Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:11 - ಪರಿಶುದ್ದ ಬೈಬಲ್‌

11 “ಎಫ್ರಾಯೀಮ್ ಹೆಚ್ಚೆಚ್ಚಾಗಿ ಯಜ್ಞವೇದಿಕೆಗಳನ್ನು ಕಟ್ಟಿಸಿದನು. ಅದು ಪಾಪವಾಗಿತ್ತು. ಆ ವೇದಿಕೆಗಳ ಮೇಲೆಯೇ ಅವರು ಪಾಪಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎಫ್ರಾಯೀಮು ಯಜ್ಞವೇದಿಗಳನ್ನು ಹೆಚ್ಚೆಚ್ಚಾಗಿ ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣಮಿಸಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಎಫ್ರಯಿಮ್ ಪಾಪಪರಿಹಾರಕ್ಕಾಗಿ ಬಲಿಪೀಠಗಳನ್ನು ಕಟ್ಟಿದೆ. ಆ ಬಲಿಪೀಠಗಳೇ ಅದರ ಪಾಪಕ್ಕೆ ಕಾರಣವಾಗಿ ಪರಿಣಮಿಸಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎಫ್ರಾಯೀಮು ಯಜ್ಞವೇದಿಗಳನ್ನು ಹೆಚ್ಚೆಚ್ಚಾಗಿ ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣವಿುಸಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಎಫ್ರಾಯೀಮು ಪಾಪ ಪರಿಹಾರಕ್ಕಾಗಿ ಅನೇಕ ಬಲಿಪೀಠಗಳನ್ನು ಕಟ್ಟಿದ್ದರೂ, ಈ ಬಲಿಪೀಠಗಳೇ ಅವರ ಪಾಪಕ್ಕೆ ಕಾರಣವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:11
8 ತಿಳಿವುಗಳ ಹೋಲಿಕೆ  

ಆದರೆ ಗಿಲ್ಯಾದಿನ ಜನರು ಪಾಪ ಮಾಡಿದ್ದಾರೆ. ಅವರ ಬಳಿಯಲ್ಲಿ ಅನೇಕ ಭಯಂಕರವಾದ ವಿಗ್ರಹಗಳಿವೆ. ಗಿಲ್ಗಾಲಿನಲ್ಲಿ ಬಸವನ ವಿಗ್ರಹಗಳಿಗೆ ಜನರು ಯಜ್ಞವನ್ನರ್ಪಿಸುತ್ತಾರೆ. ಅವರಲ್ಲಿ ಅನೇಕ ಯಜ್ಞವೇದಿಕೆಗಳಿವೆ. ಹೇಗೆ ಉಳಿಮೆ ಮಾಡಿದ ಹೊಲದಲ್ಲಿ ಮಣ್ಣಿನ ಸಾಲುಗಳಿರುತ್ತದೋ ಅದೇ ರೀತಿಯಲ್ಲಿ ಅವರ ಬಳಿಯಲ್ಲಿ ವಿಗ್ರಹಗಳ ಸಾಲಿದೆ.


ಇಸ್ರೇಲ್ ಪಾಪ ಮಾಡುತ್ತಾ ಇನ್ನೂ ಹೆಚ್ಚಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿತು. ಆವೆನ್‌ನಲ್ಲಿರುವ ಎತ್ತರವಾದ ಸ್ಥಳ ನಾಶಮಾಡಲ್ಪಡುವದು. ಅದರ ಮೇಲೆ ಮುಳ್ಳುಗಿಡಗಳೂ ಹಣಜಿಗಳೂ ಬೆಳೆಯುವವು. ಆಗ ಅವರು ಪರ್ವತಗಳಿಗೆ, “ನಮ್ಮನ್ನು ಮುಚ್ಚಿರಿ” ಎಂದೂ ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ” ಎಂದೂ ಹೇಳುವರು.


ಆದ್ದರಿಂದ ನಾನು ನಿಮ್ಮನ್ನು ಈ ದೇಶದ ಹೊರಗೆ ಎಸೆಯುತ್ತೇನೆ. ನೀವು ಪರದೇಶಕ್ಕೆ ಸೆರೆಹೋಗುವಂತೆ ಮಾಡುತ್ತೇನೆ. ನೀವು ಮತ್ತು ನಿಮ್ಮ ಪೂರ್ವಿಕರು ಎಂದೂ ನೋಡದ ಪ್ರದೇಶಕ್ಕೆ ನೀವು ಹೋಗುವಿರಿ. ಆ ಪ್ರದೇಶದಲ್ಲಿ ನೀವು ನಿಮ್ಮ ಮನಸ್ಸಿಗೆ ಬಂದಷ್ಟು ಸುಳ್ಳುದೇವತೆಗಳ ಸೇವೆಮಾಡಬಹುದು. ನಾನು ನಿಮಗೆ ಸಹಾಯವನ್ನೂ ಮಾಡುವದಿಲ್ಲ, ಯಾವ ರೀತಿಯ ಒಲವನ್ನೂ ತೋರುವದಿಲ್ಲ.’”


ಅಲ್ಲಿ, ಮನುಷ್ಯರು ಕೈಯಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಅವು ಮರಕಲ್ಲುಗಳಿಂದ ರೂಪಿಸಲ್ಪಟ್ಟಿವೆ. ಅವು ನೋಡಲಾರವು, ಕೇಳಲಾರವು, ತಿನ್ನಲಾರವು ಮತ್ತು ಮೂಸಿನೋಡಲಾರವು!


“ಯೆಹೂದದ ಜನರ ಅಪರಾಧ ಅಳಿಸಲಾಗದ ಸ್ಥಳದಲ್ಲಿ ಬರೆಯಲಾಗಿದೆ. ಆ ಅಪರಾಧಗಳು ಕಬ್ಬಿಣದ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಪಾಪಗಳು ವಜ್ರದ ಮೊನೆಯುಳ್ಳ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಹೃದಯವೇ ಆ ಕಲ್ಲು, ಆ ಪಾಪಗಳು ಅವರ ಯಜ್ಞವೇದಿಕೆಗಳ ಕೊಂಬುಗಳಲ್ಲಿ ಕೆತ್ತಿವೆ.


ಇಸ್ರೇಲಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆ ದುಷ್ಕೃತ್ಯಗಳು ಅವರನ್ನು ತಮ್ಮ ದೇವರ ಬಳಿಗೆ ಹಿಂತಿರುಗಿ ಬಾರದಂತೆ ಮಾಡುತ್ತಿವೆ. ಅವರು ಯಾವಾಗಲೂ ಇತರ ದೇವರುಗಳ ಹಿಂದೆ ಹೇಗೆ ಹೋಗೋಣ ಎಂದು ಮಾರ್ಗವನ್ನು ಹುಡುಕುತ್ತಿದ್ದಾರೆ. ಅವರಿಗೆ ಯೆಹೋವನ ಪರಿಚಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು