Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:1 - ಪರಿಶುದ್ದ ಬೈಬಲ್‌

1 “ನಾನು ಇಸ್ರೇಲನ್ನು ಗುಣಪಡಿಸುವೆನು. ಆಗ ಎಫ್ರಾಯೀಮನು ಪಾಪಮಾಡಿದ್ದಾನೆಂದು ಜನರಿಗೆ ತಿಳಿದುಬರುವದು. ಜನರಿಗೆ ಸಮಾರ್ಯದವರ ಸುಳ್ಳು ತಿಳಿದುಬರುವದು. ಆ ನಗರದಲ್ಲಿ ಕಳ್ಳರು ಬರುತ್ತಾ ಹೋಗುತ್ತಾ ಇರುವದನ್ನು ಜನರು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲನ್ನು ಸ್ವಸ್ಥ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಅಧರ್ಮವೂ, ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ. ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನಾನು ನನ್ನ ಜನರ ದುರವಸ್ಥೆಯನ್ನು ನೀಗಿಸಿ ಇಸ್ರಯೇಲನ್ನು ಸ್ವಸ್ಥಗೊಳಿಸಬೇಕೆಂದಿರುವಾಗ ಎಫ್ರಯಿಮಿನ ಅಕ್ರಮ ಮತ್ತು ಸಮಾರ್ಯದ ದುಷ್ಟತನ ಬಯಲಿಗೆ ಬರುತ್ತವೆ. ಅವರು ಒಬ್ಬರಿಗೊಬ್ಬರು ಮೋಸಮಾಡುತ್ತಾರೆ. ಕಳ್ಳರಂತೆ ನುಗ್ಗಿ ಕನ್ನಹಾಕುತ್ತಾರೆ. ದರೋಡೆಗಾರರಂತೆ ದಾರಿಯಲ್ಲೇ ಸುಲಿಗೆಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲನ್ನು ಸ್ವಸ್ಥಮಾಡಬೇಕೆಂದಿರುವಾಗ ಎಫ್ರಾಯೀವಿುನ ಅಧರ್ಮವೂ ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ; ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಇಸ್ರಾಯೇಲನ್ನು ಗುಣ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಪಾಪಗಳನ್ನು ಬಹಿರಂಗಪಡಿಸುತ್ತೇನೆ. ಮತ್ತು ಸಮಾರ್ಯದ ಕೆಟ್ಟತನವನ್ನು ಪ್ರಕಟಪಡಿಸುತ್ತೇನೆ. ಅವರು ಸುಳ್ಳನ್ನು ನಡೆಸುತ್ತಾರೆ. ಕಳ್ಳನು ಒಳಗೆ ಬರುತ್ತಾನೆ ಮತ್ತು ಕಳ್ಳರ ಗುಂಪು ಹೊರಗೆ ಸುಲಿದುಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:1
30 ತಿಳಿವುಗಳ ಹೋಲಿಕೆ  

ಅವರು ನನ್ನನ್ನು ಬಿಟ್ಟು ತೊಲಗಿದರು. ಇದು ಅವರಿಗೆ ಕೆಡುಕು ಉಂಟುಮಾಡುವದು. ಅವರು ನನಗೆ ವಿಧೇಯರಾಗಲು ಇಷ್ಟಪಡಲಿಲ್ಲ. ಆದ್ದರಿಂದ ಅವರು ನಾಶವಾಗುವರು. ನಾನು ಅವರನ್ನು ರಕ್ಷಿಸಿ ಕಾಪಾಡಿದ್ದಾಗ್ಯೂ ಅವರು ನನಗೆ ವಿರುದ್ಧವಾಗಿ ಸುಳ್ಳಾಡಿದರು.


“ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಬೇಕು? ನಿನ್ನ ನಂಬಿಗಸ್ತಿಕೆಯು ಮುಂಜಾನೆಯ ಮಂಜಿನಂತಿದೆ. ನಿನ್ನ ನಂಬಿಗಸ್ತಿಕೆಯು ಇಬ್ಬನಿಯಂತಿದೆ. ಅದು ಬೇಗನೆ ಇಲ್ಲದೆಹೋಗುವದು.


ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ.


ಜನರು ಆಣೆ ಇಟ್ಟುಕೊಳ್ಳುತ್ತಾರೆ, ಸುಳ್ಳನ್ನಾಡುತ್ತಾರೆ, ಕೊಲೆ ಮಾಡುತ್ತಾರೆ ಮತ್ತು ಸೂರೆ ಮಾಡುತ್ತಾರೆ. ಅವರು ವ್ಯಭಿಚಾರವೆಂಬ ಪಾಪಗಳನ್ನು ಮಾಡುತ್ತಾರೆ. ಆದ್ದರಿಂದ ಅವರು ಮಕ್ಕಳನ್ನು ಹುಟ್ಟಿಸುತ್ತಾರೆ. ಜನರು ತಿರುಗಿತಿರುಗಿ ಕೊಲೆ ಮಾಡುತ್ತಾರೆ.


“ಜೆರುಸಲೇಮೇ, ಜೆರುಸಲೇಮೇ! ನೀನು ಪ್ರವಾದಿಗಳನ್ನು ಕೊಲ್ಲುವವಳು. ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ನೀನು ಕಲ್ಲೆಸೆದು ಕೊಲ್ಲುವೆ. ಕೋಳಿ ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಾನು ನಿನ್ನ ಜನರಿಗೆ ಸಹಾಯ ಮಾಡಲು ಎಷ್ಟೋ ಸಲ ಅಪೇಕ್ಷಿಸಿದೆ. ಆದರೆ ನೀನು ನನಗೆ ಆಸ್ಪದವನ್ನು ಕೊಡಲಿಲ್ಲ.


“ಜೆರುಸಲೇಮೇ, ಜೆರುಸಲೇಮೇ! ಪ್ರವಾದಿಗಳನ್ನು ಕೊಲ್ಲುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ಕಲ್ಲುಗಳಿಂದ ಕೊಲ್ಲುವವಳೇ, ಅನೇಕ ಸಲ ನಿನ್ನ ಜನರಿಗೆ ನಾನು ಸಹಾಯ ಮಾಡಬೇಕೆಂದಿದ್ದೆನು. ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವ ಹಾಗೆ ನಿನ್ನ ಜನರನ್ನು ಸೇರಿಸಿಕೊಳ್ಳಲು ನನಗೆ ಮನಸ್ಸಿತ್ತು. ಆದರೆ ನೀನು ಒಪ್ಪಲಿಲ್ಲ.


ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”


ಆ ಜನರು ಸಮಾರ್ಯದ ಪಾಪದ ಮೇಲೆ ಆಣೆಯಿಡುವರು, ‘ದಾನೇ, ನಿನ್ನ ದೇವರಾಣೆ ….’ ‘ಬೇರ್ಷೆಬದ ದೇವರಾಣೆ ….’ ಎಂಬುದಾಗಿ ಹೇಳುವರು. ಆದರೆ ಆ ಜನರು ಬಿದ್ದುಹೋಗುವರು. ಅಲ್ಲಿಂದ ತಿರುಗಿ ಏಳುವದೇ ಇಲ್ಲ.”


“ಎಫ್ರಾಯೀಮನು ಸುಳ್ಳುದೇವರುಗಳಿಂದ ನನ್ನನ್ನು ಸುತ್ತುವರಿದನು. ಇಸ್ರೇಲಿನ ಜನರು ನನಗೆ ವಿರುದ್ಧವಾಗಿ ಎದ್ದರು. ಆದರೆ ಅವರು ನಾಶವಾದರು. ಯೆಹೂದನು ಈಗಲೂ ದೇವರ ಜೊತೆಯಲ್ಲಿ ನಡೆಯುತ್ತಿದ್ದಾನೆ. ಯೆಹೂದನು ಪರಿಶುದ್ಧರಿಗೆ ನಿಷ್ಠೆಯಿಂದಿದ್ದಾನೆ.”


ಸಮಾರ್ಯದ ಜನರು ಬೇತಾವೆನಿನಲ್ಲಿ ಬಸವನನ್ನು ಆರಾಧಿಸುತ್ತಾರೆ. ಆ ಜನರು ನಿಜವಾಗಿಯೂ ಅಳುವರು. ಅವರ ಪೂಜಾರಿಗಳೂ ಅಳುವರು, ಯಾಕೆಂದರೆ ಅವರ ಸುಂದರವಾದ ವಿಗ್ರಹವು ಇಲ್ಲವಾಗುವದು. ಅದು ಒಯ್ಯಲ್ಪಡುವುದು.


ಎಫ್ರಾಯೀಮನು ತನ್ನ ಪ್ರೇಮಿಗಳ ಬಳಿಗೆ ಹೋದನು. ಕಾಡುಕತ್ತೆಯಂತೆ ಅಶ್ಶೂರ್ಯದ ಕಡೆಗೆ ಅಡ್ಡಾಡುತ್ತಾ ಹೋದನು.


ಯೆಹೋವನು ನೀವು ಮಾಡಿಕೊಂಡ ಬಸವನನ್ನು ನಿರಾಕರಿಸಿದ್ದಾನೆ. ಸಮಾರ್ಯವೇ, ಯೆಹೋವನು ಹೇಳುವುದೇನೆಂದರೆ, ‘ನಾನು ಇಸ್ರೇಲರ ವಿರುದ್ಧವಾಗಿ ತುಂಬಾ ಕೋಪಗೊಂಡಿದ್ದೇನೆ.’ ಇಸ್ರೇಲಿನ ಜನರು ಅವರ ಪಾಪಗಳಿಗಾಗಿ ಶಿಕ್ಷಿಸಲ್ಪಡುವರು. ಶಿಲ್ಪಿಯು ಅವರ ವಿಗ್ರಹಗಳನ್ನು ಮಾಡಿದನು. ಅವು ದೇವರಲ್ಲ. ಸಮಾರ್ಯದ ಬಸವನ ವಿಗ್ರಹಗಳು ಚೂರುಚೂರಾಗಿ ಒಡೆಯಲ್ಪಡುವವು.


“ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.


“ಅವನ ವಿಗ್ರಹಗಳೊಂದಿಗೆ ಎಫ್ರಾಯೀಮು ಸೇರಿರುತ್ತಾನೆ. ಆದ್ದರಿಂದ ಅವನನ್ನು ಸುಮ್ಮನೆ ಬಿಟ್ಟುಬಿಡು.


ಹಿರಿಯ ಅಕ್ಕನ ಹೆಸರು ಒಹೊಲ. ತಂಗಿಯ ಹೆಸರು ಒಹೊಲೀಬ. ಅವರಿಬ್ಬರೂ ನನ್ನ ಹೆಂಡತಿಯರಾದರು. ಅವರು ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಹೆತ್ತರು. ಒಹೊಲ ಎಂದರೆ ಸಮಾರ್ಯ; ಮತ್ತು ಒಹೊಲೀಬ ಎಂದರೆ ಜೆರುಸಲೇಮ್.


ನಿನ್ನ ಅಕ್ಕ ಸಮಾರ್ಯಳು. ಆಕೆಯು ನಿನ್ನ ಉತ್ತರ ದಿಕ್ಕಿನಲ್ಲಿ ತನ್ನ ಹೆಣ್ಣು ಮಕ್ಕಳೊಂದಿಗೆ (ಪಟ್ಟಣಗಳು) ವಾಸ ಮಾಡಿದ್ದಳು. ನಿನ್ನ ತಂಗಿಯು ಸೊದೋಮಳು. ಆಕೆ ನಿನ್ನ ದಕ್ಷಿಣದಲ್ಲಿ ತನ್ನ ಹೆಣ್ಣುಮಕ್ಕಳೊಂದಿಗೆ (ಪಟ್ಟಣಗಳು) ವಾಸಿಸಿದ್ದಳು.


ನಾವು ಬಾಬಿಲೋನನ್ನು ವಾಸಿಮಾಡುವ ಪ್ರಯತ್ನ ಮಾಡಿದೆವು. ಆದರೆ ಅದನ್ನು ವಾಸಿಮಾಡಲು ಆಗುವದಿಲ್ಲ. ಆದ್ದರಿಂದ ಅದನ್ನು ಬಿಟ್ಟುಬಿಡೋಣ. ನಾವು ನಮ್ಮನಮ್ಮ ದೇಶಗಳಿಗೆ ಹೋಗೋಣ. ಪರಲೋಕದ ದೇವರು ಬಾಬಿಲೋನಿಗೆ ವಿಧಿಸಬೇಕಾದ ಶಿಕ್ಷೆಯನ್ನು ನಿರ್ಧರಿಸುವನು. ಬಾಬಿಲೋನಿಗೆ ಏನಾಗಬೇಕೆಂಬುದನ್ನು ಆತನು ನಿರ್ಧರಿಸುವನು.


ಯಾಕೆಂದರೆ ನಾವು ಲೆಕ್ಕವಿಲ್ಲದಷ್ಟು ದ್ರೋಹಗಳನ್ನು ದೇವರಿಗೆ ವಿರುದ್ಧವಾಗಿ ಮಾಡಿರುತ್ತೇವೆ. ನಾವು ಮಾಡಿದ್ದು ತಪ್ಪೆಂದು ನಮ್ಮ ಪಾಪಗಳೇ ತೋರಿಸುತ್ತವೆ. ಹೌದು, ನಾವು ಈ ಕಾರ್ಯಗಳನ್ನು ಮಾಡಿ ದೋಷಿಗಳಾಗಿದ್ದೇವೆ.


ಸಮಾರ್ಯದ ಕಡೆಗೆ ನೋಡು! ಎಫ್ರಾಯೀಮಿನ ಮತ್ತರಾದ ಜನರು ಆ ಪಟ್ಟಣದ ಬಗ್ಗೆ ಬಹಳ ಅಭಿಮಾನಪಡುತ್ತಿದ್ದಾರೆ. ಆ ನಗರವು ಪರ್ವತದ ಮೇಲಿರುವುದು; ಅದರ ಸುತ್ತಲೂ ಫಲವತ್ತಾದ ಕಣಿವೆ ಇರುವುದು. ಸಮಾರ್ಯದ ಜನರು ತಮ್ಮ ನಗರವು ಸುಂದರವಾದ ಕಿರೀಟವೆಂದು ನೆನಸುತ್ತಾರೆ. ಆದರೆ ಅವರು ಕುಡಿದು ಮತ್ತರಾಗಿದ್ದಾರೆ. ಅವರ “ಸುಂದರ ಕಿರೀಟವು” ಒಣಗಿದ ತರಗೆಲೆಯಾಗಿದೆ.


“‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ.


“ಎಫ್ರಾಯೀಮೇ, ನಿನ್ನನ್ನು ಬಿಟ್ಟುಬಿಡಲು ನನಗೆ ಇಷ್ಟವಿಲ್ಲ. ಇಸ್ರೇಲೇ, ನಿನ್ನನ್ನು ಸಂರಕ್ಷಿಸಲು ನನಗೆ ಇಷ್ಟ. ನಿನ್ನನ್ನು ಅದ್ಮದಂತೆ ಮಾಡಲು ನನಗೆ ಮನಸ್ಸಿಲ್ಲ. ನಿನ್ನನ್ನು ಜೆಬೊಯೀಮಿನಂತೆ ಮಾಡಲು ನನಗೆ ಮನಸ್ಸಿಲ್ಲ. ನಾನು ನನ್ನ ನಿರ್ಧಾರವನ್ನು ಬದಲಾಯಿಸುತ್ತಿದ್ದೇನೆ. ನಿನ್ನ ಮೇಲಿರುವ ನನ್ನ ಪ್ರೀತಿಯು ಆಳವಾಗಿದೆ.


ನಾವು ಪಾಪಮಾಡಿ ಯೆಹೋವನಿಂದ ದೂರ ಹೋಗಿದ್ದೇವೆ. ಆತನಿಂದ ದೂರವಾಗಿ ಆತನನ್ನು ತೊರೆದುಬಿಟ್ಟಿದ್ದೇವೆ. ನಾವು ದುಷ್ಟತನವನ್ನೂ ದೇವರಿಗೆ ವಿರುದ್ಧವಾದ ಕಾರ್ಯಗಳನ್ನೂ ಆಲೋಚಿಸಿದ್ದೇವೆ. ನಮ್ಮ ಹೃದಯಗಳಲ್ಲಿ ದುಷ್ಟಯೋಜನೆಗಳನ್ನು ಹಾಕಿರುತ್ತೇವೆ.


ನ್ಯಾಯವು ನಮ್ಮಿಂದ ತೊಲಗಿಹೋಗಿದೆ. ಸತ್ಯವು ಬೀದಿ ಪಾಲಾಗಿದೆ. ನೀತಿಯು ಪಟ್ಟಣದೊಳಕ್ಕೆ ಪ್ರವೇಶಿಸಲಾರದು.


ಎಫ್ರಾಯೀಮ್ ಸಮಯವನ್ನು ಹಾಳು ಮಾಡುತ್ತಿದ್ದಾನೆ. ಇಸ್ರೇಲು ದಿನವಿಡೀ ಗಾಳಿಯನ್ನು ಹಿಮ್ಮೆಟ್ಟುತ್ತಿದ್ದಾನೆ. ಜನರು ಹೆಚ್ಚೆಚ್ಚಾಗಿ ಸುಳ್ಳು ಹೇಳುತ್ತಿದ್ದಾರೆ; ಹೆಚ್ಚೆಚ್ಚಾಗಿ ಕದಿಯುತ್ತಾರೆ. ಅಶ್ಶೂರ್ಯದವರೊಂದಿಗೆ ಒಪ್ಪಂದ ಮಾಡಿರುತ್ತಾರೆ. ತಮ್ಮ ಆಲೀವ್ ಎಣ್ಣೆಯನ್ನು ಈಜಿಪ್ಟಿಗೆ ಕೊಂಡೊಯ್ಯುತ್ತಿದ್ದಾರೆ.


ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿಗೆ ವಿರುದ್ಧವಾಗಿ ನಾನು ವಾದ ಮಾಡುತ್ತೇನೆ. ತಾನು ಮಾಡಿದ ಸಂಗತಿಗಳಿಗಾಗಿ ಯಾಕೋಬನು ಶಿಕ್ಷೆ ಅನುಭವಿಸಬೇಕು.


ಅಷ್ಡೋದ್ ಮತ್ತು ಈಜಿಪ್ಟಿನ ಉನ್ನತ ಬುರುಜುಗಳ ಬಳಿಗೆ ಹೋಗಿ ಈ ಸಂದೇಶವನ್ನು ಸಾರಿರಿ, “ಸಮಾರ್ಯದ ಪರ್ವತಗಳ ಬಳಿಗೆ ಬನ್ನಿರಿ. ಅಲ್ಲಿ ಒಂದು ದೊಡ್ಡ ಗಲಿಬಿಲಿಯನ್ನು ನೋಡುವಿರಿ. ಯಾಕೆಂದರೆ ಜನರಿಗೆ ಸರಿಯಾಗಿ ಜೀವಿಸುವ ರೀತಿ ಗೊತ್ತಿಲ್ಲ. ಅವರು ಜನರೊಂದಿಗೆ ಕ್ರೂರವಾಗಿ ವರ್ತಿಸುವರು. ಬೇರೆ ಜನರಿಂದ ವಸ್ತುಗಳನ್ನು ತೆಗೆದುಕೊಂಡು ಅವುಗಳನ್ನು ಉನ್ನತ ಬುರುಜುಗಳಲ್ಲಿ ಅಡಗಿಸಿಡುವರು. ಯುದ್ಧದಲ್ಲಿ ಸೂರೆ ಮಾಡಿದ ವಸ್ತುಗಳಿಂದ ಅವರ ಖಜಾನೆಯು ತುಂಬಿರುವದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು