Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:7 - ಪರಿಶುದ್ದ ಬೈಬಲ್‌

7 ಅವರು ಬಿಸಿ ಮಾಡಲ್ಪಟ್ಟ ಕುಲುಮೆಯಂತಿರುವರು. ಅವರು ತಮ್ಮನ್ನು ಆಳುವವರನ್ನು ನಾಶಮಾಡಿದರು. ಅವರ ರಾಜರುಗಳೆಲ್ಲಾ ಬಿದ್ದುಹೋದರು. ಅವರಲ್ಲಿ ಒಬ್ಬರಾದಲೂ ಸಹಾಯಕ್ಕಾಗಿ ನನಗೆ ಮೊರೆಯಿಡಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಎಲ್ಲರು ಒಲೆಯಂತೆ ಉರಿಯುತ್ತ ತಮ್ಮ ಅಧಿಕಾರಿಗಳನ್ನೇ ನುಂಗಿಬಿಡುತ್ತಾರೆ. ಅವರ ಅರಸರೆಲ್ಲ ಸತ್ತುಬಿದ್ದಿದ್ದಾರೆ. ನನಗೆ ಮೊರೆಯಿಡುವವರು ಅವರಲ್ಲಿ ಯಾರೂ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ. ಅವರು ತಮ್ಮ ನ್ಯಾಯಾಧಿಪತಿಗಳನ್ನು ನುಂಗಿಬಿಡುತ್ತಾರೆ. ಅವರ ಅರಸರೆಲ್ಲರು ಬಿದ್ದು ಹೋಗಿದ್ದಾರೆ. ಅವರಲ್ಲಿ ಒಬ್ಬನಾದರೂ ನನ್ನನ್ನು ಕರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:7
27 ತಿಳಿವುಗಳ ಹೋಲಿಕೆ  

ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನ ವಿರುದ್ಧ ಸಂಚುಗಳನ್ನು ಮಾಡಿ ಪೆಕಹನನ್ನು ಕೊಂದುಹಾಕಿದನು. ಪೆಕಹನ ನಂತರ ಹೋಶೇಯನು ಹೊಸ ರಾಜನಾದನು. ಉಜ್ಜೀಯನ ಮಗನಾದ ಯೋತಾಮನು ಯೆಹೂದದ ರಾಜನಾಗಿದ್ದ ಇಪ್ಪತ್ತನೆಯ ವರ್ಷದಲ್ಲಿ ಹೀಗಾಯಿತು.


ಪೆಕಹ್ಯನ ಸೇನೆಗೆ ರೆಮಲ್ಯನ ಮಗನಾದ ಪೆಕಹನು ಸೇನಾಧಿಪತಿಯಾಗಿದ್ದನು. ಅವನು ಪೆಕಹ್ಯನನ್ನು ಕೊಂದುಹಾಕಿದನು. ಅವನು ಸಮಾರ್ಯದಲ್ಲಿರುವ ರಾಜನ ಅರಮನೆಯಲ್ಲಿ ಪೆಕಹ್ಯನು ಅರ್ಗೋಬ್ ಮತ್ತು ಅರ್ಯೇ ಎಂಬವರನ್ನು ಸಹ ಕೊಂದುಹಾಕಿದನು. ಪೆಕಹ್ಯನನ್ನು ಪೆಕಹನು ಕೊಂದುಹಾಕಿದಾಗ ಅವನ ಸಂಗಡ ಗಿಲ್ಯಾದಿನ ಐವತ್ತು ಜನರಿದ್ದರು. ಪೆಕಹ್ಯನ ನಂತರ ಪೆಕಹನು ಹೊಸ ರಾಜನಾದನು.


ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಸಮಾರ್ಯಕ್ಕೆ ಬಂದನು. ಮೆನಹೇಮನು ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದುಹಾಕಿದನು. ನಂತರ ಮೆನಹೇಮನು ಅವನ ನಂತರ ಹೊಸ ರಾಜನಾದನು.


ಯಾಬೇಷನ ಮಗನಾದ ಶಲ್ಲೂಮನು ಜೆಕರ್ಯನ ವಿರುದ್ಧವಾಗಿ ಸಂಚುಗಳನ್ನು ಮಾಡಿದನು. ಶಲ್ಲೂಮನು ಜೆಕರ್ಯನನ್ನು ಜನರ ಮುಂದೆ ಕೊಂದುಹಾಕಿ ಹೊಸ ರಾಜನಾದನು.


ಇಸ್ರೇಲರು ತಮಗಾಗಿ ಅರಸನನ್ನು ಆರಿಸಿಕೊಂಡರು. ಆದರೆ ಸಲಹೆಗಳಿಗಾಗಿ ನನ್ನ ಬಳಿಗೆ ಬರಲಿಲ್ಲ. ಇಸ್ರೇಲರು ತಮ್ಮ ನಾಯಕರನ್ನು ಆರಿಸಿಕೊಂಡರು. ಆದರೆ ನಾನು ತಿಳಿದಿರುವ ನಾಯಕರನ್ನು ಆರಿಸಿಕೊಳ್ಳಲಿಲ್ಲ. ಇಸ್ರೇಲರು ತಮಗೆ ವಿಗ್ರಹಗಳನ್ನು ತಯಾರಿಸಲು ತಮ್ಮ ಬೆಳ್ಳಿಬಂಗಾರವನ್ನು ಉಪಯೋಗಿಸಿದರು. ಆದ್ದರಿಂದ ಅವರು ನಾಶವಾಗುವರು.


ಎಫ್ರಾಯೀಮನ ಹೆಮ್ಮೆಯು ಅವನಿಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತದೆ. ಜನರಿಗೆ ನಾನಾ ತರದ ಸಂಕಟಗಳು ಬಂದಾಗ್ಯೂ ಅವರು ತಮ್ಮ ದೇವರಾದ ಯೆಹೋವನ ಬಳಿಗೆ ಹೋಗಲಿಲ್ಲ. ಜನರು ತಮ್ಮ ಸಹಾಯಕ್ಕಾಗಿ ಆತನಿಗೆ ಮೊರೆಯಿಡಲಿಲ್ಲ.


ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ.


“ಯಾಕೋಬೇ, ನೀನು ನನಗೆ ಪ್ರಾರ್ಥಿಸಲಿಲ್ಲ. ಇಸ್ರೇಲೇ, ನೀನು ನನ್ನ ವಿಷಯದಲ್ಲಿ ಆಯಾಸಗೊಂಡಿದ್ದೀ.


ದೇವರು ಜನರನ್ನು ಶಿಕ್ಷಿಸಿದರೂ ಅವರು ಪಾಪ ಮಾಡುವದನ್ನು ನಿಲ್ಲಿಸುವದಿಲ್ಲ. ಅವರು ಆತನ ಬಳಿಗೆ ಹಿಂದಿರುಗಿಬರುವದಿಲ್ಲ. ಸರ್ವಶಕ್ತನಾದ ಯೆಹೋವನನ್ನು ಅವರು ಹಿಂಬಾಲಿಸುವುದಿಲ್ಲ.


“ದೇವರ ಬಗ್ಗೆ ಲಕ್ಷಿಸದವರು ಯಾವಾಗಲೂ ಕೋಪದಿಂದಿರುವರು. ದೇವರು ಅವರನ್ನು ದಂಡಿಸಿದರೂ ಅವರು ದೇವರಿಗೆ ಮೊರೆಯಿಡುವುದಿಲ್ಲ.


ಹೃದಯಪೂರ್ವಕವಾಗಿ ಅವರು ನನ್ನನ್ನು ಕರೆಯಲಿಲ್ಲ. ಹೌದು, ಅವರು ತಮ್ಮ ಹಾಸಿಗೆಗಳ ಮೇಲೆ ಅಳುವರು. ಆಹಾರಧಾನ್ಯ, ಹೊಸ ದ್ರಾಕ್ಷಾರಸವನ್ನು ಕೇಳುವಾಗ, ಬೇರೆಯವರ ದೇಶಗಳಲ್ಲಿ ಆಹಾರಕ್ಕಾಗಿ ಅಲೆದಾಡುವಾಗ ಅವರು ಅಳುವರು. ಆದರೆ ತಮ್ಮ ಹೃದಯಗಳಲ್ಲಿ ಅವರು ನನ್ನಿಂದ ದೂರವಾಗಿದ್ದಾರೆ.


ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”


ಆ ಕೇಡುಗಳೆಲ್ಲಾ ನಮಗೆ ಉಂಟಾದವು. ಇದೆಲ್ಲಾ ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿದಂತೆಯೇ ನಡೆದುಹೋಯಿತು. ಆದರೆ ಈವರೆಗೂ ನಾವು ನಿನ್ನ ಸಹಾಯವನ್ನು ಕೇಳಲಿಲ್ಲ. ಇಂದಿಗೂ ನಾವು ಪಾಪ ಮಾಡುವದನ್ನು ನಿಲ್ಲಿಸಲಿಲ್ಲ. ಯೆಹೋವನೇ, ಇನ್ನೂ ನಾವು ನಿನ್ನ ಸತ್ಯೋಪದೇಶದ ಕಡೆಗೆ ಗಮನ ಕೊಡುತ್ತಿಲ್ಲ.


“ನನ್ನ ಕೋಪದಿಂದ ದೇಶವು ನಾಶವಾಗದಂತೆ ಅದನ್ನು ರಕ್ಷಿಸಲು ಗೋಡೆಯನ್ನು ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಬ್ಬನನ್ನು ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ.


ಆಗ ಯೇಹುವು ತನ್ನ ಜನರಿಗೆ, “ಅವರನ್ನು ಜೀವಸಹಿತ ಹಿಡಿದು ತನ್ನಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನ ಬಂಧುಗಳನ್ನು ಜೀವಸಹಿತ ಹಿಡಿದು ತಂದರು. ಅಲ್ಲಿ ನಲವತ್ತೆರಡು ಮಂದಿ ಜನರಿದ್ದರು. ಯೇಹು ಬೆತ್‌ಎಕೇಡ್‌ನ ಬಾವಿಯ ಹತ್ತಿರ ಅವರನ್ನು ಕೊಂದುಹಾಕಿದನು. ಯೇಹುವು ಯಾರನ್ನೂ ಜೀವಸಹಿತ ಉಳಿಸಲಿಲ್ಲ.


ನಗರದ ನಾಯಕರಿಗೆ ಈ ಪತ್ರವು ಬಂದು ತಲುಪಿದಾಗ, ಅವರು ರಾಜನ ಎಪ್ಪತ್ತುಮಂದಿ ಮಕ್ಕಳನ್ನು ಕರೆದುಕೊಂಡು ಹೋಗಿ ಕೊಂದುಹಾಕಿದರು. ನಂತರ ಆ ನಾಯಕರು ರಾಜನ ಮಕ್ಕಳ ತಲೆಗಳನ್ನು ಬುಟ್ಟಿಗಳಲ್ಲಿ ಹಾಕಿ ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.


ಯೇಹುವು “ಈಜೆಬೆಲಳನ್ನು ಹೊರಕ್ಕೆ ಎಸೆಯಿರಿ!” ಎಂದು ಅವರಿಗೆ ಹೇಳಿದನು. ಆಗ ಕಂಚುಕಿಗಳು ಈಜೆಬೆಲಳನ್ನು ಕೆಳಕ್ಕೆ ಎಸೆದರು. ಈಜೆಬೆಲಳ ರಕ್ತವು ಗೋಡೆಗಳ ಮೇಲೆ ಮತ್ತು ಕುದುರೆಗಳ ಮೇಲೆ ಚಿಮ್ಮಿತು. ಕುದುರೆಗಳು ಈಜೆಬೆಲಳ ದೇಹದ ಮೇಲೆ ತುಳಿದಾಡಿದವು.


ಆದರೆ ಯೇಹು ತನ್ನ ಬಿಲ್ಲನ್ನು ಸೆಳೆದು, ಶಕ್ತಿಯನ್ನೆಲ್ಲ ಒಗ್ಗೂಡಿಸಿ ಯೋರಾಮನ ಬೆನ್ನಿಗೆ ಬಾಣದಿಂದ ಹೊಡೆದನು. ಬಾಣವು ಯೋರಾಮನ ಹೃದಯವನ್ನು ಛೇದಿಸಿತು. ಯೋರಾಮನು ತನ್ನ ರಥದಲ್ಲಿಯೇ ಸತ್ತುಬಿದ್ದನು.


ಆ ನಗರವು ವಶವಾದುದನ್ನು ಜಿಮ್ರಿಯು ಕಂಡು ಅರಮನೆಯೊಳಕ್ಕೆ ಹೋಗಿ ಬೆಂಕಿಯನ್ನು ಹತ್ತಿಸಿದನು. ಅವನು ಅರಮನೆಯನ್ನು ಸುಟ್ಟುಹಾಕಿ ತಾನೂ ಸುಟ್ಟುಕೊಂಡನು.


ಆದರೆ ಗೀನತನ ಮಗ ತಿಬ್ನಿಯ ಹಿಂಬಾಲಕರಿಗಿಂತಲೂ ಒಮ್ರಿಯ ಹಿಂಬಾಲಕರು ಬಲಶಾಲಿಗಳಾಗಿದ್ದರು. ಆದ್ದರಿಂದ ತಿಬ್ನಿಯನ್ನು ಕೊಲ್ಲಲಾಯಿತು; ಒಮ್ರಿಯು ರಾಜನಾದನು.


ಆಸನು ಯೆಹೂದದ ರಾಜನಾಗಿದ್ದ ಮೂರನೆಯ ವರ್ಷದಲ್ಲಿ ಇದು ಸಂಭವಿಸಿತು. ಅನಂತರ ಬಾಷನು ಇಸ್ರೇಲಿಗೆ ರಾಜನಾದನು.


ನಿನ್ನ ಅರಸನೆಲ್ಲಿ? ನಿನ್ನ ಯಾವ ಪಟ್ಟಣದಲ್ಲಿಯಾಗಲಿ ಅವನು ನಿನ್ನನ್ನು ರಕ್ಷಿಸಲಾರ. ನಿನ್ನ ನ್ಯಾಯಾಧೀಶರುಗಳೆಲ್ಲಿ? ನೀನು, ‘ನಮಗೆ ರಾಜನನ್ನೂ ನಾಯಕರನ್ನೂ ಕೊಡು’ ಎಂದು ಕೇಳಿಕೊಂಡೆ.


ಪಾಪಮಾಡಲು ಯೋಚಿಸುವವರಿಗೆ ಸಂಕಟವು ಒದಗುವದು. ಇವರು ಹಾಸಿಗೆಯ ಮೇಲೆ ಬಿದ್ದುಕೊಂಡು ಪಾಪಮಾಡಲು ಯೋಚಿಸುತ್ತಾರೆ. ಬೆಳಿಗ್ಗೆ ಸೂರ್ಯ ಮೂಡಲು ತಾವು ಯೋಚಿಸಿದ ಪಾಪವನ್ನು ಕಾರ್ಯಗತ ಮಾಡುತ್ತಾರೆ. ಯಾಕೆ? ಯಾಕೆಂದರೆ ಅವರಿಗೆ ತಮ್ಮ ಇಷ್ಟಪ್ರಕಾರ ನಡೆದುಕೊಳ್ಳಲು ಬಲವಿದೆ.


ದುಷ್ಟರು ಅರ್ಥಮಾಡಿಕೊಳ್ಳುವುದಿಲ್ಲವೇ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.


ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ. ನೀನು ಹೇಳಿದ್ದನ್ನು ನಿನ್ನ ಜನರು ನಿಜವಾಗಿಯೂ ಕೇಳಲಿಲ್ಲ. ನಿನ್ನಂಥ ದೇವರನ್ನು ಯಾರೂ ನೋಡಿಲ್ಲ. ನಿನ್ನ ಹೊರತು ಬೇರೆ ಯಾರೂ ದೇವರಿಲ್ಲ. ಜನರು ತಾಳ್ಮೆಯಿಂದಿದ್ದು ನಿನ್ನ ಸಹಾಯಕ್ಕಾಗಿ ಕಾದಿದ್ದರೆ ನೀನು ಅವರಿಗಾಗಿ ಮಹಾಕಾರ್ಯಗಳನ್ನು ಮಾಡುವೆ.


ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. ನಮ್ಮ ಸುಕಾರ್ಯಗಳೆಲ್ಲಾ ಹಳೇ ಕೊಳಕು ಬಟ್ಟೆಯಂತಿವೆ. ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. ನಮ್ಮ ಪಾಪಗಳು ಬಿರುಗಾಳಿಯಂತೆ ನಮ್ಮನ್ನು ಬಡಿದುಕೊಂಡುಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು