವರನ್ನು ಹಿಡಿಯಲಾರಳು. ಆಕೆಯು ತನ್ನ ಪ್ರಿಯತಮರನ್ನು ಹುಡುಕುವಳು. ಆದರೆ ಅವರು ಆಕೆಗೆ ಸಿಗುವುದಿಲ್ಲ. ಆಗ ಆಕೆ ಹೀಗೆ ಹೇಳುವಳು, ‘ನಾನು ನನ್ನ ಮೊದಲನೇ ಪತಿಯ ಬಳಿಗೆ (ಯೆಹೋವನು) ಹೋಗುವೆನು. ನಾನು ಆತನೊಂದಿಗೆ ಇದ್ದಾಗ ನನ್ನ ಜೀವಿತವು ಎಷ್ಟೋ ಚೆನ್ನಾಗಿತ್ತು. ಈಗಿನ ನನ್ನ ಜೀವಿತಕ್ಕಿಂತ ಆಗಿನ ಜೀವಿತವು ಎಷ್ಟೋ ಮೇಲಾಗಿತ್ತು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು