Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 6:3 - ಪರಿಶುದ್ದ ಬೈಬಲ್‌

3 ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನನ್ನು ತಿಳಿದುಕೊಳ್ಳೋಣ, ಹುಡುಕಿ ಹುಡುಕಿ ತಿಳಿದುಕೊಳ್ಳೋಣ; ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ ಭೂವಿುಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು [ಅಂದುಕೊಂಡು ನನ್ನನ್ನು ಮರೆಹೊಗುವರು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 6:3
36 ತಿಳಿವುಗಳ ಹೋಲಿಕೆ  

ಇಸ್ರೇಲಿಗೆ ನಾನು ಇಬ್ಬನಿಯಂತಿರುವೆನು. ನೆಲದಾವರೆಯಂತೆ ಇಸ್ರೇಲ್ ಅರಳುವನು. ಲೆಬನೋನಿನ ದೇವದಾರು ವೃಕ್ಷಗಳಂತೆ ಸೊಂಪಾಗಿ ಬೆಳೆಯುವನು.


ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ.


ಹುಲ್ಲುಗಾವಲಿನ ಮೇಲೆ ಸುರಿಯುವ ಮಳೆಯಂತೆಯೂ ಭೂಮಿಯನ್ನು ಹದಗೊಳಿಸುವ ಹಿತವಾದ ಮಳೆಯಂತೆಯೂ ನೀನು ಅವನಿಗೆ ಸಹಾಯಕನಾಗಿರು.


“ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”


ಯೇಸು, “ಪರಲೋಕರಾಜ್ಯದ ರಹಸ್ಯವಾದ ಸತ್ಯಗಳನ್ನು ನೀವು ಮಾತ್ರ ತಿಳಿದುಕೊಳ್ಳಬಲ್ಲಿರಿ. ಈ ಸತ್ಯಗಳ ರಹಸ್ಯವು ಬೇರೆ ಜನರಿಗೆ ತಿಳಿಯಲಾರದು.


ವಸಂತ ಕಾಲದಲ್ಲಿ ಮಳೆಗಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಯೆಹೋವನು ಮಿಂಚನ್ನು ಕಳುಹಿಸುವನು; ಆಗ ಮಳೆ ಸುರಿಯುವುದು ಮತ್ತು ದೇವರು ಎಲ್ಲರ ಹೊಲಗಳಲ್ಲಿ ಸಸಿಗಳು ಬೆಳೆಯುವಂತೆ ಮಾಡುವನು.


ಪ್ರವಾದಿಗಳು ಹೇಳಿದ ಸಂಗತಿಗಳನ್ನು ಇದು ನಮಗೆ ಮತ್ತಷ್ಟು ಖಚಿತಪಡಿಸಿತು. ಅವರು ಹೇಳಿದ್ದನ್ನು ನೀವು ಚಾಚು ತಪ್ಪದೆ ಅನುಸರಿಸುವುದು ಒಳ್ಳೆಯದೇ ಸರಿ. ಅವರು ಹೇಳಿದ ಸಂಗತಿಗಳು ಅಂಧಕಾರದಲ್ಲಿ ಪ್ರಕಾಶಿಸುವ ಬೆಳಕಿನಂತಿವೆ. ನಿಮ್ಮ ಹೃದಯಗಳಲ್ಲಿ ಹಗಲು ಆರಂಭವಾಗಿ, ಮುಂಜಾನೆಯ ನಕ್ಷತ್ರವು ಮೂಡುವವರೆಗೂ ಆ ಬೆಳಕು ಪ್ರಕಾಶಿಸುತ್ತದೆ.


“ನಮ್ಮ ದೇವರ ಮಹಾಕರುಣೆಯಿಂದ ಪರಲೋಕದಿಂದ ಹೊಸ ದಿನವೊಂದು ನಮಗಾಗಿ ಉದಯಿಸುವುದು.


“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.


ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.


ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಪಾಲುಗಾರರಾಗಿದ್ದೇವೆ. ಆರಂಭದಲ್ಲಿ ನಮಗಿದ್ದ ದೃಢನಂಬಿಕೆಯನ್ನು ಅಂತ್ಯದವರೆಗೂ ಬಲವಾಗಿ ಹಿಡಿದುಕೊಳ್ಳುವುದಾದರೆ ಇದು ನಿಜವಾಗುತ್ತದೆ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ನೀನು ಒಳ್ಳೆಯತನವನ್ನು ಬಿತ್ತಿದರೆ ಪ್ರೀತಿಯೆಂಬ ಬೆಳೆಯನ್ನು ಕೊಯ್ಯುವೆ. ನಿನ್ನ ನೆಲವನ್ನು ಉಳುಮೆ ಮಾಡು. ಆಗ ನೀನು ಯೆಹೋವನೊಂದಿಗೆ ಬೆಳೆಯನ್ನು ಕೊಯ್ಯುವೆ. ಆತನು ಬರುವನು. ಮತ್ತು ಆತನ ಒಳ್ಳೆಯತನವು ನಿನ್ನ ಮೇಲೆ ಮಳೆಯಂತೆ ಸುರಿಯುವದು.


ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.


ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು.


ನಿನ್ನನ್ನು ನಾನು ನನ್ನ ನಂಬಿಗಸ್ತಳಾದ ವಧುವನ್ನಾಗಿ ಮಾಡುವೆನು. ಆಗ ನೀನು ನನ್ನನ್ನು ನಿಜವಾಗಿಯೂ ಅರಿತುಕೊಳ್ಳುವೆ.


“ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.


ದೇವರು ನಮಗೆ ತನ್ನ ಆತ್ಮವನ್ನು ಸುರಿಸುವತನಕ ಇದು ಮುಂದುವರಿಯುವದು. ಈಗ ಯಾವ ಒಳ್ಳೆಯ ಸಂಗತಿಗಳು ನಡಿಯದೆ ಇರುವದರಿಂದ ದೇಶವು ಮರುಭೂಮಿಯಂತಿದೆ. ಆದರೆ ಮುಂದಿನ ದಿವಸಗಳಲ್ಲಿ ಮರುಭೂಮಿಯು ಕರ್ಮೆಲ್ ಪ್ರಾಂತ್ಯದಂತೆ ಆಗಿ ನ್ಯಾಯಧರ್ಮಗಳು ಅಲ್ಲಿ ನೆಲೆಸುವವು. ಕರ್ಮೆಲ್ ಹಸಿರು ಕಾಡಾಗಿದ್ದು ಶುಭವು ನೆಲೆಸಿರುವುದು.


ದೇವರೇ, ಭೂಪಾಲಕನು ನೀನೇ. ಭೂಮಿಗೆ ನೀರೆರೆದು ಹದಗೊಳಿಸುವಾತನು ನೀನೇ. ತೊರೆಗಳನ್ನು ತುಂಬಿಸಿ ಸುಗ್ಗಿಯನ್ನು ಬರಮಾಡುವಾತನು ನೀನೇ.


ನನ್ನ ಬೋಧನೆಯು ಮಳೆಯಂತೆ ಬರುವುದು. ನೆಲದ ಮೇಲೆ ಬೀಳುವ ಇಬ್ಬನಿಯಂತಿರುವುದು; ಮೃದುವಾದ ಹುಲ್ಲಿನ ಮೇಲೆ ಬೀಳುವ ಹದವಾದ ಮಳೆಯಂತಿರುವುದು; ಹಸಿರು ಸಸಿಗಳ ಮೇಲೆ ಬೀಳುವ ಮಳೆಯ ಹನಿಯಂತಿರುವುದು.


ಎಫ್ರಾತದ ಬೆತ್ಲೆಹೇಮೇ, ನೀನು ಯೆಹೂದದ ಪ್ರಾಂತ್ಯದಲ್ಲಿ ಅತಿ ಚಿಕ್ಕ ಊರು ಆಗಿರುವೆ. ನಿನ್ನಲ್ಲಿರುವ ಕುಟುಂಬಗಳು ಸ್ವಲ್ಪ ಮಾತ್ರವೇ. ಆದರೆ ಇಸ್ರೇಲನ್ನು ಆಳುವವನು ನನಗೋಸ್ಕರವಾಗಿ ನಿನ್ನಿಂದ ಹೊರಡುವನು. ಆತನ ಪ್ರಾರಂಭವು ಅನಾದಿ ಕಾಲದಿಂದಲೇ ಆಗಿದೆ.


ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”


ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”


ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


ಮಳೆಗಾಗಿಯೋ ಎಂಬಂತೆ ಅವರು ನನ್ನ ಮಾತುಗಳಿಗಾಗಿ ಎದುರುನೋಡುತ್ತಿದ್ದರು. ವಸಂತ ಕಾಲದಲ್ಲಿ ಬೀಳುವ ಮಳೆಯ ನೀರನ್ನೋ ಎಂಬಂತೆ ಅವರು ನನ್ನ ಮಾತುಗಳನ್ನು ಕುಡಿಯುತ್ತಿದ್ದರು.


ಆದರೆ ಜನಾಂಗಗಳಲ್ಲಿ ಚದರಿರುವ ಇಸ್ರೇಲಿನ ಅಳಿದುಳಿದವರು ಯೆಹೋವನಿಂದ ಹೊರಡುವ ಮಂಜಿನಂತಿರುವರು. ಅದು ಯಾರನ್ನೂ ಕಾಯುವದಿಲ್ಲ. ಅವರು ಹುಲ್ಲಿನ ಮೇಲೆ ಬಿದ್ದಿರುವ ಮಳೆಯಂತಿರುವರು. ಆ ಮಳೆಯು ಯಾರನ್ನೂ ಕಾಯುವದಿಲ್ಲ.


ಆದರೂ ಅವುಗಳ ಸಂದೇಶವು ಭೂಲೋಕದಲ್ಲೆಲ್ಲಾ ಹರಡುತ್ತದೆ; ಭೂಮಿಯ ಕಟ್ಟಕಡೆಗಳವರೆಗೂ ವ್ಯಾಪಿಸುತ್ತದೆ. ಆಕಾಶವು ಸೂರ್ಯನಿಗೆ ಮನೆಯಂತಿದೆ.


ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.


ಹೊತ್ತಾರೆಯ ಬೆಳಕಿನ ಕಿರಣಗಳಂತೆಯೂ ಮೋಡಗಳೇ ಇಲ್ಲದ ಮುಂಜಾನೆಯಂತೆಯೂ ಮಳೆ ಬಿದ್ದನಂತರ ಬರುವ ಸೂರ್ಯನ ಬೆಳಕಿನಂತೆಯೂ ಗರಿಕೆಯನ್ನು ನೆಲದಿಂದ ಮೂಡಿಸುವ ಮಳೆಯಂತೆಯೂ ಇದ್ದಾನೆ.’


ಸೂರ್ಯನು ಆಕಾಶದ ಒಂದು ಕಡೆಯಿಂದ ಉದಯಿಸಿ ಮತ್ತೊಂದು ಕೊನೆಗೆ ಓಡುತ್ತಾಹೋಗುವನು. ಅವನ ತಾಪಕ್ಕೆ ಯಾವುದೂ ಮರೆಯಾಗಿರಲಾರದು.


ನನ್ನ ಆತ್ಮವು ನಿನ್ನನ್ನು ಅಂಟಿಕೊಂಡಿರುವುದು. ನಿನ್ನ ಬಲಗೈ ನನ್ನ ಕೈಹಿಡಿದು ನಡೆಸುವುದು.


ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.


ಅವನ ಕೊಂಬೆಗಳು ಬೆಳೆದು ಹರಡಿಕೊಳ್ಳುತ್ತವೆ; ಅವನು ಅಂದವಾದ ಆಲೀವ್ ಮರದಂತಿರುವನು. ಲೆಬನೋನಿನ ದೇವದಾರು ಮರಗಳ ಸುವಾಸನೆಯಂತೆ ಅವನು ಗಮಗಮಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು