Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:8 - ಪರಿಶುದ್ದ ಬೈಬಲ್‌

8 ದೇವರೂ ಪ್ರವಾದಿಯೂ ಕಾವಲುಗಾರರಂತೆ ಎಫ್ರಾಯೀಮನ್ನು ಕಾಪಾಡುತ್ತಿದ್ದಾರೆ. ಆದರೆ ದಾರಿಯಲ್ಲಿ ಅನೇಕ ಉರುಲುಗಳಿವೆ. ಜನರು ಪ್ರವಾದಿಯನ್ನು ಹಗೆ ಮಾಡುತ್ತಾರೆ. ದೇವರ ಆಲಯದಲ್ಲಿಯೂ ಅವನನ್ನು ಹಗೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಫ್ರಾಯೀಮು ನನ್ನ ದೇವರ ವಿಷಯವಾಗಿ ಹೊಂಚು ಹಾಕುತ್ತದೆ; ಪ್ರವಾದಿಯ ಮಾರ್ಗಗಳಲ್ಲೆಲ್ಲಾ ಬೇಟೆಗಾರನ ಬಲೆಯು ಒಡ್ಡಿದೆ, ಅವನ ದೇವರ ಆಲಯದಲ್ಲಿಯೂ ಶತ್ರುವಿನ ವಿರೋಧವು ಕಾದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಎಫ್ರಯಿಮನ ದೇವಜನರಿಗೆ ಪ್ರವಾದಿಯೇ ಕಾವಲುಗಾರ. ಆದರೂ ಅವನ ಹಾದಿಯಲ್ಲೆಲ್ಲ ಬೇಟೆಯ ಬಲೆ ಒಡ್ಡಲಾಗಿದೆ. ದೇವರ ಆಲಯದಲ್ಲೂ ಅವನಿಗೆ ಹಗೆತನ ಕಾದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎಫ್ರಾಯೀಮು ನನ್ನ ದೇವರ ವಿಷಯವಾಗಿ ಹೊಂಚುಹಾಕುತ್ತದೆ; ಪ್ರವಾದಿಯ ಮಾರ್ಗಗಳಲ್ಲೆಲ್ಲಾ ಬೇಟೆಯ ಬಲೆಯು ಒಡ್ಡಿದೆ, ಅವನ ದೇವರ ಆಲಯದಲ್ಲಿಯೂ ಶತ್ರುವಿರೋಧವು ಕಾದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನ್ನ ದೇವರೊಂದಿಗೆ ಪ್ರವಾದಿಯು ಎಫ್ರಾಯೀಮನ ಮೇಲೆ ಕಾವಲುಗಾರನಾಗಿದ್ದಾನೆ, ಆದರೂ ಅವನ ಮಾರ್ಗಗಳಲ್ಲೆಲ್ಲ ಬೇಟೆಯ ಬಲೆ ಒಡ್ಡಲಾಗಿದೆ ಮತ್ತು ಅವನ ದೇವರ ಮನೆಯಲ್ಲಿ ದ್ವೇಷವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:8
42 ತಿಳಿವುಗಳ ಹೋಲಿಕೆ  

“ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.


“ನರಪುತ್ರನೇ, ನಾನು ನಿನ್ನನ್ನು ಇಸ್ರೇಲರಿಗೆ ಕಾವಲುಗಾರನನ್ನಾಗಿ ಮಾಡಿದ್ದೇನೆ. ನಾನು ಅವರಿಗೆ ಸಂಭವಿಸುವ ಕೆಟ್ಟ ವಿಷಯಗಳನ್ನು ನಿನಗೆ ಹೇಳುತ್ತಿದ್ದೇನೆ. ಮತ್ತು ನೀನು ನನ್ನ ಪರವಾಗಿ ಅವರನ್ನು ಎಚ್ಚರಿಸು.


ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ. ಈಗ ನೀನು ಶಿಕ್ಷಿಸಲ್ಪಡುವೆ. ನೀನು ಈಗ ಗಲಿಬಿಲಿಗೆ ಒಳಗಾಗುವೆ!


ಜೆರುಸಲೇಮೇ, ನಿನ್ನ ಗೋಡೆಯ ಮೇಲೆ ನಾನು ಕಾವಲುಗಾರರನ್ನು ಇಟ್ಟಿರುತ್ತೇನೆ. ಆ ಕಾವಲುಗಾರರು ಮೌನವಾಗಿರುವದಿಲ್ಲ. ಅವರು ಹಗಲಿರುಳು ಪ್ರಾರ್ಥಿಸುತ್ತಾ ಇರುವರು. ಕಾವಲುಗಾರರೇ, ನೀವು ಯೆಹೋವನಿಗೆ ಪ್ರಾರ್ಥಿಸುತ್ತಾ ಇರಬೇಕು. ಆತನ ವಾಗ್ದಾನಗಳನ್ನು ನೀವು ಆತನ ನೆನಪಿಗೆ ತರಬೇಕು. ಪ್ರಾರ್ಥಿಸುವುದನ್ನು ಎಂದಿಗೂ ನಿಲ್ಲಿಸಬೇಡಿ.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.


ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಆ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ.


“ಈಗ, ನರಪುತ್ರನೇ, ನಾನು ನಿನ್ನನ್ನು ಇಸ್ರೇಲಿನ ಕಾವಲುಗಾರನನ್ನಾಗಿ ಆರಿಸಿದ್ದೇನೆ. ನನ್ನ ಬಾಯಿಂದ ನೀನು ಸಂದೇಶವನ್ನು ಕೇಳಿದಾಗ, ನನ್ನ ಪರವಾಗಿ ನೀನು ಜನರನ್ನು ಎಚ್ಚರಿಸಬೇಕು.


ಜೆರುಸಲೇಮಿನ ಪ್ರವಾದಿಗಳು ಪಾಪ ಮಾಡಿದ್ದರಿಂದಲೇ ಇದು ಸಂಭವಿಸಿತು. ಜೆರುಸಲೇಮಿನ ಯಾಜಕರು ದುಷ್ಕೃತ್ಯಗಳನ್ನು ಮಾಡಿದ್ದದರಿಂದಲೇ ಇದು ಸಂಭವಿಸಿತು. ಆ ಜನರು ಜೆರುಸಲೇಮ್ ಪಟ್ಟಣದಲ್ಲಿ ಒಳ್ಳೆಯ ಜನರ ರಕ್ತವನ್ನು ಸುರಿಸಿದ್ದರು.


ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು. ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ. ಅವರು ನಿನ್ನ ಪಾಪಕೃತ್ಯಗಳನ್ನು ಬಹಿರಂಗಪಡಿಸಲಿಲ್ಲ. ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ. ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು. ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.


ಒಂದು ಕಾಲ ಬರುವುದು, ಆಗ ಕಾವಲುಗಾರರು, ‘ಬನ್ನಿ, ನಮ್ಮ ದೇವರಾದ ಯೆಹೋವನನ್ನು ಆರಾಧಿಸಲು ಚೀಯೋನಿಗೆ ಹೋಗೋಣ’ ಎಂದು ಕೂಗುವರು. ಎಫ್ರಾಯೀಮಿನ ಬೆಟ್ಟಪ್ರದೇಶದ ಕಾವಲುಗಾರರು ಸಹ ಹೀಗೆಯೇ ಕೂಗುವರು.”


ಆಗ ನಾನು ಯೆಹೋವನಿಗೆ, “ನನ್ನ ಒಡೆಯನಾದ ಯೆಹೋವನೇ, ಪ್ರವಾದಿಗಳು ಜನರಿಗೆ ಬೇರೆಯದನ್ನೇ ಹೇಳಿದರು. ಅವರು ಯೆಹೂದದ ಜನರಿಗೆ, ‘ನೀವು ಶತ್ರುವಿನ ಖಡ್ಗಕ್ಕೆ ತುತ್ತಾಗುವದಿಲ್ಲ. ನೀವೆಂದಿಗೂ ಹಸಿವಿನಿಂದ ಬಳಲುವದಿಲ್ಲ, ಯೆಹೋವನು ಈ ದೇಶದಲ್ಲಿ ನಿಮಗೆ ನೆಮ್ಮದಿಯನ್ನು ದಯಪಾಲಿಸುವನು’ ಎಂದು ಹೇಳುತ್ತಿದ್ದರು” ಎಂದೆನು.


ನಾನು ನಿಮ್ಮನ್ನು ನೋಡಿಕೊಳ್ಳುವುದಕ್ಕೆ ಕಾವಲುಗಾರರನ್ನು ನೇಮಿಸಿದೆ. ನಾನು ಅವರಿಗೆ ‘ಯುದ್ಧದ ತುತ್ತೂರಿಯ ನಾದವನ್ನು ಕೇಳಿರಿ’ ಎಂದು ಹೇಳಿದೆ. ಆದರೆ ಅವರು ‘ನಾವು ಕೇಳುವುದಿಲ್ಲ’ ಅಂದರು.


ಪ್ರವಾದಿಗಳು ಮತ್ತು ಯಾಜಕರು ನನ್ನ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಬಂತೆ ಚಿಕಿತ್ಸೆ ಮಾಡುತ್ತಾರೆ. ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನ್ನುತ್ತಾರೆ.


ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರನ್ನು ಕಂಡು, “ನನ್ನ ಪ್ರಿಯನನ್ನು ನೋಡಿದಿರಾ?” ಎಂದು ಕೇಳಿದೆನು.


ಇಸ್ರೇಲರಲ್ಲಿ ಕೆಲವರು ಸತ್ತವನೊಬ್ಬನನ್ನು ಸಮಾಧಿ ಮಾಡುತ್ತಿರುವಾಗ ಸೈನಿಕರ ಆ ಗುಂಪನ್ನು ನೋಡಿ ಸತ್ತವನನ್ನು ಎಲೀಷನ ಸಮಾಧಿಯಲ್ಲಿ ಎಸೆದು ಓಡಿಹೋದರು. ಎಲೀಷನ ಮೂಳೆಗಳನ್ನು ಸತ್ತವನು ಸ್ಪರ್ಶಿಸಿದ ತಕ್ಷಣ, ಸತ್ತ ಮನುಷ್ಯನಿಗೆ ಜೀವ ಬಂದು, ಅವನು ತನ್ನ ಕಾಲುಗಳ ಮೇಲೆ ನಿಂತುಕೊಂಡನು!


ಆದರೆ ಆ ಅಧಿಕಾರಿಯು ದೇವಮನುಷ್ಯನಿಗೆ, “ಯೆಹೋವನು ಪರಲೋಕಕ್ಕೆ ಕಿಟಿಕಿಗಳನ್ನು ಮಾಡಿಸಿದರೂ ಇದು ಸಂಭವಿಸುವುದಿಲ್ಲ!” ಎಂದು ಉತ್ತರಿಸಿದನು. ಎಲೀಷನು ಆ ಅಧಿಕಾರಿಗೆ, “ನೀನು ನಿನ್ನ ಸ್ವಂತ ಕಣ್ಣುಗಳಿಂದಲೇ ಇದನ್ನು ನೋಡುವೆ. ಆದರೆ ಆ ಆಹಾರದಲ್ಲಿ ಯಾವುದನ್ನೂ ನೀನು ತಿನ್ನುವುದಿಲ್ಲ” ಎಂದು ಹೇಳಿದ್ದನು.


ಆಗ ರಾಜನಿಗೆ ಆಪ್ತನಾಗಿದ್ದ ಅಧಿಕಾರಿಯು ದೇವಮನುಷ್ಯನಿಗೆ, “ಯೆಹೋವನು ಪರಲೋಕಕ್ಕೆ ಕಿಟಕಿಗಳನ್ನು ಮಾಡಿಸಿದರೂ ಇದು ಸಂಭವಿಸುವುದಿಲ್ಲ!” ಎಂದು ಉತ್ತರಿಸಿದನು. ಎಲೀಷನು, “ನೀನು ನಿನ್ನ ಸ್ವಂತ ಕಣ್ಣುಗಳಿಂದಲೇ ಇದನ್ನು ನೋಡುವೆ. ಆದರೆ ಆ ಆಹಾರದಲ್ಲಿ ಯಾವುದನ್ನೂ ನೀನು ತಿನ್ನುವುದಿಲ್ಲ” ಎಂದನು.


ಈಗ, ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ನಾಮಾನನ ರೋಗವು ಹಿಡಿದುಕೊಳ್ಳುವುದು. ನಿನಗೆ ಎಂದೆಂದಿಗೂ ಕುಷ್ಠರೋಗವಿರುವುದು!” ಎಂದು ಹೇಳಿದನು. ಗೇಹಜಿಯು ಎಲೀಷನನ್ನು ಬಿಟ್ಟುಹೋದಾಗ, ಗೇಹಜಿಯ ಚರ್ಮವು ಮಂಜುಗಡ್ಡೆಯಂತೆ ಬಿಳುಪಾಯಿತು! ಗೇಹಜಿಯು ಕುಷ್ಠರೋಗ ಪೀಡಿತನಾದನು.


ದೇವಮನುಷ್ಯನು (ಎಲೀಷನು) ಹೇಳಿದಂತೆಯೇ ನಾಮಾನನು ಜೋರ್ಡನ್ ನದಿಯಲ್ಲಿ ಇಳಿದು ಏಳುಸಾರಿ ಮುಳುಗಿ ಮೇಲೆದ್ದನು. ಆಗ ನಾಮಾನನು ಸಂಪೂರ್ಣ ಶುದ್ಧನಾದನು; ಅವನ ಚರ್ಮವು ಮಗುವಿನ ಚರ್ಮದಂತೆ ಕೋಮಲವಾಯಿತು.


ಎಲೀಷನ ಸೇವಕನು, “ಏನು? ಇಲ್ಲಿ ನೂರು ಮಂದಿ ಜನರಿದ್ದಾರೆ. ಈ ಆಹಾರವನ್ನು ಇಲ್ಲಿರುವ ಜನರಿಗೆಲ್ಲ ಹೇಗೆ ಕೊಡಲಿ?” ಎಂದನು. ಆದರೆ ಎಲೀಷನು, “ಜನರಿಗೆ ತಿನ್ನಲು ಆಹಾರವನ್ನು ಕೊಡು, ಯೆಹೋವನು ಹೀಗೆನ್ನುವನು: ‘ಅವರು ತಿಂದರೂ ಆಹಾರವು ಉಳಿಯುತ್ತದೆ’” ಎಂದು ಹೇಳಿದನು.


ಆದರೆ ಎಲೀಷನು, “ಸ್ವಲ್ಪ ಹಿಟ್ಟನ್ನು ತನ್ನಿ” ಎಂದು ಹೇಳಿದನು. ಅವರು ಎಲೀಷನ ಬಳಿಗೆ ಹಿಟ್ಟನ್ನು ತಂದರು. ಅವನು ಅದನ್ನು ಪಾತ್ರೆಯೊಳಗೆ ಹಾಕಿದನು. ನಂತರ ಎಲೀಷನು, “ಜನರಿಗೆ ಸಾರನ್ನು ಬಡಿಸಿ, ಅವರು ಊಟಮಾಡಲಿ” ಎಂದು ಹೇಳಿದನು. ಆಗ ಆ ಸಾರಿನಲ್ಲಿ ಯಾವ ದೋಷವೂ ಇರಲಿಲ್ಲ.


ನಂತರ ಎಲೀಷನು ನೆಲದಿಂದ ನೀರು ಹರಿಯುತ್ತಿದ್ದ ಸ್ಥಳಕ್ಕೆ ಹೋದನು. ಎಲೀಷನು ಉಪ್ಪನ್ನು ನೀರಿನಲ್ಲಿ ಎಸೆದು, “‘ನಾನು ಈ ನೀರನ್ನು ಶುಚಿಗೊಳಿಸಿದ್ದೇನೆ! ಇಲ್ಲಿಂದಾಚೆಗೆ ಈ ನೀರು ಯಾರಿಗೂ ಸಾವನ್ನು ಮತ್ತು ಬಂಜೆತನವನ್ನು ಉಂಟುಮಾಡುವುದಿಲ್ಲ ಮತ್ತು ಈ ಭೂಮಿಯಲ್ಲಿ ಬೆಳೆಗಳು ಬೆಳೆಯುತ್ತವೆ’ ಎಂದು ಯೆಹೋವನು ಹೇಳುತ್ತಾನೆ” ಎಂದನು.


ಎಲೀಷನು ನೀರನ್ನು ಹೊಡೆದಾಗ, ನೀರು ಎರಡು ಭಾಗವಾಗಿ ಬಲಗಡೆಯಲ್ಲೂ ಎಡಗಡೆಯಲ್ಲೂ ನಿಂತುಕೊಂಡಿತು! ಎಲೀಷನು ನದಿಯನ್ನು ದಾಟಿದನು.


ಮೀಕಾಯೆಹು ಗಟ್ಟಿಯಾದ ಧ್ವನಿಯಲ್ಲಿ, “ನಾನು ಏನು ಹೇಳುತ್ತೇನೆಂಬುದನ್ನು ಜನರೆಲ್ಲರೂ ಕೇಳಿರಿ! ರಾಜನಾದ ಅಹಾಬನೇ, ನೀನು ಈ ಹೋರಾಟದಿಂದ ಜೀವಸಹಿತ ಮನೆಗೆ ಬಂದರೆ, ಯೆಹೋವನು ನನ್ನ ಮೂಲಕ ಮಾತನಾಡಿಲ್ಲ” ಎಂದು ಹೇಳಿದನು.


ಯೆಹೋವನು, ‘ರಾಜನಾದ ಅಹಾಬನನ್ನು ನೀನು ಹೇಗೆ ಪ್ರೇರೇಪಿಸುವೆ?’ ಎಂದು ಉತ್ತರಿಸಿದಾಗ, ದೂತನು, ‘ಅಹಾಬನ ಎಲ್ಲಾ ಪ್ರವಾದಿಗಳು ಗಲಿಬಿಲಿಗೊಳ್ಳುವಂತೆ ಮಾಡುತ್ತೇನೆ. ರಾಜನಾದ ಅಹಾಬನಿಗೆ ಪ್ರವಾದಿಗಳು ಸುಳ್ಳುಹೇಳುವಂತೆ ನಾನು ಮಾಡುತ್ತೇನೆ. ಪ್ರವಾದಿಗಳ ಸಂದೇಶವೆಲ್ಲವೂ ಸುಳ್ಳಾಗಿರುವುದು’ ಎಂದನು. ಆದ್ದರಿಂದ ಯೆಹೋವನು, ‘ಸರಿ, ಹೋಗಿ ರಾಜನಾದ ಅಹಾಬನನ್ನು ಪ್ರೇರೇಪಿಸು. ನೀನು ಸಫಲನಾಗುವೆ’” ಎಂದು ಹೇಳಿದನು.


“ನಾನಾಡುವ ಸುಳ್ಳು ದೇವರ ಸತ್ಯವನ್ನು ತೋರಿಸುವುದಾದರೆ ನನ್ನ ಸುಳ್ಳಿನಿಂದ ದೇವರಿಗೆ ನಿಜವಾಗಿಯೂ ಮಹಿಮೆಯಾಗುತ್ತದೆ. ಹೀಗಿರಲು ನನಗೆ ‘ಪಾಪಿ’ ಎಂಬ ತೀರ್ಪಾಗುವುದೇಕೆ?” ಎಂದು ಒಬ್ಬನು ಕೇಳಬಹುದು.


ಪ್ರವಾದಿಗಳಲ್ಲಿ ಚಿದ್ಕೀಯ ಎಂಬ ಹೆಸರಿನವನೊಬ್ಬನಿದ್ದನು. ಅವನು ಕೆನಾನನ ಮಗ. ಚಿದ್ಕೀಯನು ಕೆಲವು ಕಬ್ಬಿಣದ ಕೊಂಬುಗಳನ್ನು ಮಾಡಿಸಿದ್ದನು. ಆಗ ಅವನು ಅಹಾಬನಿಗೆ, “ಯೆಹೋವನು ಹೀಗೆನ್ನುವನು: ‘ಅರಾಮ್ಯರ ಸೈನ್ಯದ ವಿರುದ್ಧ ಹೋರಾಡಲು ನೀನು ಈ ಕೊಂಬುಗಳನ್ನು ಬಳಸುವೆ. ನೀನು ಅವರನ್ನು ಸೋಲಿಸುವೆ ಮತ್ತು ನಾಶಗೊಳಿಸುವೆ’” ಎಂದು ಹೇಳಿದನು.


ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು.


ಈಗ ಕರ್ಮೆಲ್ ಬೆಟ್ಟದ ಮೇಲೆ ನನ್ನನ್ನು ಭೇಟಿಮಾಡಲು ಎಲ್ಲಾ ಇಸ್ರೇಲರಿಗೆ ತಿಳಿಸು. ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನು ಆ ಸ್ಥಳಕ್ಕೆ ಕರೆದುಕೊಂಡು ಬಾ. ಸುಳ್ಳುದೇವತೆಯಾದ ಅಶೇರಳ ನಾನೂರು ಮಂದಿ ಪ್ರವಾದಿಗಳನ್ನೂ ಕರೆದುಕೊಂಡು ಬಾ. ಆ ಪ್ರವಾದಿಗಳನ್ನು ರಾಣಿಯಾದ ಈಜೆಬೆಲಳು ಪೋಷಣೆ ಮಾಡುತ್ತಿದ್ದಾಳೆ” ಎಂದು ಹೇಳಿದನು.


ಬರಗಾಲದ ಮೂರನೆ ವರ್ಷದಲ್ಲಿ ಯೆಹೋವನು ಎಲೀಯನಿಗೆ, “ಹೋಗಿ, ರಾಜನಾದ ಅಹಾಬನನ್ನು ಭೇಟಿಮಾಡು. ನಾನು ಬೇಗ ಮಳೆಯನ್ನು ಸುರಿಸುತ್ತೇನೆ” ಎಂದು ಹೇಳಿದನು.


ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ನಾವು ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದ್ದೇವೆ. ಬಲೆಯು ಹರಿದುಹೋದದ್ದರಿಂದ ನಾವು ತಪ್ಪಿಸಿಕೊಂಡೆವು.


ಮನುಷ್ಯನಿಗೆ ಮುಂದೆ ಏನಾಗುವುದೋ ತಿಳಿಯದು. ಬಲೆಯಲ್ಲಿ ಸಿಕ್ಕಿಕೊಂಡಿರುವ ಮೀನಿನಂತೆಯೂ ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯಂತೆಯೂ ಮನುಷ್ಯನು ತನಗೆ ಸಂಭವಿಸುವ ಕೇಡುಗಳಿಗೆ ಗುರಿಯಾಗುವನು.


“ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದುಕೊಂಡದ್ದನ್ನು ನಾನು ನೋಡಿದ್ದೇನೆ. ಅವರು ಬಾಳ್ ದೇವತೆಗೋಸ್ಕರ ಆವೇಶದಿಂದ ಪ್ರವಾದಿಸಿದ್ದನ್ನು ನಾನು ಕಂಡಿದ್ದೇನೆ. ಆ ಪ್ರವಾದಿಗಳು ಇಸ್ರೇಲಿನ ಜನರನ್ನು ಯೆಹೋವನಿಂದ ದೂರ ತೆಗೆದುಕೊಂಡು ಹೋಗಿದ್ದಾರೆ.


ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”


ಗಿಬ್ಯದ ಕಾಲದಂತೆ ಇಸ್ರೇಲರು ನಾಶನದ ಕಡೆಗೆ ಆಳವಾಗಿ ಇಳಿದಿದ್ದಾರೆ. ಯೆಹೋವನು ಇಸ್ರೇಲರ ಪಾಪಗಳನ್ನು ತನ್ನ ನೆನಪಿಗೆ ತಂದುಕೊಂಡು ಅವರನ್ನು ಶಿಕ್ಷಿಸುವನು.


ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು