Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:17 - ಪರಿಶುದ್ದ ಬೈಬಲ್‌

17 ಆ ಜನರು ನನ್ನ ದೇವರ ಮಾತನ್ನು ಕೇಳಲೊಲ್ಲರು. ಆದ್ದರಿಂದ ಆತನು ಅವರಿಗೆ ಕಿವಿಗೊಡುವದಿಲ್ಲ; ಅವರು ದೇಶದೇಶಗಳಲ್ಲಿ ವಾಸಸ್ಥಾನಗಳಿಲ್ಲದೆ ಅಲೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ; ಅವರಿಗೆ ಜನಾಂಗಗಳಲ್ಲಿ ಅಲೆದಾಡುವ ಗತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತಮ್ಮ ಮಾತಿಗೆ ಕಿವಿಗೊಡದ ಈ ಜನರನ್ನು ಸರ್ವೇಶ್ವರ ತಳ್ಳಿಬಿಡುವರು. ಇತರ ಜನಾಂಗಗಳ ಮಧ್ಯೆ ಅವರು ಅಲೆಮಾರಿಗಳಂತೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ; ಅವರಿಗೆ ಜನಾಂಗಗಳಲ್ಲಿ ಅಲೆದಾಡುವ ಗತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನನ್ನ ದೇವರು ಅವರನ್ನು ತಳ್ಳಿಬಿಡುವರು. ಏಕೆಂದರೆ ಅವರು ಆತನಿಗೆ ವಿಧೇಯರಾಗಲಿಲ್ಲ. ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:17
34 ತಿಳಿವುಗಳ ಹೋಲಿಕೆ  

ಅವರು ನನ್ನನ್ನು ಬಿಟ್ಟು ತೊಲಗಿದರು. ಇದು ಅವರಿಗೆ ಕೆಡುಕು ಉಂಟುಮಾಡುವದು. ಅವರು ನನಗೆ ವಿಧೇಯರಾಗಲು ಇಷ್ಟಪಡಲಿಲ್ಲ. ಆದ್ದರಿಂದ ಅವರು ನಾಶವಾಗುವರು. ನಾನು ಅವರನ್ನು ರಕ್ಷಿಸಿ ಕಾಪಾಡಿದ್ದಾಗ್ಯೂ ಅವರು ನನಗೆ ವಿರುದ್ಧವಾಗಿ ಸುಳ್ಳಾಡಿದರು.


ಆತನಿಗೆ ವಿಧೇಯನಾಗದವನು ದೇವಜನರಿಂದ ಬೇರ್ಪಟ್ಟು ಮರಣ ಹೊಂದುವನು.’


ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರಂತೆ ಆಗಬೇಡಿರಿ. ಹಿಂದಿನ ಕಾಲದಲ್ಲಿ ಪ್ರವಾದಿಗಳು ಅವರ ಸಂಗಡ ಮಾತನಾಡಿದರು. ಅವರು, ‘ಸರ್ವಶಕ್ತನಾದ ಯೆಹೋವನು ನಿಮ್ಮ ಕೆಟ್ಟಜೀವಿತವನ್ನು ಬದಲಾಯಿಸಲು ಇಷ್ಟಪಡುತ್ತಾನೆ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿರಿ.’ ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ.


ನಾನು ಸಹಾಯಕ್ಕಾಗಿ ಯೆಹೋವನ ಕಡೆಗೆ ನೋಡುತ್ತೇನೆ. ದೇವರ ರಕ್ಷಣೆಗಾಗಿ ನಿರೀಕ್ಷಿಸುತ್ತೇನೆ. ನನ್ನ ದೇವರು ನನಗೆ ಕಿವಿಗೊಡುತ್ತಾನೆ.


ನೀವು ನನಗೆ ವಿಧೇಯರಾಗಿದ್ದರೆ, ತುಂಬಿಹರಿಯುವ ಹೊಳೆಯಂತೆ ಸಮಾಧಾನವು ನಿಮಗೆ ದೊರಕುತ್ತಿತ್ತು. ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿಮಗೆ ಒಳ್ಳೆಯವುಗಳು ಬರುತ್ತಿದ್ದವು.


ಇಸ್ರೇಲನ್ನು ನಾಶನ ಮಾಡುವದಕ್ಕಾಗಿ ಆಜ್ಞಾಪಿಸುವೆನು. ಇಸ್ರೇಲರನ್ನು ನಾನು ಪರದೇಶಗಳಲ್ಲಿ, ಚದರಿಸಿಬಿಡುವೆನು. ಒಬ್ಬನು ಜಾಳಿಗೆಯಲ್ಲಿ ಹಿಟ್ಟನ್ನು ಜಾಳಿಸುವಂತೆ ಇರುವುದು. ಒಳ್ಳೆಯ ಹಿಟ್ಟು ಜಾಳಿಗೆಯ ರಂಧ್ರದ ಮೂಲಕ ಕೆಳಗೆ ಬಿದ್ದರೆ, ಹಿಟ್ಟಿನ ಗಂಟುಗಳು ಜಾಳಿಗೆಯ ಮೇಲೆ ಸಿಕ್ಕಿಕೊಳ್ಳುವವು. ಯಾಕೋಬನ ಕುಟುಂಬಕ್ಕೆ ಇದೇ ರೀತಿಯಾಗುವುದು.


ಅವರು ತಿನ್ನುವರು ಆದರೆ ಅವರು ತೃಪ್ತಿಹೊಂದುವದಿಲ್ಲ. ಅವರು ಲೈಂಗಿಕಪಾಪ ಮಾಡುವರು ಆದರೆ ಅವರಿಗೆ ಮಕ್ಕಳಾಗುವದಿಲ್ಲ. ಕಾರಣವೇನೆಂದರೆ ಅವರು ಯೆಹೋವನನ್ನು ತೊರೆದು ವೇಶ್ಯೆಯರಂತೆ ವರ್ತಿಸಿದರು.


ಆಗ ಯೆಶಾಯನು ಹೇಳಿದ್ದೇನೆಂದರೆ, “ದಾವೀದನ ಮನೆತನದವರೇ, ಕಿವಿಗೊಟ್ಟು ಕೇಳಿರಿ. ನೀವು ಜನರ ತಾಳ್ಮೆಯನ್ನು ಪರೀಕ್ಷಿಸುತ್ತೀರಿ. ಆದರೆ ಅದು ನಿಮಗೆ ದೊಡ್ಡ ವಿಷಯವಲ್ಲ. ಆದರೆ ಈಗ ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದೀರಿ.


ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


ಯೆಹೋವನೇ, ನಾನಂತೂ ನಿನ್ನಲ್ಲೇ ಭರವಸವಿಟ್ಟಿದ್ದೇನೆ. ನೀನೇ ನನ್ನ ದೇವರು.


ದೇವರೇ, ನಾನು ಈ ಜನರಿಗಾಗಿ ಮಾಡಿರುವ ಒಳ್ಳೆಯದನ್ನೆಲ್ಲಾ ಜ್ಞಾಪಿಸಿಕೊ.


ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


ಆದರೆ ಮೀಕಾಯೆಹುವು, “ಯೆಹೋವನಾಣೆ, ಆತನು ಹೇಳಿದ್ದನ್ನೇ ನಾನು ಹೇಳುವೆನು” ಎಂದನು.


“‘ನಾನು ಇಸ್ರೇಲರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ಯೋಚಿಸಿದೆನು. ಲೋಕದಲ್ಲಿ ಅವರ ಹೆಸರು ಉಳಿಯದಂತೆ ಮಾಡುವೆನು ಎಂದು ನೆನಸಿದೆನು.


ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ.


ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ಅನುಗುಣವಾಗಿ ನಿಮ್ಮ ಪ್ರತಿಯೊಂದು ಕೊರತೆಯನ್ನು ನೀಗಿಸುವನು.


ತೋಮನು ಯೇಸುವಿಗೆ, “ನನ್ನ ಪ್ರಭುವೇ, ನನ್ನ ದೇವರೇ!” ಎಂದು ಹೇಳಿದನು.


ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ. ನಾನು ತಂದೆಯ ಬಳಿಗೆ ಇನ್ನೂ ಹಿಂತಿರುಗಿ ಹೋಗಿಲ್ಲ. ಆದರೆ ನೀನು ನನ್ನ ಸಹೋದರರ (ಶಿಷ್ಯರ) ಬಳಿಗೆ ಹೋಗಿ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತಿದ್ದೇನೆ’ ಎಂಬುದಾಗಿ ಹೇಳು” ಎಂದನು.


ಯೆಹೂದ್ಯರು, “ಇವನನ್ನು ನಾವು ಕಂಡುಕೊಳ್ಳಲಾಗದಂತೆ ಇವನು ಎಲ್ಲಿಗೆ ಹೋಗುವನು? ನಮ್ಮವರು ವಾಸವಾಗಿರುವ ಗ್ರೀಕ್ ಜನರ ಪಟ್ಟಣಗಳಿಗೆ ಹೋಗಿ ಗ್ರೀಕರಿಗೆ ಉಪದೇಶಿಸುವನೇ?


ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು. ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ.


ನನ್ನ ಜನರನ್ನು ‘ತಿರಸ್ಕರಿಸಲಾದ ಬೆಳ್ಳಿ’ ಎಂದು ಕರೆಯಲಾಗುವದು. ಏಕೆಂದರೆ ಯೆಹೋವನು ಅವರನ್ನು ಸ್ವಿಕರಿಸಲಿಲ್ಲ.”


“ನೀವು ಹೋಗುವ ದೇಶದಲ್ಲಿ ಬಹಳ ವರ್ಷ ಬಾಳಿದ ನಂತರ ನಿಮಗೆ ಮಕ್ಕಳೂ ಮೊಮ್ಮಕ್ಕಳೂ ಆಗುವರು. ಬಳಿಕ ನೀವು ನಿಮ್ಮ ಜೀವಿತಗಳನ್ನು ಹಾಳುಮಾಡಿಕೊಳ್ಳುವಿರಿ. ನೀವು ಎಲ್ಲಾ ಬಗೆಯ ವಿಗ್ರಹಗಳನ್ನು ಮಾಡಿಕೊಳ್ಳುವಿರಿ. ಅದು ದೇವರಿಗೆ ಬಹಳ ಕೋಪವನ್ನು ಉಂಟುಮಾಡುವುದು!


ಯೆಹೋವನು ನಿಮ್ಮನ್ನು ಅನ್ಯದೇಶಗಳಿಗೆ ಚದರಿಸಿಬಿಡುವನು. ಆತನು ನಿಮ್ಮನ್ನು ಚದರಿಸಿಬಿಡುವ ದೇಶಗಳವರ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಮಾತ್ರ ಜೀವಂತವಾಗಿ ಉಳಿದುಕೊಳ್ಳುವರು.


ಇಸ್ರೇಲಿನ ಜನರಾದ ನೀವು ಈ ದುಷ್ಕೃತ್ಯಗಳನ್ನು ಮಾಡುತ್ತಿದ್ದೀರಿ.” ಇದು ಯೆಹೋವನಾದ ನನ್ನ ಮಾತು: “ನಾನು ನಿಮಗೆ ಮತ್ತೆಮತ್ತೆ ಹೇಳಿದೆ, ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ನಾನು ನಿಮ್ಮನ್ನು ಕೂಗಿದೆ, ಆದರೆ ನೀವು ಉತ್ತರ ಕೊಡಲಿಲ್ಲ.


ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನಿಂದ ದೂರ ಎಸೆದುಬಿಡುವೆನು.”


“ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು