Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:7 - ಪರಿಶುದ್ದ ಬೈಬಲ್‌

7 ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದಂಡನೆಯ ದಿನಗಳು ಹತ್ತರಿಸಿವೆ, ಮುಯ್ಯಿತೀರಿಸುವ ದಿವಸಗಳು ಸಮೀಪಿಸಿವೆ; ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; [ಇಸ್ರಾಯೇಲೇ,] ನಿನ್ನ ಅಧರ್ಮವು ಬಹಳವಾಗಿರುವದರಿಂದಲೂ ವಿರೋಧವು ಹೆಚ್ಚಾಗಿರುವದರಿಂದಲೂ ಪ್ರವಾದಿಯು ಮೂರ್ಖನು, ದೇವರಾತ್ಮಾವಿಷ್ಟನು ಹುಚ್ಚನು [ಅಂದುಕೊಳ್ಳುತ್ತಿ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದಂಡನೆಯ ದಿವಸಗಳು ಬಂದಿವೆ, ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, ದ್ವೇಷವು ಹೆಚ್ಚಾಗಿರುವುದರಿಂದಲೂ, “ಪ್ರವಾದಿ ಮೂರ್ಖನೂ, ಪ್ರೇರಿತ ಮನುಷ್ಯನು ಹುಚ್ಚನೂ,” ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:7
40 ತಿಳಿವುಗಳ ಹೋಲಿಕೆ  

ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ. ಈಗ ನೀನು ಶಿಕ್ಷಿಸಲ್ಪಡುವೆ. ನೀನು ಈಗ ಗಲಿಬಿಲಿಗೆ ಒಳಗಾಗುವೆ!


ಯೇಹುವು ತನ್ನ ರಾಜನ ಅಧಿಕಾರಿಗಳ ಬಳಿಗೆ ಹಿಂದಿರುಗಿದನು. ಒಬ್ಬ ಅಧಿಕಾರಿಯು ಯೇಹುವಿಗೆ, “ಶುಭವಾರ್ತೆಯೇ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಯೇಹುವು ಸೇವಕರಿಗೆ, “ನೀವು ಆ ಮನುಷ್ಯನನ್ನು ಬಲ್ಲವರಾಗಿದ್ದೀರಿ; ಅವನ ಹುಚ್ಚಾಟದ ಮಾತುಗಳೂ ನಿಮಗೆ ತಿಳಿದಿವೆ” ಎಂದು ಉತ್ತರಿಸಿದನು.


ಯೇಸುವಿನ ಕುಟುಂಬದವರಿಗೆ ಈ ವಿಷಯಗಳೆಲ್ಲ ತಿಳಿದವು. ಯೇಸುವಿಗೆ ಹುಚ್ಚು ಹಿಡಿದಿದೆಯೆಂದು ಕೆಲವರು ಹೇಳಿದ್ದರಿಂದ ಆತನ ಕುಟುಂಬದವರು ಆತನನ್ನು ಕರೆದೊಯ್ಯಲು ಅಲ್ಲಿಗೆ ಬಂದರು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಬುದ್ಧಿಯಿಲ್ಲದ ಪ್ರವಾದಿಗಳೇ, ನಿಮಗೆ ಸಂಕಟಗಳು ಬರುವವು. ನೀವು ನಿಮ್ಮ ಸ್ವಂತ ಆತ್ಮವನ್ನು ಅನುಸರಿಸುತ್ತೀರಿ. ನೀವು ದರ್ಶನಗಳಲ್ಲಿ ಏನನ್ನೂ ಕಂಡಿಲ್ಲ.


ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು. ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ. ಅವರು ನಿನ್ನ ಪಾಪಕೃತ್ಯಗಳನ್ನು ಬಹಿರಂಗಪಡಿಸಲಿಲ್ಲ. ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ. ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು. ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.


ಆ ವಿಗ್ರಹಗಳು ನಿಷ್ಪ್ರಯೋಜಕ ವಸ್ತುಗಳಾಗಿವೆ. ಅವು ಅಪಹಾಸ್ಯಕ್ಕೆ ಯೋಗ್ಯವಾದವುಗಳಾಗಿವೆ. ನ್ಯಾಯನಿರ್ಣಯದ ಸಮಯದಲ್ಲಿ ಆ ವಿಗ್ರಹಗಳನ್ನು ನಾಶಪಡಿಸಲಾಗುವುದು.


ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶನವು ಬರುತ್ತಲಿದೆ. ಸಹಾಯಕ್ಕಾಗಿ ಎಲ್ಲಿಗೆ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು.


ನಾವು ಹುಚ್ಚರಾಗಿದ್ದರೆ ಅದು ದೇವರಿಗೋಸ್ಕರವಾಗಿಯೇ. ನಮಗೆ ಸ್ವಸ್ಥಬುದ್ಧಿಯಿದ್ದರೆ ಅದು ನಿಮಗೋಸ್ಕರವಾಗಿಯೇ.


ದೇವರು ತನ್ನ ಜನರನ್ನು ಶಿಕ್ಷಿಸುವ ಕಾಲದ ಬಗ್ಗೆ ಪ್ರವಾದಿಗಳು ಬರೆದಿರುವ ಸಂಗತಿಗಳೆಲ್ಲಾ ಆಗ ನೆರವೇರುತ್ತದೆ.


ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.


“ಮತ್ತೆಮತ್ತೆ ಆ ಸುಳ್ಳು ಪ್ರವಾದಿಗಳು ನನ್ನ ಜನರಿಗೆ ಸುಳ್ಳು ಹೇಳಿದರು. ಅವರು ಶಾಂತಿ ಇರುವದೆಂದು ಹೇಳಿದರು. ಆದರೆ ಶಾಂತಿ ಇರಲಿಲ್ಲ. ಅದು ಈ ರೀತಿಯಲ್ಲಿದೆ: ಜನರು ಬಲಹೀನವಾದ ಗೋಡೆಯನ್ನು ಕಟ್ಟುತ್ತಾರೆ; ಅದು ಬಲವಾಗಿ ಕಾಣುವಂತೆ ಮಾಡಲು ಪ್ರವಾದಿಗಳು ಅದಕ್ಕೆ ತೆಳುವಾದ ಮಡ್ಡಿ ಮಾಡುತ್ತಾರೆ.


ಶೆಮಾಯನೇ, ನೀನು ಚೆಫನ್ಯನಿಗೆ ಬರೆದ ಪತ್ರದಲ್ಲಿ ಹೀಗೆ ಹೇಳಿರುವೆ: ‘ಚೆಫನ್ಯನೇ, ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿದ್ದಾನೆ. ನೀನು ಯೆಹೋವನ ಆಲಯದ ಮೇಲ್ವಿಚಾರಕನಾಗಿರುವೆ. ಹುಚ್ಚನಂತೆ ವರ್ತಿಸುವ ಮತ್ತು ಪ್ರವಾದಿಯಂತೆ ನಟಿಸುವ ವ್ಯಕ್ತಿಯನ್ನು ನೀನು ಬಂಧಿಸಬೇಕು, ಅವನಿಗೆ ಕೋಳಹಾಕಿ ಕೊರಳಿಗೆ ಕಬ್ಬಿಣದ ಕಂಠಪಟ್ಟಿಯನ್ನು ಹಾಕಬೇಕು.


ಆ ಮಹಾನಗರವು ಒಡೆದು ಮೂರು ಭಾಗವಾಯಿತು. ಜನಾಂಗಗಳ ನಗರಗಳು ನಾಶವಾದವು. ಮಹಾನಗರವಾದ ಬಾಬಿಲೋನನ್ನು ದೇವರು ದಂಡಿಸದೆ ಬಿಡಲಿಲ್ಲ. ಆತನು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕುಡಿಯಲು ಕೊಟ್ಟನು.


ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ.


ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು. ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ.


ದೇವರೂ ಪ್ರವಾದಿಯೂ ಕಾವಲುಗಾರರಂತೆ ಎಫ್ರಾಯೀಮನ್ನು ಕಾಪಾಡುತ್ತಿದ್ದಾರೆ. ಆದರೆ ದಾರಿಯಲ್ಲಿ ಅನೇಕ ಉರುಲುಗಳಿವೆ. ಜನರು ಪ್ರವಾದಿಯನ್ನು ಹಗೆ ಮಾಡುತ್ತಾರೆ. ದೇವರ ಆಲಯದಲ್ಲಿಯೂ ಅವನನ್ನು ಹಗೆ ಮಾಡುತ್ತಾರೆ.


ನಾನು ಎಷ್ಟು ಶಕ್ತಿಶಾಲಿ ಎಂದು ತೋರಿಸುವೆನು. ನಾನು ಪವಿತ್ರನು ಎಂದು ಅವರಿಗೆ ತೋರಿಸುವೆನು. ಅನೇಕ ಜನಾಂಗಗಳು ನಾನು ಯಾರು ಎಂದು ತಿಳಿಯುವರು. ನಾನು ಯೆಹೋವನೆಂದು ಆಗ ಅವರು ತಿಳಿಯುವರು.


ನಾನು ಅವರೊಂದಿಗೆ ಮುಯ್ಯಿತೀರಿಸಿಕೊಳ್ಳುವೆನು. ನನ್ನ ಕೋಪವು ಅವರಿಗೆ ಪಾಠ ಕಲಿಸುವದು. ನಾನು ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”


ಸಂಬಳಕ್ಕಾಗಿ ದುಡಿಯುವ ಈಜಿಪ್ಟಿನ ಸೈನಿಕರು ಕೊಬ್ಬಿದ ಕರುಗಳಂತಿದ್ದಾರೆ. ಅವರೆಲ್ಲರು ಹಿಂತಿರುಗಿ ಓಡಿಹೋಗುವರು. ಅವರು ಧೈರ್ಯದಿಂದ ಧಾಳಿಯನ್ನು ಎದುರಿಸಲಾರರು. ಅವರ ವಿನಾಶದ ಕಾಲ ಬರುತ್ತಿದೆ. ಬೇಗ ಅವರನ್ನು ದಂಡಿಸಲಾಗುವುದು.


ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”


ಅನಾತೋತ್ ನಗರದಲ್ಲಿ ಒಬ್ಬನೂ ಉಳಿಯುವುದಿಲ್ಲ; ಯಾರೂ ಬದುಕುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ. ಅವರಿಗೆ ಏನಾದರೂ ಕೇಡಾಗುವಂತೆ ಮಾಡುತ್ತೇನೆ” ಎಂದು ಹೇಳಿದನು.


ಪ್ರವಾದಿಗಳು ಮತ್ತು ಯಾಜಕರು ನಮ್ಮ ಜನರ ಆಳವಾದ ಗಾಯಗಳನ್ನು ಕೇವಲ ಅಲ್ಪಗಾಯಗಳಂತೆ ಪರಿಗಣಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. “ಎಲ್ಲಾ ಚೆನ್ನಾಗಿದೆ, ಎಲ್ಲಾ ಚೆನ್ನಾಗಿದೆ” ಎಂದು ಅವರು ಹೇಳುತ್ತಾರೆ. ಆದರೆ ಎಲ್ಲಾ ಚೆನ್ನಾಗಿಲ್ಲ.


ಪ್ರವಾದಿಗಳು ಮತ್ತು ಯಾಜಕರು ನನ್ನ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಬಂತೆ ಚಿಕಿತ್ಸೆ ಮಾಡುತ್ತಾರೆ. ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನ್ನುತ್ತಾರೆ.


ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ.


ಇದು ನೆರವೇರುವುದು, ಯಾಕೆಂದರೆ ದೇವರು ದಂಡನೆಗಾಗಿ ಸಮಯವನ್ನು ಆರಿಸಿಕೊಂಡಿದ್ದಾನೆ. ಜನರು ಚೀಯೋನಿನಲ್ಲಿ ಮಾಡಿದ ಕಾರ್ಯಗಳಿಗೆ ದಂಡನೆಯನ್ನು ಅನುಭವಿಸುವುದಕ್ಕಾಗಿ ಆತನು ಒಂದು ವರ್ಷವನ್ನು ಆರಿಸಿಕೊಂಡಿದ್ದಾನೆ.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


“ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದುಕೊಂಡದ್ದನ್ನು ನಾನು ನೋಡಿದ್ದೇನೆ. ಅವರು ಬಾಳ್ ದೇವತೆಗೋಸ್ಕರ ಆವೇಶದಿಂದ ಪ್ರವಾದಿಸಿದ್ದನ್ನು ನಾನು ಕಂಡಿದ್ದೇನೆ. ಆ ಪ್ರವಾದಿಗಳು ಇಸ್ರೇಲಿನ ಜನರನ್ನು ಯೆಹೋವನಿಂದ ದೂರ ತೆಗೆದುಕೊಂಡು ಹೋಗಿದ್ದಾರೆ.


ಹೌದು, ಬಾಬಿಲೋನಿನ ಜನರು ಅನೇಕ ಜನಾಂಗಗಳ ಮತ್ತು ಅನೇಕ ಮಹಾರಾಜರ ಸೇವೆ ಮಾಡಬೇಕಾಗುವುದು. ಅವರು ಮಾಡಲಿರುವ ದುಷ್ಕೃತ್ಯಗಳಿಗೆಲ್ಲ ತಕ್ಕ ಶಿಕ್ಷೆಯನ್ನು ನಾನು ಅವರಿಗೆ ಕೊಡುವೆನು.”


ಅವರಿಗೆ ನಾನು ಕನಿಕರ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದಿಲ್ಲ. ಅವರು ತಾವೇ ಇದನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅವರು ಹೊಂದಲು ಯೋಗ್ಯವಾದ ಶಿಕ್ಷೆಯನ್ನೇ ನಾನು ಕೊಡುತ್ತಿರುವುದು.”


ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.


ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ.


ಶಿಕ್ಷೆಯು ವಿಧಿಸಲ್ಪಡುವಾಗ ಎಫ್ರಾಯೀಮ್ ಬರಿದಾಗುವದು. ಇದು ಖಂಡಿತವಾಗಿಯೂ ನೆರವೇರುವದೆಂದು ಯೆಹೋವನಾದ ನಾನು ಇಸ್ರೇಲ್ ಕುಟುಂಬಗಳಿಗೆ ತಿಳಿಸುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು