Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 6:7 - ಪರಿಶುದ್ದ ಬೈಬಲ್‌

7 ಆದರೆ ಜನರು ಆದಾಮನಂತೆ ಒಡಂಬಡಿಕೆಯನ್ನು ಮುರಿದುಹಾಕಿದರು. ಅವರ ದೇಶದಲ್ಲಿ ಅವರು ನನಗೆ ದ್ರೋಹಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಆದಾಮನಂತೆ ಅವರು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ. ಅವನಂತೆ ಅವರು ನನಗೆ ದ್ರೋಹವೆಸಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಪ್ರಾಪಂಚಿಕರಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಆದಾಮನಂತೆ ಒಡಂಬಡಿಕೆಯನ್ನು ಮೀರಿದ್ದಾರೆ. ಅಲ್ಲಿ ಅವರು ನನಗೆ ವಿರುದ್ಧವಾಗಿ ಅಪನಂಬಿಗಸ್ತಿಕೆಯಿಂದ ನಡೆದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 6:7
18 ತಿಳಿವುಗಳ ಹೋಲಿಕೆ  

“ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ನಿನ್ನ ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ.


ಅವರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರ ಮಕ್ಕಳು ಅನ್ಯರಿಗೆ ಹುಟ್ಟಿದ್ದಾರೆ. ಆದ್ದರಿಂದ ಈಗ ಆತನು ಅವರನ್ನೂ ಅವರ ದೇಶವನ್ನೂ ತಿರುಗಿ ನಾಶಮಾಡುವನು.”


ಒಂದು ದುಷ್ಕೃತ್ಯ ಮತ್ತೊಂದು ದುಷ್ಕೃತ್ಯವನ್ನು ಹಿಂಬಾಲಿಸಿ ಬಂದಿತು. ಒಂದು ಸುಳ್ಳು ಇನ್ನೊಂದು ಸುಳ್ಳನ್ನು ಹಿಂಬಾಲಿಸಿತು. ಜನರು ನನ್ನನ್ನು ಅರಿತುಕೊಳ್ಳಲಿಲ್ಲ.” ಯೆಹೋವನು ಆ ಮಾತುಗಳನ್ನು ಹೇಳಿದನು.


ಬೇರೆಯವರು ತಮ್ಮ ಪಾಪಗಳನ್ನು ಮರೆಮಾಡಲು ಪ್ರಯತ್ನಿಸಬಹುದು. ಆದರೆ ನಾನು ನನ್ನ ಯಾವ ಪಾಪವನ್ನೂ ಮರೆಮಾಡಲಿಲ್ಲ.


ದೇವರು ಪುರುಷನಿಗೆ, “ನೀನು ಬೆತ್ತಲೆಯಾಗಿರುವೆ ಎಂದು ನಿನಗೆ ಹೇಳಿದವರು ಯಾರು? ವಿಶೇಷವಾದ ಆ ಮರದ ಹಣ್ಣನ್ನು ನೀನು ತಿಂದೆಯಾ? ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆನಲ್ಲಾ!” ಎಂದು ಹೇಳಿದನು.


ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.


ಸ್ತ್ರೀಗೆ ಆ ಮರ ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರ ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.


ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ.


ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.


ಇಸ್ರೇಲ್ ಜನರೂ ಯೆಹೂದದ ಜನರೂ ನನಗೆ ಎಲ್ಲಾ ವಿಧದಲ್ಲಿ ದ್ರೋಹವನ್ನು ಮಾಡಿರುವರು” ಎಂದು ಯೆಹೋವನು ಹೇಳಿದನು.


‘ಈ ದುಷ್ಕೃತ್ಯಗಳನ್ನೆಲ್ಲಾ ಮಾಡಿ ಮುಗಿಸಿದ ಮೇಲೆಯೂ ಇಸ್ರೇಲ್ ನನ್ನಲ್ಲಿಗೆ ಬರಬಹುದು’ ಎಂದು ನಾನು ಭಾವಿಸಿದ್ದೆ. ಆದರೆ ಅವಳು ನನ್ನಲ್ಲಿಗೆ ಬರಲಿಲ್ಲ. ಇಸ್ರೇಲಿನ ವಂಚಕಿ ಸಹೋದರಿಯಾದ ಯೆಹೂದ ಎಂಬಾಕೆಯು ಮಾಡಿದ್ದನ್ನು ನೋಡಿದಳು.


ಆದರೆ ನಾನು ಇವುಗಳನ್ನು ತಿಳಿಸಿದ ಮೇಲೂ ನೀವು ನನ್ನ ಮಾತನ್ನು ಕೇಳದೆಹೋದಿರಿ. ನೀವು ನನ್ನಿಂದ ಏನೂ ಕಲಿಯಲಿಲ್ಲ. ನಾನು ಏನು ಹೇಳಿದರೂ ನೀವು ಕೇಳಲಿಲ್ಲ. ಪ್ರಾರಂಭದಿಂದಲೇ ನೀವು ನನಗೆ ವಿರುದ್ಧವಾಗುವಿರಿ ಎಂದು ನಾನು ತಿಳಿದಿದ್ದೆನು. ನೀವು ಹುಟ್ಟಿದಾಗಿನಿಂದಲೇ ನನಗೆ ವಿರುದ್ಧವಾಗಿ ದಂಗೆ ಎದ್ದಿರುವಿರಿ.


ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ. ಈ ಸ್ತುತಿಹಾಡುಗಳು ದೇವರ ಒಳ್ಳೆತನವನ್ನು ವರ್ಣಿಸುವವು. ಆದರೆ ನಾನು, “ಸಾಕು, ನನಗೆ ಸಾಕು. ನಾನು ನೋಡುವ ವಿಷಯಗಳು ಭಯಂಕರವಾಗಿವೆ. ದ್ರೋಹಿಗಳು ಜನರಿಗೆ ವಿರುದ್ಧವಾಗಿ ಎದ್ದು ಅವರಿಗೆ ಹಾನಿಮಾಡುವರು.”


ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಆ ಜನರು ಆ ಒಡಂಬಡಿಕೆಯನ್ನು ಮುರಿದರು.


ಆದರೆ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೆ ಎಲ್ಲಾ ಜನರು ಸಾಯಲೇಬೇಕಾಯಿತು. ಆದಾಮನು ಪಾಪ ಮಾಡಿದ್ದರಿಂದ ಸತ್ತನು. ದೇವರ ಆಜ್ಞೆಗೆ ಅವಿಧೇಯನಾದದ್ದೇ ಆ ಪಾಪ. ಆದರೆ ಆದಾಮನು ಮಾಡಿದ ಪಾಪಕ್ಕೆ ಸರಿಸಮಾನವಾದ ಪಾಪವನ್ನು ಮಾಡಿಲ್ಲದವರು ಸಹ ಸಾಯಬೇಕಾಯಿತು. ಆದಾಮನು ಮುಂದಿನ ಕಾಲದಲ್ಲಿ ಬರಲಿದ್ದ ಒಬ್ಬಾತನಿಗೆ (ಕ್ರಿಸ್ತನಿಗೆ) ಮುನ್ಸೂಚನೆಯಾಗಿದ್ದನು.


ನನ್ನ ಒಡಂಬಡಿಕೆಯನ್ನು ಮುರಿದ ಮತ್ತು ನನ್ನ ಸಮ್ಮುಖದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳದ ಜನರನ್ನು ನಾನು ತ್ಯಜಿಸುವೆನು. ಇವರು ನನ್ನ ಮುಂದೆ ಒಂದು ಕರುವನ್ನು ಎರಡು ತುಂಡುಗಳಾಗಿ ಕತ್ತರಿಸಿ ಇಟ್ಟು ಆ ಎರಡು ತುಂಡುಗಳ ಮಧ್ಯದಿಂದ ಹಾದುಹೋದರು.


ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು