Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:13 - ಪರಿಶುದ್ದ ಬೈಬಲ್‌

13 ಎಫ್ರಾಯೀಮನು ತನ್ನ ಮಕ್ಕಳನ್ನು ಉರುಲಿನ ಕಡೆಗೆ ನಡೆಸುತ್ತಿರುವದನ್ನು ನಾನು ನೋಡುತ್ತಿದ್ದೇನೆ. ಕೊಲೆಗಡುಕನೆದುರು ಎಫ್ರಾಯೀಮನು ತನ್ನ ಮಕ್ಕಳನ್ನು ತರುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನೆಟ್ಟಿರುವುದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎಫ್ರಯಿಮಿನ ಮಕ್ಕಳು ಬೇಟೆಗೆ ಗುರಿ ಆದವರಂತೆ ಕಾಣಿಸುತ್ತಾರೆ. ಎಫ್ರಯಿಮ್ ತನ್ನ ಪುತ್ರರನ್ನು ವಧ್ಯಸ್ಥಾನಕ್ಕೆ ಕರೆದೊಯ್ಯಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನಾಟಿರುವದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಕ್ಕೆ ಈಡಾಗುವಂತೆ ಕಳುಹಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎಫ್ರಾಯೀಮ್ ಟೈರ್‌ನಂತಹ ಸುಂದರವಾದ ಸ್ಥಳದಲ್ಲಿ ನೆಡುವುದನ್ನು ನಾನು ಕಂಡೆನು. ಆದರೆ ಎಫ್ರಾಯೀಮ್ ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:13
13 ತಿಳಿವುಗಳ ಹೋಲಿಕೆ  

ಅದರ ಬಗ್ಗೆ ಈ ರೀತಿಯಾಗಿ ಹೇಳು: “‘ತೂರೇ, ನೀನು ಸಮುದ್ರಕ್ಕೆ ಬಾಗಿಲು. ಅನೇಕ ದೇಶಗಳಿಗೆ ನೀನು ವ್ಯಾಪಾರಿ. ಕರಾವಳಿಯ ಅನೇಕ ದೇಶಗಳಿಗೆ ನೀನು ಪ್ರಯಾಣಿಸುವೆ.’ ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ. ತೂರೇ, ನೀನು ಅತಿ ಸುಂದರಳೆಂದು ಭಾವಿಸಿರುವೆ. ನೀನು ಪರಿಪೂರ್ಣ ಸುಂದರಳೆಂದು ತಿಳಿದಿರುವೆ.


ಆದರೆ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಹೆಂಡತಿಯು ಪಟ್ಟಣದೊಳಗೆ ವೇಶ್ಯೆಯಾಗುವಳು. ನಿನ್ನ ಗಂಡು, ಹೆಣ್ಣುಮಕ್ಕಳು ಕತ್ತಿಯಿಂದ ಸಾಯುವರು. ಅನ್ಯರು ನಿನ್ನ ದೇಶವನ್ನು ಕಿತ್ತುಕೊಂಡು ತಮ್ಮೊಳಗೆ ಹಂಚಿಕೊಳ್ಳುವರು. ಮತ್ತು ನೀನು ಪರದೇಶದಲ್ಲಿ ಸಾಯುವೆ. ಇಸ್ರೇಲಿನ ಜನರು ಖಂಡಿತವಾಗಿಯೂ ಸೆರೆಹಿಡಿಯಲ್ಪಟ್ಟು ತಮ್ಮ ದೇಶದಿಂದ ಒಯ್ಯಲ್ಪಡುವರು.’”


ಸಮಾರ್ಯವು ಶಿಕ್ಷಿಸಲ್ಪಡಬೇಕು. ಯಾಕೆಂದರೆ ಆಕೆಯು ತನ್ನ ದೇವರಿಗೆ ವಿರುದ್ಧವಾಗಿ ನಡೆದಳು. ಇಸ್ರೇಲರು ಖಡ್ಗದಿಂದ ಸಾಯುವರು. ಅವರ ಮಕ್ಕಳು ಹರಿಯಲ್ಪಟ್ಟು ಚೂರುಚೂರಾಗುವರು. ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವರು.”


ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿ ಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದುಬಿಡುವೆನು.”


ನಿನ್ನ ಸೈನ್ಯಕ್ಕೆ ರಣರಂಗದ ಸ್ವರವು ಕೇಳಿಸುವದು. ನಿನ್ನ ಕೋಟೆಗಳೆಲ್ಲವೂ ಕೆಡವಲ್ಪಡುವದು. ಬೇತ್‌ಅರ್ಬೇಲನ್ನು ಶಲ್ಮಾನನು ಕೆಡವಿದಂತೆ ಆಗುವದು. ಆ ಯುದ್ಧದ ಸಮಯದಲ್ಲಿ ತಾಯಿಯು ತನ್ನ ಮಕ್ಕಳೊಂದಿಗೆ ಕೊಲ್ಲಲ್ಪಡುವಳು.


ಎಫ್ರಾಯೀಮ್ ಶಿಕ್ಷಿಸಲ್ಪಡುವುದು. ಅದರ ಬೇರು ಒಣಗುತ್ತಲಿದೆ. ಇನ್ನು ಅವರಿಗೆ ಮಕ್ಕಳಾಗದು. ಒಂದುವೇಳೆ ಮಕ್ಕಳಾದಲ್ಲಿ ಅವರ ದೇಹದಿಂದ ಬರುವ ಆ ಅಮೂಲ್ಯ ಶಿಶುವನ್ನು ನಾನು ಸಾಯಿಸುವೆನು.


ಮೃತ್ಯುವು ಬಂದು ನಮ್ಮ ಕಿಟಕಿಗಳಿಂದ ಇಳಿದಿದೆ. ಮೃತ್ಯುವು ನಮ್ಮ ಅರಮನೆಗಳಲ್ಲಿ ಪ್ರವೇಶ ಮಾಡಿದೆ. ಬೀದಿಯಲ್ಲಿ ಆಡುವ ನಮ್ಮ ಮಕ್ಕಳಿಗೆ ಮೃತ್ಯುವು ಹಿಡಿದುಕೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸೇರುವ ನಮ್ಮ ಯುವಕರಿಗೆ ಮೃತ್ಯುವು ಹಿಡಿದುಕೊಂಡಿದೆ.”


ಶಲ್ಲೂಮನು ಸತ್ತನಂತರ, ಮೆನಹೇಮನು ತಿಪ್ಸಹುವನ್ನು ಮತ್ತು ಅದರ ಸುತ್ತಲಿನ ಪ್ರದೇಶವನ್ನು ಸೋಲಿಸಿದನು. ಜನರು ನಗರದ ಬಾಗಿಲನ್ನು ಅವನಿಗೆ ತೆರೆಯಲು ನಿರಾಕರಿಸಿದರು. ಆದ್ದರಿಂದ ಮೆನಹೇಮನು ಅವರನ್ನು ಸೋಲಿಸಿ ಆ ನಗರದಲ್ಲಿದ್ದ ಗರ್ಭಿಣಿ ಸ್ತ್ರೀಯರ ಹೊಟ್ಟೆಗಳನ್ನು ಸೀಳಿಸಿದನು.


ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನಿಂದ ದೂರ ಎಸೆದುಬಿಡುವೆನು.”


ದುಷ್ಟನು ಅನೇಕ ಮಕ್ಕಳನ್ನು ಪಡೆದುಕೊಂಡರೂ ಅವರು ಯುದ್ಧದಲ್ಲಿ ಕೊಲ್ಲಲ್ಪಡುವರು; ಅವರಿಗೆ ಊಟಕ್ಕೂ ಇರುವುದಿಲ್ಲ.


ಭೀತಿಯು ಸುತ್ತಮುತ್ತಲಿಂದ ನನ್ನ ಕಡೆಗೆ ಬರುವಂತೆ ನೀನು ಆಹ್ವಾನಿಸಿದೆ. ಯೆಹೋವನ ಕೋಪದ ದಿನದಂದು ಯಾರೂ ತಪ್ಪಿಸಿಕೊಳ್ಳಲಿಲ್ಲ. ಯಾರೂ ಉಳಿಯಲಿಲ್ಲ. ನಾನು ಸಾಕಿಸಲಹಿದವರನ್ನು ನನ್ನ ವೈರಿಯು ಸಂಹರಿಸಿದನು.


ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು